ಕಲ್ಯಾಣಸಿರಿ ವಿಶೇಷ

ವಸತಿ ನಿಲಯಕ್ಕೆ ದಾರಿ ಇಲ್ಲದೆ ಸಂಕಷ್ಟಕ್ಕೆ ಸಿಲುಕಿದವಿದ್ಯಾರ್ಥಿಗಳು: ಶರಣಬಸಪ್ಪ ದಾನಕೈ ಎಸ್.ಡಿ.ಎಂ.ಸಿ ರಾಜ್ಯ ನಿರ್ದೇಶಕ ಒತ್ತಾಯ

Students facing hardship without access to hostel: Sharanabasappa Danakai, SDMC State Director urges

ಯಲಬುರ್ಗಾ: ಪಟ್ಟಣದಲ್ಲಿ ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯ, ಸಾಯಿಬಾಬಾ ದೇವಸ್ಥಾನದ ಮುಂದೆ ಇರುವ, ರೈಲ್ವೆ ಬ್ರೀಜ್ ಮುಂದೆ ಕಾಣುವ ಯಲಬುರ್ಗಾದಿಂದ ಸಂಗನಾಳ ಮಾರ್ಗದಲ್ಲಿ , ಎರಡು ಕಿಲೋಮೀಟರ್ ಅಂತರದಲ್ಲಿರುವ ವಸತಿ ನಿಲಯಕ್ಕೆ ಈ ಮೊದಲು ವಿದ್ಯಾರ್ಥಿಗಳು ಹೋಗುತ್ತಿದ್ದರು ಈಗ ರೈಲ್ವೆ ಬ್ರಿಜ್ ಆದ ನಂತರ ಸಮಸ್ಯೆ ಉದ್ಭವವಾಗಿದೆ,

ಭೂ ಮಾಲೀಕರಾದ ಪಟ್ಟಣ ಪಂಚಾಯತ ಅಧ್ಯಕ್ಷ ಅಂದಯ್ಯ ಕಳ್ಳಿಮಠ ಇವರು ರೈಲ್ವೆ ಇಲಾಖೆಯಿಂದ ನನಗೆ ಯಾವುದೇ ಪರಿಹಾರ ಬಂದಿರುವುದಿಲ್ಲವೆಂದು ವಸತಿ ನಿಲಯಕ್ಕೆ ಹೋಗುವ ದಾರಿಗೆ ಒಡ್ಡು ಹಾಕಿ ತಡೆ ಒಡ್ಡಿದ್ದಾರೆ, ಇದರಿಂದ ವಿದ್ಯಾರ್ಥಿಗಳಿಗೆ ಹಾಗೂ ವಸತಿ ನಿಲಯಕ್ಕೆ ಬೇಕಾಗಿರುವ ಸಾಮಗ್ರಿಗಳನ್ನು ಇತರ ಮೂಲಭೂತ ಸೌಕರ್ಯಗಳನ್ನು ಒದಗಿಸಿಕೊಳ್ಳುವುದಕ್ಕೆ ತೊಂದರೆಯಾಗುತ್ತದೆ ಈ ಸಮಸ್ಯೆಗೆ ಸಂಬಂಧಿಸಿದ ಅಧಿಕಾರಿಗಳು ಸ್ಪಂದಿಸಬೇಕು ಎಂದು ಎಸ್‌ಡಿಎಂಸಿ ರಾಜ್ಯ ನಿರ್ದೇಶಕ ಶರಣಬಸಪ್ಪ ದಾನಕೈ ಅವರು ಒತ್ತಾಯಿಸಿದ್ದಾರೆ . ದಾರಿ ಸರಿಪಡಿಸುವ ವಿಚಾರವಾಗಿ ಮೌಖಿಕವಾಗಿ ಪಟ್ಟಣದ ಮುಖ್ಯಾಧಿಕಾರಿ ಅವರ ಗಮನಕ್ಕೆ ಅಲ್ಪಸಂಖ್ಯಾತರ ಇಲಾಖೆಯ ವಿಸ್ತರಣಾಧಿಕಾರಿ ಅವರು ಮೌಖಿಕವಾಗಿ ಹಾಗು ಲಿಖಿತವಾಗಿ ತಿಳಿಸಿದ್ದಾರೆ ಮತ್ತು ಯಲಬುರ್ಗಾದ ಪಿ.ಎಸ್.ಐ ಹಾಗು ಸಿ.ಪಿ.ಐ ಅವರಿಗೂ ಮನವಿಯನ್ನು ವಿದ್ಯಾರ್ಥಿಗಳ ಮೂಲಕ ಕೊಟ್ಟಿದ್ದಾರೆ ,ಮನವಿಗೆ ಸ್ಪಂದಿಸಿ ಯಲಬುರ್ಗಾದ ಪೋಲಿಸ್ ಅಧಿಕಾರಿಗಳು ದಾರಿ ಸರಿಪಡಿಸಿದ್ದಾರೆ ಆದರೆ ಹೊಲದ ಮಾಲಿಕ ಮತ್ತೆ ದಾರಿಯನ್ನು ಮುಚ್ಚಿದ್ದಾನೆ, ಇದರಿಂದ ವಸತಿ ನಿಲಯಕ್ಕೆ ಹೊಗುವ ಪ್ರತಿಯೋಬ್ಬರಿಗೂ ತೊಂದರೆಯಾಗುತ್ತದೆ, ಆದರೆ ಹೊಲದ ಮಾಲೀಕ ನನಗೆ ಪರಿಹಾರ ಬಂದ ಮೇಲೆ ಒಡ್ಡು ತಗೆಯುವದಾಗಿ ತಿಳಿಸಿದ್ದಾನೆ, ಒಟ್ಟಿನಲ್ಲಿ ಗಂಡ ಹೆಂಡರ ಜಗಳದಲ್ಲಿ ಕೂಸು ಗಾಸಿಯಾಗಿತು ಎನ್ನುವ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಗಂಭೀರ ವಿಷಯದ ಬಗ್ಗೆ ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಅವರು ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಮತ್ತು ಜಿಲ್ಲಾಧಿಕಾರಿಯವರು ವಿದ್ಯಾರ್ಥಿಯವರಿಗೆ ಅನುಕೂಲ ವಾಗುವುದಕ್ಕೆ ಕ್ರಮ ತೆಗೆದುಕೊಳ್ಳಬೇಕೆಂದು ಎಸ್. ಡಿ.ಎಂ ಸಿ ರಾಜ್ಯ ನಿರ್ದೇಶಕ ಶರಣಬಸಪ್ಪ ದಾನಕೈ ಅವರು ಸಂಬಂಧಿಸಿದ ಅಧಿಕಾರಿಗಳನ್ನು ಒತ್ತಾಯಿಸಿದ್ದಾರೆ.

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

17 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

17 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

17 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

17 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

17 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

18 hours ago