Notebooks distributed to school children on the occasion of former MLA R Narendra’s birthday: Youth leader Navneet Gowda.

ವರದಿ: ಬಂಗಾರಪ್ಪ .ಸಿ .
ಹನೂರು : ವಿಧಾನ ಸಭಾ ಕ್ಷೇತ್ರದ ಜನಪ್ರಿಯ
ಮಾಜಿ ಶಾಸಕರಾದ ಆರ್ ನರೇಂದ್ರ ರವರ ಹುಟ್ಟಿದ ಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್ ಬುಕ್ ವಿತರಣೆ ಮಾಡುವ ಮೂಲಕ ಸಾಮಾಜಿಕ ಕಾರ್ಯದಲ್ಲಿ ತೋಡಗಿಸುಕೊಳ್ಳುವುದು ನಮಗೆ ಹೆಮ್ಮೆಯ ವಿಷಯವಾಗಿದೆ ಎಂದು ಯುವ ಮುಖಂಡರಾದ ನವನೀತ್ ಗೌಡರು ತಿಳಿಸಿದರು.
ಹನೂರು ಪಟ್ಟಣ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಮಕ್ಕಳಿಗೆ ನೋಟ್ ಬುಕ್ ವಿತರಣೆ ಮಾಡುತ್ತಿರುವುದು ಸೇರಿದಂತೆ ಹನೂರು ಕ್ಷೇತ್ರದಾದ್ಯಂತ ಅವರ ಅಭಿಮಾನಿಗಳು ಹಾಗೂ ಕಾರ್ಯಕರ್ತರು ಸೇರಿದಂತೆ ಇನ್ನಿತರರು ಹಲವಾರು ಆಸ್ಪತ್ರೆಯಲ್ಲಿ ಹಣ್ಣು ಹಂಪಲು ವಿತರಣೆ ಮಾಡುವುದರ ಜೋತೆಯಲ್ಲಿ ಸಾಮಾಜಿಕ ಕಾರ್ಯ ಮಾಡುತ್ತಿರುವುದು ಶ್ಲಾಘನೀಯ ಕಾರ್ಯವಾಗಿದೆ ಎಂದು . ತಮ್ಮ ತಂದೆಯವರಾದ ಮಾಜಿ ಶಾಸಕರಾದ ಆರ್ ನರೇಂದ್ರರವರ ಅರವತ್ತೇಳನೆ ಹುಟ್ಟುಹಬ್ಬವನ್ನು ಸರಳವಾಗಿ ಆಚರಿಸಿದರು ಎಂದು ತಿಳಿಸಿದರು .
ಇದೇ ಸಮಯದಲ್ಲಿ ಮುಖಂಡರುಗಳಾದ ಹರೀಶ್ ,ಚಾಮರಾಜನಗರ ಜಿಲ್ಲೆಯ ಒಕ್ಕಲಿಗರ ಸಂಘದ ಅದ್ಯಕ್ಷರಾದ ನಾಗೇಂದ್ರ ಎಲ್ , ರಾಮಲಿಂಗಮ್ . ಕೊಳ್ಳೆಗಾಲ ಮತ್ತು ಯಳಂದುರು ಒಕ್ಕಲಿಗರ ಸಂಘದ ನಿರ್ದೇಶಕರಾದ ಮಂಜೇಶ್ ,ರಮೇಶ್ ಸೇರಿದಂತೆ ಇನ್ನಿತರರು ಹಾಜರಿದ್ದರು