As the new district president of Bharatiya Praja Sena Narasimhalu Chinthalakunta appointed Pampapati Siddapur
ಗಂಗಾವತಿ: ಭಾರತೀಯ ಪ್ರಜಾ ಸೇನೆಯ ಸಂಸ್ಥಾಪಕರು ಮಂಜುನಾಥ್ ಆರ್., ರಾಜ್ಯ ಅಧ್ಯಕ್ಷರಾದ ಟಿ ವೇಣುಗೋಪಾಲ್ ಅವರ ಆದೇಶದ ಮೇರೆಗೆ ಜೂನ್-೦೪ ಬುಧವಾರ ನಗರದ ಹಳೆ ಪ್ರವಾಸಿ ಮಂದಿರದಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಂಪಾಪತಿ ಸಿದ್ದಾಪುರ, ವಿಭಾಗೀಯ ಕಾರ್ಯದರ್ಶಿ ಹುಲುಗಪ್ಪ ಕೊಜ್ಜಿಯವರ ನೇತೃತ್ವದಲ್ಲಿ ಕೊಪ್ಪಳ ಜಿಲ್ಲಾಧ್ಯಕ್ಷರನ್ನಾಗಿ ನರಸಿಂಹಲು ಚಿಂತಲಕುAಟ ಅವರನ್ನು ನೇಮಕ ಮಾಡಲಾಗಿದೆ.
ನೇಮಕಾತಿ ಆದೇಶ ಪತ್ರ ನೀಡಿ ಮಾತನಾಡಿದ ಪಂಪಾಪತಿ ಸಿದ್ದಾಪುರ ಅವರು, ಕೊಪ್ಪಳ ಜಿಲ್ಲಾ ಸಂಘಟನೆಯ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಂಡು, ಬಡವರ, ದೀನ ದಲಿತರ, ಅನ್ಯಾಯಕ್ಕೊಳಗಾದವರ, ನೊಂದವರ, ಶೋಷಿತರ ಪರ ಸಾಮಾಜಿಕ ಹೋರಾಟಗಳನ್ನು ಮಾಡುತ್ತಾ ಸಂಘಟನೆಯ ಶಕ್ತಿ ಮತ್ತು ಕೀರ್ತಿಯನ್ನು ಹೆಚ್ಚಿಸುವಂತೆ ಆದೇಶಿಸಿದರು.
ಇದೇ ಸಂದರ್ಭದಲ್ಲಿ ಸಂಘಟನೆಯ ವಿಭಾಗಿಯ ಸಹಕಾರ್ಯದರ್ಶಿ ಅಬೂಬಕರ್, ವಿಭಾಗೀಯ ಸಂಘಟನಾ ಕಾರ್ಯದರ್ಶಿ ಸೋಮಪ್ಪ ಅಕ್ಕಿರೊಟ್ಟಿ, ಕೊಪ್ಪಳ ಜಿಲ್ಲಾ ಗೌರವಾಧ್ಯಕ್ಷರಾದ ಹನುಮಂತಪ್ಪ ಹೊಸಪೇಟೆ, ಜಿಲ್ಲಾ ಸಹಕಾರ್ಯದರ್ಶಿ ವೆಂಕಟೇಶ್, ಜಿಲ್ಲಾ ಯುವ ಘಟಕ ಉಪಾಧ್ಯಕ್ಷ ಅಯ್ಯಪ್ಪ, ಗಂಗಾವತಿ ತಾಲೂಕ ಅಧ್ಯಕ್ಷರು ಕೃಷ್ಣ ಹೊಸಳ್ಳಿ, ಗಂಗಾವತಿ ತಾಲೂಕು ಸಂಘಟನಾ ಕಾರ್ಯದರ್ಶಿ ಪರಶುರಾಮ್ ಅಕ್ಕಿರೊಟ್ಟಿ ಸೇರಿದಂತೆ ಇನ್ನಿತರ ಪದಾಧಿಕಾರಿಗಳು ಭಾಗವಹಿಸಿದ್ದರು.
ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…
ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…
ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…
ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್ ನಲ್ಲಿ…
ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…
ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…