11 killed in stampede near Chinnaswamy Stadium in Bengaluru: Bhardwaj

ಗಂಗಾವತಿ: ಜೂನ್-೦೪ ಬುಧವಾರ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್.ಸಿ.ಬಿ ತಂಡದ ವಿಜಯೋತ್ಸವ ಆಚರಣೆ ಸಂಬAಧವಾಗಿ ಲಕ್ಷಾಂತರ ಜನ ಅಭಿಮಾನಿಗಳು ಒಟ್ಟಾಗಿ ಸೇರಿ ಉಂಟಾದ ಕಾಲ್ತುಳಿತಕ್ಕೆ ೧೧ ಜನ ಬಲಿಯಾಗಿರುವುದು ವಿಷಾದನೀಯ ಎಂದು ಕ್ರಾಂತಿಚಕ್ರ ಬಳಗದ ರಾಜ್ಯಾಧ್ಯಕ್ಷರಾದ ಭಾರಧ್ವಾಜ್ ಸಂತಾಪ ಸೂಚಿಸಿದರು.
ಈ ದುರ್ಘಟನೆಗೆ ಆರ್.ಸಿ.ಬಿ ತಂಡದ ಫ್ರಾಂಚೈಸಿಯಾದ ಯುನೈಟೆಡ್ ಸ್ಪಿರಿಟ್ಸ್ ಲಿಮಿಟೆಡ್ ಕಂಪನಿಯೇ ಹೊಣೆಯಾಗಿದೆ. ಕೂಡಲೇ ಸರ್ಕಾರ ಸದರಿ ಕಂಪನಿ ಮಾಲಿಕರ ಮೇಲೆ ಕೊಲೆ ಪ್ರಕರಣ ದಾಖಲಿಸಿ ಶಿಕ್ಷೆಗೆ ಗುರಿಪಡಿಸಬೇಕು. ಮೃತರಾದವರಿಗೆ ಈಗಾಗಲೇ ಸರ್ಕಾರ ತಲಾ ೧೦ ಲಕ್ಷಗಳ ಪರಿಹಾರ ಘೋಷಿಸಿದ್ದು, ಸದರಿ ಪರಿಹಾರ ಮೃತರ ಕುಟುಂಬಕ್ಕೆ ಸಾಕಾಗುವುದಿಲ್ಲ. ಆರ್.ಸಿ.ಬಿ ತಂಡದ ಫ್ರಾಂಚೈಸಿ ಕಂಪನಿಯು ಮೃತರ ಕುಟುಂಬಕ್ಕೆ ತಲಾ ಒಂದು ಕೋಟಿ ಪರಿಹಾರ ನೀಡಬೇಕೆಂದು ಒತ್ತಾಯಿಸಿದರು.
ಟಾಟಾ ಐ.ಪಿ.ಎಲ್ ನಂತರ ಖಾಸಗಿ ಪಂದ್ಯಾವಳಿಗಳಿಗೆ ಯುವಪೀಳಿಗೆ ಬೆಟ್ಟಿಂಗ್ ದಂಧೆ ಸೇರಿದಂತೆ ಹುಚ್ಚು ಅಭಿಮಾನಕ್ಕೆ ಬಲಿಯಾಗುತ್ತಿದ್ದು, ಕೂಡಲೇ ಕೇಂದ್ರ ಸರ್ಕಾರ ಐ.ಪಿ.ಎಲ್ ಪಂದ್ಯಾವಳಿಗಳನ್ನು ರದ್ದುಪಡಿಸಬೇಕೆಂದು ಮನವಿ ಮಾಡಿದರು.