ಕಲ್ಯಾಣಸಿರಿ ವಿಶೇಷ

ಹಾಡಹಗಲೇ ಮನೆಗೆ ನುಗ್ಗಿ ಮಹಿಳೆಯಕೈಕಾಲು ಕಟ್ಟಿ ಚಿನ್ನಾಭರಣ ಕಳವುಗೈದ ಖದೀಮ!



A thief broke into a woman’s house in broad daylight, tied her hands and feet, and stole her jewelry


ವರದಿ : ಬಂಗಾರಪ್ಪ .ಸಿ .‌
ಹನೂರು : ತಾಲೂಕಿನ ವ್ಯಾಪ್ತಿಯಲ್ಲಿನ ರಾಮಾಪುರ ಹೋಬಳಿ ಕೇಂದ್ರದಲ್ಲಿ ಅಪರೊಚಿತ ವ್ಯಕ್ತಿ ಮನೆಗೆ ನುಗ್ಗಿ ಮಹಿಳೆಯ ಕೈಕಾಲುಗಳನ್ನು ಕಟ್ಟಿಹಾಕಿ ಚಿನ್ನಾಭರಣವನ್ನು ದೋಚಿ ಪರಾರಿಯಾಗಿರುವ ಘಟನೆ ಬೆಳಕಿಗೆ ಬಂದಿದೆ.ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ರಾಮಾಪುರ ಗ್ರಾಮದ ಮಾರಿಗುಡಿ ಬೀದಿಯ ನಿವಾಸಿ ಮಹದೇವಮ್ಮ (55) ಎಂಬುವವರು ಕಾರ್ಯ ನಿಮಿತ್ತ ಮನೆಯಿಂದ ಹೊರಬಂದ ಸಂದರ್ಭದಲ್ಲಿ ಈ ಘಟನೆ ನಡೆದಿದೆ‌.
ಒಂಟಿ ಹೆಣ್ಣಿನ ಸಂಚಾರ ಗಮನಿಸಿದ ವ್ಯಕ್ತಿಯೊಬ್ಬ ಆಕೆಯನ್ನು ಹಿಡಿದು, ಕೈ ಕಾಲುಗಳನ್ನು ಕಟ್ಟಿ ಹಾಕಿ ಬಾಯಿಗೆ ಬಟ್ಟೆ ಕಟ್ಟಿ ನಂತರ ಆಕೆಯ ಬಳಿ ಇದ್ದ ಸುಮಾರು 45 ಗ್ರಾಂ ಚಿನ್ನಾಭರಣ ಕಸಿದು ಸ್ಥಳದಿಂದ ಪರಾರಿಯಾಗಿದ್ದಾರೆ ಎನ್ನಲಾಗಿದೆ.

ಘಟನೆ ನಡೆದ ನಂತರ ಮಹಿಳೆಯ ಚಿರಾಟ ಶಬ್ದ ಕೇಳಿದ ಸ್ಥಳೀಯರು ಮಹದೇವಮ್ಮ ರವರನ್ನು ರಕ್ಷಿಸಿದ್ದು, ವಿಷಯ ತಿಳಿದ ಕೂಡಲೇ ರಾಮಾಪುರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ರು. ಘಟನೆ ಸಂಬಂಧ ಮಹಿಳೆಯಿಂದ ಘಟನೆಯ ಮಾಹಿತಿ ಪಡೆದುಕೊಂಡು ಪರಿಶೀಲನೆ ನಡೆಸಿ ಅಗತ್ಯ ಕ್ರಮ ಕೈಗೊಂಡಿದ್ದಾರೆ.

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

17 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

18 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

18 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

18 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

18 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

18 hours ago