Breaking News
ಅಭಿಪ್ರಾಯರೂಪಿಸುವ ಶಕ್ತಿಯನ್ನು ಮಾಧ್ಯಮಗಳು ಸದ್ಬಳಕೆ ಮಾಡಬೇಕು:ಈಶ್ವರ ಖಂಡ್ರೆ
Sensitive reporting on sensitive issues requires sensitivity: Ishwara Khandre

2.3 ವರ್ಷದಲ್ಲಿ 11 ಕೋಟಿ ಸಸಿಗಳನ್ನು ನೆಟ್ಟು ಪರಿಸರ ರಕ್ಷಣೆ: ಅರಣ್ಯ ಸಚಿವರು


ಬೆಂಗಳೂರು, ಜು 31: ಸಾರ್ವಜನಿಕ ಅಭಿಪ್ರಾಯ ರೂಪಿಸುವ ಶಕ್ತಿ ಮಾಧ್ಯಮಗಳಿಗಿದ್ದು, ಈ ಶಕ್ತಿಯನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ.
ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘದ ರಾಜ್ಯ ಘಟಕದ ಉದ್ಘಾಟನೆ ಹಾಗೂ ಪತ್ರಿಕಾ ದಿನಾಚರಣೆ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಕೋಮು ಘರ್ಷಣೆ, ಜಾತಿ, ಜನಾಂಗೀಯ ಸಂಘರ್ಷವೇ ಮೊದಲಾದ ಸೂಕ್ಷ್ಮ ವಿಚಾರಗಳ ವರದಿಗಾರಿಕೆಯಲ್ಲಿ ಮಾಧ್ಯಮಗಳು ಸೂಕ್ಷ್ಮ ಸಂವೇದನೆ ಹೊಂದಿರಬೇಕು. ಪ್ರಚೋದನಕಾರಿಯಾದ ವರದಿಗೆ ಕಡಿವಾಣ ಹಾಕಬೇಕು ಎಂದರು.
ಶಾಸಕಾಂಗ, ನ್ಯಾಯಾಂಗ ಮತ್ತು ಕಾರ್ಯಾಂಗವನ್ನು ಒಳಗೊಂಡಿದ್ದೆ ನಮ್ಮ ಆಡಳಿತ ವ್ಯವಸ್ಥೆ. ಈ ವ್ಯವಸ್ಥೆಯಲ್ಲಿ ಪತ್ರಿಕಾಂಗ ಅಥವಾ ಮಾಧ್ಯಮ ರಂಗಕ್ಕೆ ಮಹತ್ವದ ಸ್ಥಾನ ನೀಡಲಾಗಿದ್ದು, ಸಮಾಜದ ನಾಲ್ಕನೇ ಅಂಗ ಎಂದೂ ಪರಿಗಣಿಸಲಾಗಿದೆ ಎಂದರು.
ಅನಕ್ಷರತೆಯ ನಡುವೆಯೂ ಸ್ವಾತಂತ್ರ್ಯ ಸಂಗ್ರಾಮದ ಕಾಲದಲ್ಲಿ ಪತ್ರಿಕೆಗಳು ನಿರ್ವಹಿಸಿದ ಪಾತ್ರ ಅತ್ಯಂತ ಮಹತ್ವವಾದ್ದು. ಜನರಲ್ಲಿ ಸ್ವಾತಂತ್ರ್ಯದ ಕಿಚ್ಚು ಹಚ್ಚುವಲ್ಲಿ ದೇಶಪ್ರೇಮ ಮೂಡಿಸುವಲ್ಲಿ ಮಹಾತ್ಮಾ ಗಾಂಧೀ, ಡಾ. ಬಾಬಾ ಸಾಹೇಬ್ ಅಂಬೇಡ್ಕರ್, ಬಾಲ ಗಂಗಾಧರ ತಿಲಕರೇ ಮೊದಲಾದವರು ಹೊರತರುತ್ತಿದ್ದ ಪತ್ರಿಕೆಗಳ ಕೊಡುಗೆ ಅನನ್ಯವಾದ್ದು ಎಂದರು.
ಭಾರತದಲ್ಲಿ 1780ರಲ್ಲಿ ಆರಂಭವಾದ ಮೊದಲ ಪತ್ರಿಕೆ ‘ದಿ ಬೆಂಗಾಲ್ ಗೆಜೆಟ್’ ಹೀಗಾಗಿ ಭಾರತೀಯ ಪತ್ರಿಕೋದ್ಯಮಕ್ಕೆ 245 ವರ್ಷಗಳ ಸುದೀರ್ಘ ಇತಿಹಾಸ ಇದೆ. ಅದೇ ರೀತಿ ಮಂಗಳೂರು ಸಮಾಚಾರ ಪತ್ರಿಕೆ 1843 ಜುಲೈ 1ರಂದು ಆರಂಭವಾಗಿದ್ದು, ಕನ್ನಡ ಪತ್ರಿಕೋದ್ಯಮಕ್ಕೆ 182ವರ್ಷಗಳ ಭವ್ಯ ಇತಿಹಾಸ ಇದೆ ಎಂದರು.
ಕನ್ನಡ ಪತ್ರಿಕೋದ್ಯಮಕ್ಕೆ ತಿ.ತಾ. ಶರ್ಮಾ, ಮೊಹರೆ ಹಣಮಂತರಾಯರು, ಖಾದ್ರಿ ಶಾಮಣ್ಣನವರು, ಆರ್.ಆರ್. ದಿವಾಕರ್ ಮೊದಲಾದವರು ಕೊಡುಗೆ ನೀಡಿದ್ದಾರೆ ಎಂದ ಅವರು, ಲೇಖನಿ ಖಡ್ಗಕ್ಕಿಂತ ಹರಿತ. ಆದರೆ ಆ ಹರಿತವಾದ ಲೇಖನಿಯನ್ನು ಸಮರ್ಪಕ ರೀತಿಯಲ್ಲಿ ಬಳಸುವುದು ಅಗತ್ಯ ಎಂದು ತಿಳಿಸಿದರು.
ಮಾಧ್ಯಮಗಳು ಜನ ಜಾಗೃತಿ ಮೂಡಿಸಬೇಕು:
ನೀರಲ್ಲಿ ಕರಗದ ಪ್ಲಾಸ್ಟರಾಫ್ ಪ್ಯಾರೀಸ್ (ಪಿಓಪಿ) ಗಣಪತಿ ಮೂರ್ತಿಗಳನ್ನು ನೀರಲ್ಲಿ ವಿಸರ್ಜನೆ ಮಾಡುವುದನ್ನು ಹಾಗೂ ಏಕ ಬಳಕೆ ಪ್ಲಾಸ್ಟಿಕ್ ಉತ್ಪನ್ನಗಳನ್ನು ನಿಷೇಧಿಸಲಾಗಿದೆ. ಆದಾಗ್ಯೂ ಅವುಗಳ ಬಳಕೆ ವ್ಯಾಪಕವಾಗಿದೆ. ಪರಿಸರಕ್ಕೆ ಮಾರಕವಾದ ಇಂತಹ ವಸ್ತುಗಳ ಬಳಕೆ ತ್ಯಜಿಸುವಂತೆ ಮಾಧ್ಯಮಗಳು ಜನಜಾಗೃತಿ ಮೂಡಿಸಬೇಕು ಎಂದರು.
11 ಕೋಟಿ ಸಸಿ ನೆಟ್ಟ ಸಾಧನೆ:
ಅರಣ್ಯ ಇಲಾಖೆಯ ಜವಾಬ್ದಾರಿಯನ್ನು ತಾವು ವಹಿಸಿಕೊಂಡ ಬಳಿಕ 2.3 ವರ್ಷಗಳಲ್ಲಿ ರಾಜ್ಯದಲ್ಲಿ 11ಕೋಟಿ ಸಸಿಗಳನ್ನು ನೆಟ್ಟು ಪೋಷಿಸುವ ಮೂಲಕ ಪರಿಸರ ಸಂರಕ್ಷಣೆಗೆ ಮುಂದಾಗಿರುವುದಾಗಿ ಅವರು ತಿಳಿಸಿದರು.
ಮಾಧ್ಯಮಶ್ರೀ ಮತ್ತು ಜೀವಮಾನ ಪ್ರಶಸ್ತಿಗೆ ಭಾಜನರಾದ ಎಲ್ಲರಿಗೂ ಅಭಿನಂದನೆ ಸಲ್ಲಿಸಿದರು. ಕಾರ್ಯಕ್ರಮದಲ್ಲಿ ಮಾಜಿ ಸಚಿವ ಪಿ.ಜಿ.ಆರ್. ಸಿಂಧ್ಯಾ, ಮುಖ್ಯಮಂತ್ರಿಯವರ ಮಾಧ್ಯಮ ಸಲಹೆಗಾರ ಕೆ.ವಿ. ಪ್ರಭಾಕರ್ ಮತ್ತಿತರರು ಭಾಗಿಯಾಗಿದ್ದರು.

