ಕಲ್ಯಾಣಸಿರಿ ವಿಶೇಷ

ವಿಶ್ವ ಮಾದಕ ವಸ್ತು ರಹಿತ ದಿನಾಚರಣೆ ದುಶ್ಚಟ ಮುಕ್ತ ಸಮಾಜ ನಿರ್ಮಾಣ ನಮ್ಮೆಲ್ಲರ ಹೊಣೆ

World No Drug Day: Building a drug-free society is everyone’s responsibility



ಯಲಬುರ್ಗಾ: ದುಶ್ಚಟ ಮುಕ್ತ ಸಮಾಜ ನಿರ್ಮಾಣ ನಮ್ಮೆಲ್ಲರ ಹೊಣೆ ,ಯುವ ಸಮುದಾಯ ಗುಟಕಾ, ಸಿಗರೆಟ್, ಧೂಮಪಾನ ಸೇವನೆಯಿಂದ ದುಶ್ಚಟದಿಂದ ದೂರವಿದ್ದು ಉತ್ತಮ ಜೀವನ ರೂಪಿಸಿಕೊಳ್ಳುವಂತೆ ಡಾ. ವಿವೇಕ ವಾಗಲೆ ಅವರು ಯಲಬುರ್ಗಾ ತಾಲೂಕಿನ ಮೂಧೋಳದ ತ್ರೀಲಿಂಗೇಶ್ವರ ಪ್ರೌಡ ಶಾಲೆಯಲ್ಲಿ ಜರುಗಿದ , ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಅಖಿಲ ಕರ್ನಾಟಕ ಜಿಲ್ಲಾ ಜನಜಾಗೃತಿ ಸಮಿತಿ, ಜ್ಣಾನ ವಿಕಾಸ ಸಮಿತಿ ಇವುಗಳ ಸಹಕಾರದಲ್ಲಿ ವಿಶ್ವ ಮಾದಕ ವಸ್ತು ವಿರೋಧಿ ದಿನಾಚರಣೆ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿ ಅವರು ಮಾತನಾಡಿದರು. ತ್ರೀಲಿಂಗೇಶ್ವರ .ವಿ.ಸಮಿತಿ ಅದ್ಯಕ್ಷ ಚಂದ್ರಶೇಖರ ದೇಸಾಯಿ ಅವರು ಸಸಿಗೆ ನೀರು ಹಾಕಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ವಿವಿಧ ಚಟಗಳಿಗೆ ದಾಸರಾಗಿ ಹಲವು ರೋಗಗಳಿಗೆ ಅಂಟಿಕೊಳ್ಳದೆ ಉತ್ತಮರ ಸಂಘ ಮಾಡಿಕೊಂಡು ಸುಂದರ ಬದುಕು ನಿಮ್ಮದಾಗಿಸಿಕೊಳ್ಳಿ ಎಂದು ಯೋಜನಾಧಿಕಾರಿ ಗಣೇಶ ನಾಯ್ಕ್ ಅವರು ಮಾತನಾಡಿದರು. ಮೋಜು ಮಸ್ತಿಗಾಗಿ ವಿದ್ಯಾರ್ಥಿಗಳು ಸಿಗರೇಟ್ , ಗುಟಕಾ ಅತಿಯಾಗಿ ಸೇವನೆ ಮಾಡುತ್ತಾರೆ ಇದರಲ್ಲಿ ಸಾಕಷ್ಟು ವಿಷವಿರುತ್ತದೆ ಇದರ ಅರಿವು ಇದ್ದರು ಸಹ ಸೇವನೆ ಮಾಡಿ ಇದರಿಂದ ಕ್ಯಾನ್ಸರ್ ರೋಗಕ್ಕೆ ತುತ್ತಾಗಿ ಜೀವನ ಪರ್ಯಂತಾರ ತೊಂದರೆ ಅನುಭವಿಸಿ ಸಾವನ್ನಪ್ಪುತ್ತಾರೆ ಆದ್ದರಿಂದ ವಿದ್ಯಾರ್ಥಿಗಳು ರೋಗ ರುಜಿನಗಳಿಂದ ತೊಂದರೆ ಅನುಭವಿಸಿ ಮರಣ ಹೊಂದುತ್ತಾರೆ , ಯುವ ಸಮುದಾಯ ದುಶ್ಚಟಗಳಿಂದ ದೂರ ಇರಬೇಕು ಎಂದು ಅಖಿಲ ಕರ್ನಾಟಕ ಕೊಪ್ಪಳ ಜಿಲ್ಲಾ ಜನಜಾಗೃತಿ ಸಮಿತಿ ಸದಸ್ಯ ಶರಣಬಸಪ್ಪ ದಾನಕೈ ಅವರು ಅದ್ಯಕ್ಷತೆ ವಹಿಸಿ ಮಾತನಾಡಿದರು. ಜ್ಞಾನ ವಿಕಾಸ ಸಮಿತಿಯ ಸಮನ್ವಯಾಧಿಕಾರಿ ರತ್ನ ಪಾಟೀಲ, ತ್ರೀಲಿಂಗೇಶ್ವರ ವಿ.ಸಂಸ್ಥೆಯ ಕಾರ್ಯದರ್ಶಿ ಯಲ್ಲಪ್ಪ ಹುನಗುಂದ,ಶಿಕ್ಷಕಿ ಬಸಮ್ಮ ತಳವಾರ ಇವರು ಮಾತನಾಡಿ ಮಕ್ಕಳು ದುಶ್ಚಚಟಗಳಿಂದ ದೂರವಿದ್ದು ತಂದೆ ತಾಯಿಯವರಿಗೆ ಗೌರವ ತರುವ ಕಾರ್ಯಮಾಡಬೇಕು ಎಂದರು. ಒಕ್ಕೂಟದ ಅದ್ಯಕ್ಷೆ ಗೀತಾ ಹಿರೇಹಾಳ,ಸೇವಾ ಪ್ರತಿನಿದಿಗಳಾದ ಕಾಳಮ್ಮ ಬೀಳಗಿಮಠ, ರೇಣುಕಾ ಹುಂಡಿ,,ಶಿಕ್ಷಕರಾದ ಶರಣಪ್ಪ ತಳವಾರ,ಶರಣಪ್ಪ ಚಲವಾದಿ ಸೇರಿದಂತೆ ಸಂಸ್ಥೆಯ ಮುಖ್ಯೋಪಾಧ್ಯಾಯರು,ಶಿಕ್ಷಕ ವೃಂದದವರು ಭಾಗವಹಿಸಿದ್ದರು.

Mallikarjun

Share
Published by
Mallikarjun

Recent Posts

ತಂದೆಯ ಋಣ ತೀರಿಸಲು ..ಎಷ್ಟೇ ಜನ್ಮ ಹುಟ್ಟಿ ಬಂದರೂ ಸಾಧ್ಯವಿಲ್ಲ

ತಂದೆಯ ಋಣ ತೀರಿಸಲು ..ಎಷ್ಟೇ ಜನ್ಮ ಹುಟ್ಟಿ ಬಂದರೂ ಸಾಧ್ಯವಿಲ್ಲ No matter how many births you take,…

6 minutes ago

ಹುಂಡಿಗೆ ಬಿತ್ತು ಭಕ್ತನ iPhone! ಅಯ್ಯೋ ಹುಂಡಿಗೆ ಬಿದ್ಮೇಲೆ ಮುಗೀತು

Devotee's iPhone fell into his pocket! Alas, it ended after falling into his pocket. ಹುಂಡಿಗೆ…

12 minutes ago

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

19 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

20 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

20 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

20 hours ago