MD Asif Hussain is in-charge of Chitradurga District Youth Congress.

ಗಂಗಾವತಿ: ಚಿತ್ರದುರ್ಗ ಜಿಲ್ಲಾ ಕಾಂಗ್ರೆಸ್ ಸಮಿತಿಯ ಉಸ್ತುವಾರಿಯನ್ನಾಗಿ ಗಂಗಾವತಿ ವಿಧಾನಸಭಾ ಕ್ಷೇತ್ರದ ಯುವ ಮುಖಂಡರ ರಾಜ್ಯ ಯುವ ಕಾಂಗ್ರೆಸ್ ಕಾರ್ಯದರ್ಶಿ ಎಂ.ಡಿ ಆಸೀಫ್ ಹುಸೇನ್ ಅವರನ್ನು ನೇಮಕ ಮಾಡಿ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿ ಆದೇಶ ಹೊರಡಿಸಿದೆ.
ಈ ಹಿಂದೆ ಯುವ ಕಾಂಗ್ರೆಸ್ ನಲ್ಲಿ ವಿಧಾನಸಭಾ ಕ್ಷೇತ್ರದ ಅಧ್ಯಕ್ಷನಾಗಿ ನಂತರ ೨೦೨೫ ರಲ್ಲಿ ನಡೆದ ಯುವ ಕಾಂಗ್ರೆಸ್ ಚುನಾವಣೆ ಯಲ್ಲಿ ಜಯ ಗಳಿಸಿ ರಾಜ್ಯ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದಾರೆ. ಪಕ್ಷದ ಪರ ಹಲವಾರು ಹೋರಾಟ ಪ್ರತಿಭಟನೆ ಗಳನ್ನು ಮಾಡುವ ಮೂಲಕ ಜಿಲ್ಲೆಯಲ್ಲಿ ಯುವ ನಾಯಕನಾಗಿ ಗುರುತಿಸಿ ಕೊಂಡಿದ್ದ ಇವರನ್ನು ರಾಜ್ಯ ಯುವ ಕಾಂಗ್ರೆಸ್ ಚಿತ್ರದುರ್ಗ ಜಿಲ್ಲಾ ಉಸ್ತುವಾರಿಯನ್ನಾಗಿ ನೇಮಕ ಮಾಡುವ ಮೂಲಕ ಯುವ ನಾಯಕತ್ವಕ್ಕೆ ಅವಕಾಶ ನೀಡಿರುವುದಕ್ಕೆ ಕಾರ್ಯಕರ್ತರು ಹರ್ಷ ವ್ಯಕ್ತಪಡಿಸಿದ್ದಾರೆ.