ಕಲ್ಯಾಣಸಿರಿ ವಿಶೇಷ

ಕಳಪೆ ಮೆಕ್ಕೆಜೋಳ ವಿತರಣೆ ರೈತರು ಅಕ್ಷರಶಃ ಕಂಗಾಲು

Poor maize distribution leaves farmers literally destitute

*ನೂರಾ ಐವತ್ತು ಎಕರೆ ಜಮೀನುಗಳಲ್ಲಿ ಮೆಕ್ಕೆಜೋಳ ಬೀಜ ಬಿತ್ತನೆ,ಮೊಳಕೆ ಬರದ ರೈತರು ಅಕ್ಷರಶಃ ಕಂಗಾಲು *

ಕೊಟ್ಟೂರು ತಾಲ್ಲೂಕು ತಾಲ್ಲೂಕಿನಾದ್ಯಂತ ಇತ್ತೀಚೆಗೆ ಮಳೆ ಚೆನ್ನಾಗಿ ಆಗಿದ್ದು, ಗಾಣಗಟ್ಟೆ ಗ್ರಾಮದಲ್ಲಿನ ಇಪ್ಪತ್ತೈದಕ್ಕೂ ಹೆಚ್ಚು ರೈತರು ಸುಮಾರು ನೂರಾ ಐವತ್ತು ಎಕರೆ ಜಮೀನುಗಳಲ್ಲಿ ಮೆಕ್ಕೆಜೋಳ ಬೀಜವನ್ನು ಬಿತ್ತನೆ ಮಾಡಿದ್ದರು. ಮೆಕ್ಕೆಜೋಳ ಕಳಪೆ ಗುಣಮಟ್ಟದಿಂದ ಕೂಡಿದ್ದು, ಸರಿಯಾಗಿ ಹುಟ್ಟಿರುವುದಿಲ್ಲವೆಂದು ರೈತರು ಗೋಳಾಡುತ್ತಿದ್ದಾರೆ. ಗಾಣಗಟ್ಟೆ ಗ್ರಾಮದ ರೈತರಾದ ಹನುಮಂತಪ್ಪ, ಎನ್ ಮಹಾಂತೇಶ, ಮಾರುತಿ, ಪ್ರವೀಣ, ಮಹಾಂತೇಶ, ವೆಂಕಟೇಶ, ರಾಜಶೇಖರ, ಎಸ್ ಮಾಯಪ್ಪ, ಬಸವರಾಜ, ಆನಂದಪ್ಪ, ಬುಡ್ರಿ ಮಹೇಶ, ರಾಜಣ್ಣ, ಇನ್ನು ಹೆಚ್ಚು ರೈತರು ರಾಣೇಬೆನ್ನೂರಿನಿಂದ ಬೀಜವನ್ನು ಶಿವಂ ಸೀಡ್ಸ್ ಅಂಗಡಿಯಿಂದ ಖರೀದಿ ಮಾಡಿ ತಂದಿದ್ದರು. ಮಳೆ ಬಂದ ನಂತರ ಬಿತ್ತನೆಯನ್ನು ಮಾಡಿದ್ದರು ಆದರೆ ಬೀಜಗಳ ಗುಣಮಟ್ಟ ಸರಿಯಿಲ್ಲದ ಕಾರಣ ಬಿತ್ತನೆ ಮಾಡಿದ ಸಸಿಗಳು ಮೊಳಕೆ ಬಂದಿರುವುದಿಲ್ಲ. ಕೃಷಿ ಇಲಾಖೆಯ ಅಧಿಕಾರಿಗಳು ಕಳಪೆ ಬೀಜಕ್ಕೆ ಕಾರಣರಾದವರ ಮೇಲೆ ಕೂಡಲೇ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ರೈತರು ಕೇಳಿಕೊಳ್ಳುತ್ತಿದ್ದಾರೆ. ಮೊಳಕೆ ಬರದ ರೈತರು ಅಕ್ಷರಶಃ ಕಂಗಾಲಾಗಿದ್ದಾರೆ. ಅಧಿಕಾರಿಗಳು ಯಾವ ರೀತಿ ಕ್ರಮ ಕೈಗೊಳ್ಳುವರೋ ಕಾದು ನೋಡಬೇಕಾಗಿದೆ. ಎಂದರು

ಕೋಟ್-೧
ರೈತರು ಹತ್ತಿರದ ರೈತ ಸಂಪರ್ಕ ಕೇಂದ್ರ ಮತ್ತು ಸ್ಥಳೀಯವಾಗಿ ವಿಶ್ವಾಸಾರ್ಹ ಮತ್ತು ಪರವಾನಗಿ ಪಡೆದ ಮಾರಾಟಗಾರರಿಂದ ಬೀಜಗಳನ್ನು ಖರೀದಿಸಬೇಕು ಮತ್ತು ಭೂಮಿ ಸಮರ್ಪಕವಾಗಿ ತೇವಾಂಶವನ್ನು ನೋಡಿ ಬಿತ್ತನೆ ಮಾಡಬೇಕು.
ಶ್ಯಾಮ್ ಸುಂದರ್
ಕೃಷಿ ಅಧಿಕಾರಿಗಳು ರೈತ ಸಂಪರ್ಕ ಕೇಂದ್ರ ಕೊಟ್ಟೂರು.

ಪ್ರತಿ ವರ್ಷ ರೈತ ಸಂಪರ್ಕ ಕೇಂದ್ರದಲ್ಲಿ ತರುತ್ತಿದ್ದೆ ಆದರೆ ಈ ವರ್ಷ ಕೆಲವು ರೈತರ ಮಾತು ಕೇಳಿ ರಾಣೆಬೆನ್ನೂರು ಬೀಜ ಇಳುವರಿ ಬರುತ್ತದೆ ಎಂದು ಹೇಳಿದರು.ಆದ್ದರಿಂದ ಈ ವರ್ಷ ರಾಣೆಬೆನ್ನೂರು ಬೀಜ ತಂದು ಕಷ್ಟಕ್ಕೀಡಾದನು. ನನಗೆ ೧೨ ಎಕರೆ ಹೋಲಕ್ಕೆ ೩೦ ಪಾಕೆಟ್ ಬೀಜವನ್ನು ಖರೀದಿ ಮಾಡಿದ್ದನು ಸಂಪೂರ್ಣವಾಗಿ ಕಳಪೆ ಬೀಜವಾಗಿದೆ.
ಎಸ್ ಮಾಯಪ್ಪ
ಗಾಣಗಟ್ಟೆ ಗ್ರಾಮದ ರೈತ.

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

14 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

15 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

15 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

15 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

15 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

15 hours ago