ಅರೆಸತ್ಯ ಮತ್ತು ಸುಳ್ಳು ಸುದ್ದಿಗಳು ಪ್ರಾಣವಾಯುವನ್ನು ಹಾಳು ಮಾಡುತ್ತವೆ: ಕೆ.ವಿ.ಪ್ರಭಾಕರ್
Half-truths and fake news destroy the lifeblood: K.V. Prabhakar

ಅಭಿವ್ಯಕ್ತಿ ಸ್ವಾತಂತ್ರ್ಯ ಪ್ರಜಾಪ್ರಭುತ್ವದ ಪ್ರಾಣವಾಯು ಎನ್ನುವ ಅಂಬೇಡ್ಕರ್ ಅವರ ಮಾತು ಗಟ್ಟಿಯಾಗಲಿ: ಕೆ.ವಿ.ಪಿ

ಬೆಂಗಳೂರು ಜು 31: ಮಾಧ್ಯಮಗಳು ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯ ಪ್ರಜಾಪ್ರಭುತ್ವದ ಪ್ರಾಣವಾಯು ಎನ್ನುವ ಅಂಬೇಡ್ಕರ್ ಅವರ ಮಾತು ಗಟ್ಟಿಯಾಗಬೇಕು ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅಭಿಪ್ರಾಯಪಟ್ಟರು.

ಕೊಂಡಜ್ಜಿ ಬಸಪ್ಪ ಸಭಾಂಗಣದಲ್ಲಿ ನಡೆದ “ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘ” ವನ್ನು ಉದ್ಘಾಟಿಸಿ, ಪುರಸ್ಕೃತರಿಗೆ ಪ್ರಶಸ್ತಿಗಳನ್ನು ವಿತರಿಸಿ ಮಾತನಾಡಿದರು.

ಸ್ವಾತಂತ್ರ್ಯ ಹೋರಾಟವನ್ನು ಮುನ್ನಡೆಸಿದ್ದ ಭಾರತೀಯ ಪತ್ರಿಕೋದ್ಯಮ ಸಮಾಜವನ್ನು ಒಗ್ಗೂಡಿಸುವಲ್ಲಿ, ಪ್ರಜಾಪ್ರಭುತ್ವವನ್ನು ಗಟ್ಟಿಗೊಳಿಸುವಲ್ಲಿ ಮಹತ್ವದ ಪಾತ್ರ ವಹಿಸಿವೆ. ಸ್ವಾತಂತ್ರ್ಯಾ ಬಳಿಕ ಅಭಿವೃದ್ಧಿ ಪತ್ರಿಕೋದ್ಯಮ, ತನಿಖಾ ಪತ್ರಿಕೋದ್ಯಮದ ಮೂಲಕ ಸಮಾಜವನ್ನು ಎಚ್ಚರಿಸುವ ಹೊಣೆಗಾರಿಕೆಯನ್ನು ನಿರ್ವಹಿಸಿದ್ದವು. ಆದರೆ ಇಂದು ಅರೆಸತ್ಯ ಮತ್ತು ಸುಳ್ಳು ಸುದ್ದಿಗಳು ಭಾರತೀಯ ಪತ್ರಿಕೋದ್ಯಮದ ಈ ಮಹೋನ್ನತ ಘನತೆಯನ್ನು ಹಾಳುಗೆಡಹುವ ರೀತಿಯಲ್ಲಿ ಕೆಲಸ ಮಾಡುತ್ತಿರುವುದಕ್ಕೆ ಬೇಸರ ವ್ಯಕ್ತಪಡಿಸಿದರು.

