ಕಲ್ಯಾಣಸಿರಿ ವಿಶೇಷ

ಸರ್ವೇ ನಂತರ ಹಕ್ಕುಪತ್ರ ವಿತರಣೆ ತಾಪಂಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಮರೆಡ್ಡಿ ಪಾಟೀಲ್ ಮಾಹಿತಿ

Distribution of title deeds after survey, information from TAP Executive Officers Rama Reddy Patil

ಗಂಗಾವತಿ: ತಾಲೂಕಿನ ಶ್ರೀರಾಮನಗರದ ಗುಂತಗಲ್ ಕ್ಯಾಂಪ್ ಗೆ ತಾಪಂ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಮರೆಡ್ಡಿ ಪಾಟೀಲ್ ಅವರು ಶುಕ್ರವಾರ ಭೇಟಿ ನೀಡಿ ಹಕ್ಕುಪತ್ರ ವಿತರಣೆ ಕುರಿತು ಮಾಹಿತಿ ಪಡೆದರು.

ನಂತರ ಅವರು ಮಾತನಾಡಿ, ಈಗಾಗಲೇ 2022ರಲ್ಲಿ101 ಫಲಾನುಭವಿಗಳಿಗೆ ಹಕ್ಕುಪತ್ರ ವಿತರಣೆ ಮಾಡಲಾಗಿದೆ. ಬಾಕಿ ಉಳಿದ ಫಲಾನುಭವಿಗಳ ಹಕ್ಕುಪತ್ರ ವಿತರಣೆಗೆ ಕಾಲವಕಾಶ ಬೇಕಾಗುತ್ತದೆ. ಈ ವಿಷಯವನ್ನು ಸಚಿವರಾದ ಶಿವರಾಜ ತಂಗಡಗಿ ಹಾಗೂ ಜಿಲ್ಲಾ ಮಟ್ಟದ ಮೇಲಧಿಕಾರಿಗಳ ಗಮನಕ್ಕೆ ತರಲಾವುದು. ಜೊತೆಗೆ ತಾಲೂಕು ಪಂಚಾಯತ್ ಮತ್ತು ಕಂದಾಯ ಅಧಿಕಾರಿಗಳ ತಂಡ ರಚಿಸಿ ಕೂಲಂಕುಶವಾಗಿ ಸರ್ವೇ ಮಾಡಿಸಿ ವರದಿ ಪಡೆಯಲಾಗುವುದು. ನಂತರ ಅರ್ಹ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆ ಮಾಡಲಾಗುವುದು ಎಂದು ತಿಳಿಸಿದರು.

ಈ ವೇಳೆ ಶ್ರೀರಾಮನಗರ ಗ್ರಾಪಂ ಅಧ್ಯಕ್ಷರಾದ ಶಾಂತಪ್ಪ, ಸದಸ್ಯರಾದ ಶುಂಕಣ್ಣ, ಗ್ರಾಪಂ ಅಭಿವೃದ್ಧಿ ಅಧಿಕಾರಿಗಳಾದ ನಾಗೇಶ ಕುರಡಿ, ಗ್ರಾಪಂ ಸಿಬ್ಬಂದಿಗಳು ಹಾಗೂ ಗ್ರಾಮಸ್ಥರು ಇದ್ದರು.

ಪ್ರಗತಿ ನಗರಕ್ಕೆ ಭೇಟಿ: ಮರಳಿ ಗ್ರಾಪಂ ವ್ಯಾಪ್ತಿಯ ಪ್ರಗತಿ ನಗರದ ಸರ್ವೇ ನಂಬರ್ 18/2, 21/2 ಸ್ಥಳಕ್ಕೆ ತಾಪಂ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಮರೆಡ್ಡಿ ಪಾಟೀಲ್ ಅವರು ಭೇಟಿ ನೀಡಿ ಹಕ್ಕುಪತ್ರ ವಿತರಣೆ ಕುರಿತು ಸ್ಥಳ ಪರಿಶೀಲನೆ ಮಾಡಿದರು. ಗ್ರಾಪಂ ಪಿಡಿಓ ಬಸವರಾಜಗೌಡ್ರು, ಗ್ರಾಪಂ ಸಿಬ್ಬಂದಿಗಳು ಇದ್ದರು.

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

12 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

13 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

13 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

13 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

13 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

13 hours ago