Farmers demand repair of No. 5 distributor sub-canal

ಕೊಪ್ಪಳ: ಜಿಲ್ಲೆಯ ಅಗಳಕೇರಿ ಮತ್ತು ಹಿಟ್ನಾಳ ಸೀಮೆಯಲ್ಲಿ ಹಾದು ಹೋಗುವ ತುಂಗಭದ್ರಾ ಎಡದಂಡೆ ನಾಲೆಯ ೫ನೇ ವಿತರಣಾ ಕಾಲುವೆಯ ೧ನೇ ಪಿ.ಓ. ಕಾಲುವೆ ತ್ಯಾಜ್ಯದಿಂದ ತುಂಬಿಕೊAಡಿದ್ದು ದುರಸ್ತಿಗೊಳಿಸುವಂತೆ ಕೃಷಿಕರು ತುಂಗಭದ್ರಾ ಜಲಮಂಡಳಿಗೆ ಮನವಿ ಮಾಡಿದ್ದಾರೆ.
ನಾಲೆಯ ೫ನೇ ವಿತರಣಾ ಕಾಲುವೆಯಿಂದ ಕೋಳೂರಮ್ಮ ದೇವಿಯ ದೇವಾಲಯ ಹಿಂಭಾಗ ಮತ್ತು ಅಗಳಕೇರಿ ಹಳ್ಳದವರೆಗೆ ಹಾದು ಹೋಗಿರುವ ಉಪ ಕಾಲುವೆ ನೀರು ಪಕ್ಕದ ರೈತರ ಜಮೀನಿನಲ್ಲಿ ಊಟಿಯ ಸ್ವರೂಪದಲ್ಲಿ ಗೋಚರಿಸಿದೆ. ಸುಮಾರು ಅರ್ಧ ಕಿ.ಮೀ. ಉದ್ದದ ಉಪ ಕಾಲುವೆಯ ತುಂಬ ತ್ಯಾಜ್ಯದ ಗಿಡಗಳು ಬೆಳೆದು ನಿಂತಿವೆ. ಸಾಲದ್ದಕ್ಕೆ ಈ ಉಪ ಕಾಲುವೆಗೆ ವ್ಯರ್ಥವಾದ ಹಾಸಿಗೆ, ಬಟ್ಟೆಗಳನ್ನು ಬಿಸಾಡುವುದರಿಂದ ನೀರು ಜಮೆಗೊಂಡು ಮುಂದಕ್ಕೆ ಹರಿಯದಂತಾಗಿದೆ.