ಪತ್ರಕರ್ತರೂ, ಸಂಪಾದಕರೂ ಆಗಿದ್ದ ಅಂಬೇಡ್ಕರ್ ಅವರು ಸಂಘಟನೆ ಮತ್ತು ಶಿಕ್ಷಣದ ಮಹತ್ವವನ್ನು ಒತ್ತಿ ಹೇಳಿದ್ದಾರೆ. ಸಂಘಟಕ ಧ್ವನಿ ಸರ್ಕಾರದ ಮತ್ತು ಸಮಾಜದ ಕಣ್ಣು ತೆರೆಸುತ್ತವೆ ಎಂದಿದ್ದರು.

ಪತ್ರಿಕಾ ಸಂಘಟನೆಗಳು, ಪತ್ರಕರ್ತರ ಸಂಘಗಳು ಪ್ರಜಾಪ್ರಭುತ್ವ ಮತ್ತು ಮಾಹಿತಿ ಹಕ್ಕುಗಳ ರಕ್ಷಣೆಗೆ ಪ್ರಮುಖ ಅಸ್ತ್ರಗಳು ಎನ್ನುವುದನ್ನು ನಾವು ಮರೆಯಬಾರದು ಎಂದರು.

ಮಾಧ್ಯಮವನ್ನು ಜನಪರವಾಗಿ, ಭಯಮುಕ್ತವಾಗಿಡಲು ಪತ್ರಕರ್ತರು ಯಾವುದೇ ಹಿಂಜರಿಕೆ ಇಲ್ಲದೆ ವರದಿ ಮಾಡಲು ಇದು ಸಹಾಯ ಮಾಡುವ ರೀತಿಯಲ್ಲಿ ಸಂಘಟನೆಗಳು ಶ್ರಮಿಸಬೇಕು ಎಂದು ಕರೆ ನೀಡಿದರು.

ಮಾಧ್ಯಮ ಸಂಘಟನೆಗಳು ಪತ್ರಕರ್ತರಿಗೆ ನೈತಿಕ ಮಾರ್ಗಸೂಚಿಗಳನ್ನು ಸ್ವಯಂಪ್ರೇರಿತವಾಗಿ ಅಳವಡಿದಿಕೊಳ್ಳಲು ಉತ್ತೇಜಿಸಬೇಕು. ಸುಪ್ರೀಂಕೋರ್ಟ್ ಮತ್ತು ಹೈ ಕೋರ್ಟ್ ಗಳು ಹಲವು ಸಂದರ್ಭಗಳಲ್ಲಿ ಮಧ್ಯಮಗಳಿಗೆ ಎಚ್ಚರಿಸಿವೆ. “ಸ್ವಯಂ ನೈತಿಕ ನಿಯಮಗಳನ್ನು ಅಳವಡಿಸಿಕೊಳ್ಳುವಂತೆ” ಸೂಚನೆಗಳನ್ನು ನೀಡಿರುವುದು ಗಂಭೀರವಾದ ಸಂಗತಿ ಎಂದರು.

ಇದು ಮಾಧ್ಯಮದ ಮೇಲಿನ ಸಾರ್ವಜನಿಕ ವಿಶ್ವಾಸವನ್ನು ಕಾಪಾಡಿಕೊಳ್ಳಲು ಸಹಕಾರಿಯಾಗುತ್ತದೆ. ಇದನ್ನು ನಾವೆಲ್ಲಾ ಪೋಷಣೆ ಮಾಡೋಣ ಎಂದರು.

ಸಂಘದ ಬೇಡಿಕೆ ಈಡೇರಿಕೆಗೆ ಕ್ರಮ

ಪತ್ರಕರ್ತರ ಪಿಂಚಣಿಯ ನಿಯಮಗಳನ್ನು ಮತ್ತಷ್ಟು ದಾರಾಳಗೊಳಿಸುವ ಬಗ್ಗೆ ಮುಖ್ಯಮಂತ್ರಿಗಳ ಜೊತೆ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.

ಕಿಷ್ಕಿಂದ ಅಂಜನಾದ್ರಿ ಪರಿಕ್ರಮ ಯಾತ್ರೆ ಆಚರಣೆ ಕುರಿತು ಪೂರ್ವ ಭಾವಿ ಸಭೆ.
Pre-planning meeting regarding the Kishkinda Anjanadri Parikrama Yatra celebration.


ಗಂಗಾವತಿ. ಐತಿಹಾಸಿಕ ಹಿನ್ನೆಲೆ ಹೊಂದಿದ ಇತಿಹಾಸ ಪ್ರಸಿದ್ಧ ಆನೆಗುಂದಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಚಿಕ್ಕ ರಾಂಪುರ್ ಗ್ರಾಮದ ಕಿಸ್ಕಿಂದ ಅಂಜನಾದ್ರಿ ಶ್ರೀ ಆಂಜನೇಯನಿಗೆ ಅಂಜನಾದ್ರಿ ಪರಿಕ್ರಮ ಶ್ರಾವಣ ಮಾಸದ ಆಚರಣೆಗೆ ಸಂಬಂಧಿಸಿದಂತೆ ಮಂಗಳವಾರದಂದು ರಾಮಪುರ ಶ್ರೀರಾಮ ಮಂದಿರದಲ್ಲಿ ಪೂರ್ವಭಾವಿ ಸಭೆಯನ್ನು ದೇವಸ್ಥಾನದ ಪ್ರದಾನ ಅರ್ಚಕ ಮಹಾಂತ ಶ್ರೀ ವಿದ್ಯಾ ದಾಸ ಬಾಬಾಜಿಯವರ ನೇತೃತ್ವದ್ದಲ್ಲಿ ಜರುಗಿತು. ಆಚರಣೆಗೆ ಸಂಬಂಧಿಸಿದಂತೆ ಬಾಬಾಜಿಯವರು ಮಾತನಾಡಿ. ನಮ್ಮ ನಡಿಗೆ ಹನುಮನ ಕಡೆಗೆ ಎಂಬಂತೆ ಹನುಮನ ಜನ್ಮಸ್ಥಾನದಲ್ಲಿ ಜನಿಸಿದವರೇ ನಿಜಕ್ಕೂ ಪುಣ್ಯವಂತರು ಅಂತಹ ದಿವ್ಯ ಶಕ್ತಿ ಆಂಜನೇಯ ಕ್ಷೇತ್ರ ಹೊಂದಿದ್ದು ಶ್ರಾವಣ ಮಾಸದ ಹಿನ್ನೆಲೆಯಲ್ಲಿ ಪ್ರತಿ ಶನಿವಾರ ಅಂಜನಾದ್ರಿ ಪರಿಕ್ರಮ ಅಂದರೆ ಶ್ರೀ ಆಂಜನೇಯರಿಗೆ ಪ್ರದಕ್ಷಣೆ ಎಂದು ಕರೆಯಲ್ಪಡುವ ಈ ಆಚರಣೆಯಿಂದ ವ್ಯಕ್ತಿಯ ಜನ್ಮಜನ್ಮಾಂತರದ ಪಾಪ ನಾಶವಾಗಿ ಸುಖ ಶಾಂತಿ ಸಮೃದ್ಧಿ ದೊರೆಯುವುದು ಶ್ರಾವಣ ಮಾಸದ ಪ್ರತಿ ಶನಿವಾರ ನಾಲ್ಕು ಗಂಟೆಯಿಂದ ಆರಂಭವಾಗುವ ಶ್ರೀ ಆಂಜನೇಯ ಪ್ರದಕ್ಷಣೆ ಇದರಿಂದ ವ್ಯಕ್ತಿಯಲ್ಲಿ ಆಗುವ ಬದಲಾವಣೆ ಭಾಗವಹಿಸಿದಾಗ ಮಾತ್ರ ಗೊತ್ತಾಗುವುದೆಂದು ಪ್ರದಕ್ಷಣೆಮಹತ್ವ ಕುರಿತು ತಿಳಿಸಿದರು. ಈ ಸಂದರ್ಭದಲ್ಲಿ ನಾರಾಯಣಗೌಡ ಮಲ್ಲಾಪುರ್ ಮಲ್ಲಪ್ಪ ಶಿವಪ್ರಸಾದ್ ರೆಡ್ಡಿ. ಬಾಲು ಹನುಮನಹಳ್ಳಿ ಲಕ್ಷ್ಮಣ ನಾಯಕ್ ನರಸಿಂಹಮೂರ್ತಿ ಹೊಸಪೇಟೆ ವೆಂಕಟರೆಡ್ಡಿ ರಾಜಪ್ಪ ಹನುಮಂತಪ್ಪ ಡಾಕ್ಟರ್ ಸತ್ಯನಾರಾಯಣ. ನೀಲಕಂಠ ನಾಗಶೆಟ್ಟಿ ಕಾವ್ಯ . ನಳಿನ್ ರೆಡ್ಡಿ ಸೇರಿದಂತೆ ಇನ್ನಿತರರು ಭಾಗವಹಿಸಿದ್ದರು 🙏👌

ಬಂಕಾಪುರದಲ್ಲಿ ಶಾಸನಗಳು ಪತ್ತೆ
Inscriptions discovered in Bankapur

 

ಗಂಗಾವತಿಬಂಕಾಪುರದಲ್ಲಿ ಶಾಸನಗಳು ಪತ್ತೆ ಕನಕಗಿರಿ ಇತಿಹಾಸದ ಮೇಲೆ ಹೊಸ ಬೆಳಕು: ಕನಕಗಿರಿ ತಾಲೂಕಿನ ಬಂಕಾಪುರ ಗ್ರಾಮದಲ್ಲಿ ಕನಕಗಿರಿ ಪಾಳೇಗಾರ ಇಮ್ಮಡಿ ಉಡುಚಪ್ಪನಾಯಕನ ಕಾಲದ ಎರಡು ಶಾಸನಗಳು ಪತ್ತೆಯಾಗಿವೆ ಎಂದು ಸಂಶೋಧಕ ಡಾ. ಶರಣಬಸಪ್ಪ ಕೋಲ್ಕಾರ್ ತಿಳಿಸಿದ್ದಾರೆ .ಬಂಕಾಪುರ ಗ್ರಾಮದ ಉತ್ತರಕ್ಕೆ ಒಂದು ಶಾಸನ ಮತ್ತು ಆಗ್ನೇಯಕ್ಕೆ ಎರಡು ಕಿಲೋಮೀಟರ್ ಅಂತರದಲ್ಲಿ ಹುಟ್ಟು ಬಂಡೆಯ ಮೇಲೆ ಬರೆದ ಮತ್ತೊಂದು ಶಾಸನಗಳಿವೆ.ಮೊದಲ ಶಾಸನ 24 ಸಾಲುಗಳಲ್ಲಿ ಎರಡನೇ ಶಾಸನ ಆರು ಸಾಲುಗಳಲ್ಲಿ ಇದ್ದು, 17ನೇ ಶತಮಾನದ ಕನ್ನಡ ಲಿಪಿ ಮತ್ತು ಭಾಷೆಯಲ್ಲಿವೆ .ಮೊದಲ ಶಾಸನ ಚಾರಿತ್ರಿಕವಾಗಿ ಮಹತ್ವದ್ದಾಗಿದ್ದು ಕನಕಗಿರಿಯ ಅರಸರ ಇತಿಹಾಸದ ಮೇಲೆ ಹೊಸ ಬೆಳಕು ಚೆಲ್ಲುತ್ತದೆ .ಇದು ಐದನೇ ದೊರೆ ಇಮ್ಮಡಿ ಉಡಚನಾಯಕನ ಪಟ್ಟದ ರಾಣಿ ಚಿಕ್ಕ ಲಕ್ಷ್ಮಮ್ಮನ ಮಗ ಲಕ್ಷ್ಮಪ್ಪ ನಾಯಕನು ಕನಕಗಿರಿ ವಿದ್ಯಾನಗರ ಮಾರ್ಗದಲ್ಲಿ ಬಂಕಾಪುರದ ಬಳಿ ದೇವಸ್ಥಾನ, ಬಾವಿ ,ವನಗಳನ್ನು ನಿರ್ಮಿಸಿ ದೇವರ ಪೂಜೆಗಾಗಿ ಗದ್ದೆಯನ್ನು ದಾನವಾಗಿ ಸಮರ್ಪಿಸಿದ ಬಗ್ಗೆ ತಿಳಿಸುತ್ತದೆ .ಪ್ರಾಸಂಗಿಕವಾಗಿ ಶಾಸನದಲ್ಲಿ ಇಮ್ಮಡಿ ಉಡಚನಾಯಕನ ತಂದೆ ಕನಕಯ್ಯ ನಾಯಕ, ತಾತ ಕೆಲವಡಿ ಉಡಚ ನಾಯಕ ಎಂದು ತಿಳಿಸಿರುವುದರಿಂದ ಈ ಇಬ್ಬರು ಅರಸರ ಬಗ್ಗೆ ಮೊಟ್ಟ ಮೊದಲ ಶಾಸನ ಉಲ್ಲೇಖ ದೊರೆತಂತಾಗಿದೆ.ಇಮ್ಮಡಿ ಉಡಚನಾಯಕನಿಗೆ ಚಿನ್ನಮ್ಮ, ಅಚ್ಚಮ್ಮ, ಲಕ್ಷ್ಮಮ್ಮ ಎಂಬ ರಾಣಿಯರಿದ್ದುದು ಇತರ ಶಾಸನಗಳಿಂದ ತಿಳಿದುಬಂದಿತ್ತು. ಆದರೆ ಈ ಶಾಸನ ಲಕ್ಷ್ಮಮ್ಮನು ಪಟ್ಟದ ರಾಣಿ ಎಂದೂ ಆಕೆಗೆ ಲಕ್ಷ್ಮಪ್ಪ ನಾಯಕ ಎಂಬ ಮಗ ಇದ್ದ ಎಂಬುದು ಹೊಸ ಸಂಗತಿಯನ್ನು ತಿಳಿಸುತ್ತದೆ. ಬಂಕಾಪುರದಲ್ಲಿ ಲಕ್ಷ್ಮಪ್ಪನಾಯಕನ ಪರವಾಗಿ ರಾಂ ಭೋಯಿ ತಿಮ್ಮಯ್ಯ ಎಂಬವನು ದೇವಾಲಯವನ್ನು ಕಟ್ಟಿಸುತ್ತಾನೆ . ಇಂದಿಗೂ ಈ ದೇವಾಲಯಕ್ಕೆ ರಾಮ ತಿಮ್ಮಪ್ಪನ ಗುಡಿ( ವಿಷ್ಣು) ಎಂದೇ ಕರೆಯಲಾಗುತ್ತಿದೆ. ಶಾಸನದಲ್ಲಿ ಉಕ್ತವಾದ ಕಾಲಮಾನ ಶಾಲಿವಾಹನ ಶಕೆ 1603ನೇ ದುರ್ಮಖಿ ನಾಮ ಸಂವತ್ಸರದ ಪಾಲ್ಗುಣ ಶುದ್ಧ 12 ಎಂದಿದ್ದು ಅದು ಸಾಮಾನ್ಯ ಶಕೆ ಮಾರ್ಚ್ 4 , 1682 ಕ್ಕೆ ಸರಿಯಾಗುತ್ತದೆ. ಶಾಸನದ ಗುಂಡಿನ ಹಿಂಬದಿಯಲ್ಲಿ ಎಲ್ಲಾ ಶಾಸನಗಳಿಗಿರುವಂತೆ ಶಾಪಾಶಯದ ಶ್ಲೋಕವಿದ್ದು ದಾನ ಅಪಹರಿಸಿದ ಹಿಂದುಗಳು ವಾರಣಾಸಿಯಲ್ಲಿ ಗೋವು ಕೊಂದ ಪಾಪಕ್ಕೆ ಹೋಗುವರು ಎಂದಿದೆ. ಜೊತೆಗೆ ಮುಸಲ್ಮಾನರು ತಮ್ಮ ಮಸೀದಿಯಲ್ಲಿ ಹಂದಿ ಕೊಂದ ಪಾಪಕ್ಕೆ ಹೋಗುವರು ಎಂದಿರುವುದು ಅಪರೂಪವಾಗಿದೆ. ಕನಕಗಿರಿ ನಾಯಕರ ಎಲ್ಲಾ ಶಿಲಾಶಾಸನಗಳ ಪೈಕಿ ಇದು ಮಾತ್ರ ಶಾಸನ ರಚನೆಯ ನಮಸ್ತುಂಗ ಎಂಬ ಶಿವಸ್ತುತಿಯ ಮಂಗಳಸ್ತೋತ್ರದಿಂದ ಶಾಪಾಶಯದವರೆಗಿನ ಎಲ್ಲಾ ಅಂಶಗಳನ್ನು ಅನುಸರಿಸಿ ರಚಿಸಿದ ಶಾಸನ ವಾಗಿದೆ. ಎರಡನೇ ಶಾಸನ ಇಮ್ಮಡಿ ಉಡಚನಾಯಕ ಬಂಕಾಪುರದ ಗೌಡ, ಶಾನುಭೋಗರಿಗೆ ಮನೆ, ಗದ್ದೆ ನೀಡಿದ ಬಗ್ಗೆ ತಿಳಿಸುತ್ತದೆ.ಈ ಶಾಸನಗಳ ಕುರಿತಾಗಿ ಹೆಚ್ಚಿನ ಅಧ್ಯಯನ ಕೈಗೊಳ್ಳಲಾಗುವುದೆಂದು ಮತ್ತು ಶಾಸನ ಶೋಧನೆಯಲ್ಲಿ ಕನಕಗಿರಿಯ ದುರ್ಗಾದಾಸ್ ಯಾದವ್, ಬಂಕಾಪುರದ ಸೋಮನಾಥ, ಗಂಗಾವತಿಯ ಪ್ರೊ.ಬಸವರಾಜ್ ಅಯೋಧ್ಯ ,ಡಾ. ಸುರೇಶ್ ಗೌಡ ಮತ್ತು ಹರನಾಯಕ ನೆರವಾಗಿದ್ದಾರೆಂದು ಡಾ.ಕೋಲ್ಕಾರ್ ತಿಳಿಸಿದ್ದಾರೆ.

ರೈತ ಸೊಸೈಟಿ ಮೂಲಕ ರಸಗೊಬ್ಬರ ವಿತರಣೆಗೆ ಆದ್ಯತೆ ನೀಡಿ- ಸಚಿವ ಶಿವರಾಜ ತಂಗಡಗಿ
Give priority to fertilizer distribution through farmer societies - Minister Shivaraj Thangadgi

ಕೊಪ್ಪಳ (ಕರ್ನಾಟಕ ವಾರ್ತೆ): ರಸಗೊಬ್ಬರವನ್ನು ಮಾರಾಟಕ್ಕಾಗಿ ಒಂದೇ ಕಂಪನಿ ಅಥವಾ ಎಜೆನ್ಸಿಯವರಿಗೆ ನೀಡಿದರೆ, ರೈತರಿಗೆ ಖರೀಸಲು ಸಮಸ್ಯೆಯುಂಟಾಗುತ್ತದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿರುವ ಎಲ್ಲಾ ರೈತರ ಸೊಸೈಟಿ ಮೂಲಕ ರಸಗೊಬ್ಬರ ವಿತರಣೆಗೆ ಆದ್ಯತೆ ನೀಡುವಂತೆ ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ಎಸ್. ತಂಗಡಗಿ ಅವರು ಕೃಷಿ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಅವರು ಮಂಗಳವಾರ ಕೊಪ್ಪಳ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಕೊಪ್ಪಳ ಜಿಲ್ಲೆಯಲ್ಲಿ ರಸಗೊಬ್ಬರ ಪೂರೈಕೆಯ ಕುರಿತಾಗಿ ಕೃಷಿ ಇಲಾಖೆಯ ಅಧಿಕಾರಿಗಳಿಗೆ ಕರೆದ ಸಭೆಯಲ್ಲಿ ಅಧ್ಯಕ್ಷತೆವಹಿಸಿ ಮಾತನಾಡಿದರು.
ಕೊಪ್ಪಳ ಜಿಲ್ಲೆಯಲ್ಲಿ ಕೆಲವೇ ಅಂಗಡಿಗಳಿಗೆ ರಸಗೊಬ್ಬರ ಮಾರಾಟ ಮಾಡಲು ನೀಡಿರುವುದಾಗಿ ರೈತರು ದೂರು ನೀಡಿದ್ದಾರೆ. ಇದರಿಂದ ರೈತರು ಗೊಬ್ಬರಕ್ಕಾಗಿ ಕ್ಯೂನಲ್ಲಿ ನಿಲ್ಲುವಂತಾಗಿದೆ ಹಾಗೂ ಕೊಪ್ಪಳ ತಾಲ್ಲೂಕಿನ ಮುದ್ದಾಬಳ್ಳಿ ಗ್ರಾಮದಲ್ಲಿಯೂ ಸಹ ಒಂದೆ ಅಂಗಡಿಯಲ್ಲಿ ಗೊಬ್ಬರಕ್ಕಾಗಿ ರಾತ್ರಿ ಇಡೀ ರೈತರು ಪಾಳೆ ನಿಂತಿದ್ದಾರೆ ಎಂದು ಪ್ರತಿಕೆಗಳಲ್ಲಿ ವರದಿಯಾಗಿದೆ. ಕೂಡಲೇ ಜಿಲ್ಲೆಯ ಸಹಕಾರ ಸಂಘಗಳಿಗೆ ಮತ್ತು ರಸಗೊಬ್ಬರ ಮಾರಾಟ ಎಜೆನ್ಸಿಯವರಿಗೆ ರಸಗೊಬ್ಬರವನ್ನು ಸಮಾನವಾಗಿ ಹಂಚಿಕೆ ಮಾಡಲು ಕೃಷಿ ಇಲಾಖೆ ಅಧಿಕಾರಿಗಳು ತ್ವರಿತವಾಗಿ ಕ್ರಮ ಕೈಗೊಳ್ಳಬೇಕು. ಸದ್ಯ ರೈತರಿಗೆ ನಾವೆಲ್ಲರೂ ರಕ್ಷಣೆಯನ್ನು ನೀಡಬೇಕಾಗಿದ್ದು, ರಸಗೊಬ್ಬರ ಮಾರಾಟ ಕಂಪನಿಯವರು ತಮ್ಮ ಅನುಕೂಲಕ್ಕೆ ತಕ್ಕಂತೆ ರಸಗೊಬ್ಬರಗಳನ್ನು ಮಾರಾಟ ಮಾಡುವಂತಿಲ್ಲ. ಕಡ್ಡಾಯವಾಗಿ ಸರ್ಕಾರದ ಮಾರ್ಗಸೂಚಿಯನ್ನು ಪಾಲಿಸಬೇಕು ಎಂದರು.
ನಿಗದಿತ ದರಕ್ಕಿಂತಲು ಹೆಚ್ಚಿನ ದರಕ್ಕೆ ರಸಗೊಬ್ಬರವನ್ನು ಮಾರಾಟ ಮಾಡುವ ರಸಗೊಬ್ಬರ ಅಂಗಡಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಮತ್ತು ಅಂತಹ ಅಂಗಡಿಗಳ ಪರವಾನಿಗೆ ರದ್ದು ಮಾಡಬೇಕೆಂದು ಕೃಷಿ ಇಲಾಖೆಯ ಅಧಿಕಾರಿಗಳಿಗೆ ಸಚಿವರು ನಿರ್ದೇಶನ ನೀಡಿದರು.
ಕೊಪ್ಪಳ ಜಿಲ್ಲೆಯಲ್ಲಿ ಈ ವರ್ಷ ಮಳೆ ಬೇಗನೆಯಾಗಿರುವುದರಿಂದ ಭತ್ತದ ನಾಟಿ ಜೊತೆಗೆ ಮುಂಗಾರು ಬೆಳೆಗಳ ಬಿತ್ತನೆಯು ಬೇಗನೆ ಆಗಿದೆ. ಕಳೆದ ಬಾರಿಗಿಂತಲು ಈ ಬಾರಿ ಬಿತ್ತನೆ ಪ್ರಮಾಣವು ಹೆಚ್ಚಾಗಿದ್ದು ರಸಗೊಬ್ಬರದ ಬೇಡಿಕೆಯೂ ಹೆಚ್ಚಾಗಿದೆ. ರೈತರ ಬೇಡಿಕೆಯಂತೆ ಯುರಿಯಾ ಪೂರೈಸಬೇಕು. ಜಿಲ್ಲೆಗೆ ಮುಂದೆ ಬರಲಿರುವ ಯುರಿಯಾ ಪ್ರಮಾಣದ ಬಗ್ಗೆಯೂ ರೈತರಿಗೆ ಮಾಹಿತಿ ನೀಡಿ. ಅವಶ್ಯವಿರುವ ಪ್ರಮಾಣದಲ್ಲಿ ಮಾತ್ರ ಗೊಬ್ಬರ ಖರೀದಿಸುವಂತೆ ಹಾಗೂ ಜಿಲ್ಲೆಯಲ್ಲಿ ರಸಗೊಬ್ಬರಕ್ಕೆ ಯಾವುದೇ ಸಮಸ್ಯೆಯಿಲ್ಲ ಮತ್ತು ಮುಂದೆಯೂ ಯಾವುದೇ ರಸಗೊಬ್ಬರದ ಕೊರತೆಯಾಗುವುದಿಲ್ಲವೆಂದು ರೈತರಿಗೆ ಸೂಕ್ತ ಮಾಹಿತಿ ನೀಡಬೇಕು ಎಂದು ಹೇಳಿದರು.
ಜಿಲ್ಲೆಯ ನೀರಾವರಿ ಪ್ರದೇಶಗಳಲ್ಲಿ ಭತ್ತದ ಬೆಳೆಗೆ ಹಾಗೂ ಉತ್ತಮ ಮಳೆಯಿಂದಾಗಿ ಹೆಚ್ಚಿನ ಪ್ರಮಾಣದಲ್ಲಿ ಬಿತ್ತನೆಯಾದ ಮೆಕ್ಕೆಜೋಳ ಮತ್ತು ಇತರೆ ಬೆಳೆಗಳಿಗೂ ಯೂರಿಯಾದ ಅವಶ್ಯಕತೆಯಿರುವ ಕಾರಣ ಇದಕ್ಕೆ ಬೇಡಿಕೆ ಹೆಚ್ಚಾಗಿದೆ. ಅತಿ ಹೆಚ್ಚು ಬೇಡಿಕೆಯಿರುವ ಕಡೆ ಅಧಿಕಾರಿಗಳು ತ್ವರಿತವಾಗಿ ಗಮನ ಹರಿಸಬೇಕು. ರಸಗೊಬ್ಬರ ಪೂರೈಕೆಯನ್ನು ಸಮರ್ಪಕವಾಗಿ ನಿರ್ವಹಿಸಲು ಮೇಲ್ವಿಚಾರಣಾ ಸಮಿತಿಯನ್ನು ರಚನೆ ಮಾಡಬೇಕು. ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರಗಳಿಗೆ ಒಬ್ಬರಂತೆ ಜಿಲ್ಲಾ ಮಟ್ಟದ ಅಧಿಕಾರಿಗಳನ್ನು ನಿಯೋಜನೆ ಮಾಡಬೇಕು. ತಾಲ್ಲೂಕು ಮಟ್ಟದಲ್ಲಿ ಆಯಾ ತಹಶೀಲ್ದಾರರು ಮತ್ತು ಸಂಬಂಧಿಸಿದ ತಾಲ್ಲೂಕುಗಳ ಕೃಷಿ ಇಲಾಖೆ ಅಧಿಕಾರಿಗಳೊಂದಿಗೆ ಸಮಿತಿಯನ್ನು ರಚಿಸಿ, ಶೀಘ್ರದಲ್ಲಿಯೇ ಕಾರ್ಯಪ್ರವೃತ್ತರಾಗುವಂತೆ ಜಿಲ್ಲಾಧಿಕಾರಿಗಳು ಕ್ರಮ ವಹಿಸಬೇಕು. ರಸಗೊಬ್ಬರ ಪೂರೈಕೆಯಲ್ಲಿ ಯಾವುದೇ ಸಮಸ್ಯೆಉಂಟಾದಲ್ಲಿ ಸಂಬಂಧಿಸಿದ ತಾಲ್ಲೂಕುಗಳ ಕೃಷಿ ಇಲಾಖೆ ಅಧಿಕಾರಿಗಳನ್ನೆ ಹೊಣೆಗಾರರನ್ನಾಗಿ ಮಾಡಲಾಗುವುದು ಮತ್ತು ಆಯಾ ತಾಲ್ಲೂಕಿನ ತಹಶೀಲ್ದಾರರ ಮೇಲೆಯೂ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ಸೂಚನೆ ನೀಡಿದರು.
ಕೊಪ್ಪಳ ಶಾಸಕರಾದ ಕೆ.ರಾಘವೇಂದ್ರ ಹಿಟ್ನಾಳ ಅವರು ಮಾತನಾಡಿ, ಕೊಪ್ಪಳ ಜಿಲ್ಲೆಯಲ್ಲಿ ಹೆಚ್ಚಿನ ದರಕ್ಕೆ ರಸಗೊಬ್ಬರ ಮಾರಾಟ ಮಾಡುತ್ತಿರುವ ಕುರಿತು ದೂರುಗಳು ಬರುತ್ತಿದ್ದು, ಇದರ ಕಡಿವಾಣಕ್ಕಾಗಿ ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಬೇಕು ಹಾಗೂ ಈ ಬಗ್ಗೆ ತಹಶೀಲ್ದಾರರು ಗೊಬ್ಬರ ಮಾರಾಟ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲಿಸಿ, ಅಗತ್ಯ ಕ್ರಮ ಕೈಗೊಳ್ಳಬೇಕು. ಎಲ್ಲಾ ರೈತರ ಸೊಸೈಟಿಗಳು ಮತ್ತು ಕಂಪನಿಗಳಿಗೆ ಗೊಬ್ಬರವನ್ನು ಸಮಾನವಾಗಿ ಹಂಚಿಕೆ ಮಾಡಬೇಕು ಎಂದರು.
ಕೃಷಿ ಇಲಾಖೆ ಜಂಟಿ ನಿರ್ದೇಶಕ ರುದ್ರೇಶಪ್ಪ ಟಿ.ಎಸ್ ಅವರು, ಕೊಪ್ಪಳ ಜಿಲ್ಲೆಯಲ್ಲಿ ಈ ವರ್ಷ ಮಳೆ ಬೇಗನೆಯಾಗಿರುವುದರಿಂದ ಭತ್ತದ ನಾಟಿ ಜೊತೆಗೆ ಮುಂಗಾರು ಬೆಳೆಗಳ ಬಿತ್ತನೆಯು ಬೇಗನೆ ಆಗಿದೆ. ಕಳೆದ ವರ್ಷ 2.41 ಲಕ್ಷ ಹೆಕ್ಟರ್ ಬಿತ್ತನೆಯಾಗಿದ್ದು, ಈ ವರ್ಷ 3.26 ಲಕ್ಷ ಹೆಕ್ಟರ್ ಬಿತ್ತನೆಯಾಗಿದ್ದು, ಹೆಚ್ಚುವರಿಯಾಗಿ 85 ಸಾವಿರ ಹೆಕ್ಟರ್ ಪ್ರದೇಶದಲ್ಲಿ ಬಿತ್ತನೆ ಯಾಗಿರುತ್ತದೆ. ಹಾಗಾಗಿ ರಸಗೊಬ್ಬರದ ಬೇಡಿಕೆಯೂ ಹೆಚ್ಚಾಗಿದೆ. ಕಳೆದ ವರ್ಷ ಜುಲೈ ಮಾಹೆಯಲ್ಲಿ 9610 ಟನ್ ಯುರಿಯಾದ ಬೇಡಿಕೆಯಿತ್ತು. ಈ ಬಾರಿ 10,360 ಟನ್ ಯುರಿಯಾದ ಬೇಡಿಕೆಯಲ್ಲಿ ಈಗಾಗಲೇ 11,252 ಟನ್ ಯುರಿಯಾ ಪೂರೈಸಲಾಗಿದೆ. ಇಂದು ಬೆಳಿಗ್ಗೆಯೂ 230 ಟನ್ ಯುರಿಯಾ ಜಿಲ್ಲೆಗೆ ಬಂದಿದ್ದು, ಮುಂದಿನ ವಾರದಲ್ಲಿ ಸುಮಾರು 3431 ಟನ್ ಯುರಿಯಾ ಜಿಲ್ಲೆಗೆ ಬರಲಿದ್ದು, ಹಂತ ಹಂತವಾಗಿ ಆಗಸ್ಟ್ ಮಾಹೆಯ ಬೇಡಿಯ ಅನುಗುಣವಾಗಿ ರಸಗೊಬ್ಬರವನ್ನು ಪೂರೈಸಲಾಗುತ್ತಿದೆ ಎಂದು ಸಭೆಯಲ್ಲಿ ಮಾಹಿತಿ ನೀಡಿದರು.
ಸಭೆಯಲ್ಲಿ ಕೊಪ್ಪಳ ಜಿಲ್ಲಾಧಿಕಾರಿ ಸುರೇಶ ಬಿ. ಇಟ್ನಾಳ, ಜಿಲ್ಲಾ ಪಂಚಾಯತ್ ಮುಖ್ಯಕಾಯನಿರ್ವಾಹಕ ಅಧಿಕಾರಿ ವರ್ಣಿತ ನೇಗಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ರಾಮ್ ಎಲ್. ಅರಸಿದ್ದಿ, ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ, ಉಪವಿಭಾಗಾಧಿಕಾರಿ ಕ್ಯಾಪ್ಟನ್ ಮಹೇಶ ಮಾಲಗಿತ್ತಿ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ರೆಡ್ಡಿ ಶ್ರೀನಿವಾಸ, ಉಪಾಧ್ಯಕ್ಷರಾದ ಮಂಜುನಾಥ ಗೊಂಡಬಾಳ, ಉಪ ನಿರ್ದೇಶಕ ಎಲ್.ಸಿದ್ದೇಶ್ ಇತರೆ ಸೇರಿದಂತೆ ಇಲಾಖೆಗಳ ಅಧಿಕಾರಿಗಳು, ತಹಶೀಲ್ದಾರರು, ವಿವಿಧ ತಾಲ್ಲೂಕುಗಳ ಕೃಷಿ ಅಧಿಕಾರಿಗಳು, ರಸಗೊಬ್ಬರ ವಿತರಕ ಕಂಪನಿಗಳ ಪ್ರತಿನಿಧಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

ಕ್ರಿಸ್ತರಾಜ ವಿದ್ಯಾಸಂಸ್ಥೆಯಲ್ಲಿ ಯಶಸ್ವಿಯಾಗಿ ನಡೆದ “ಗ್ರೀನ್ ಕ್ಯಾಂಪಸ್ ಕ್ಲೀನ್ ಕ್ಯಾಂಪಸ್” ಉದ್ಘಾಟನಾ ಕಾರ್ಯಕ್ರಮ.
The inauguration program of "Green Campus Clean Campus" was successfully held at Christaraja Educational Institution.


ವರದಿ : ಬಂಗಾರಪ್ಪ .ಸಿ .
ಹನೂರು :ನಿನ್ನೆ ಕ್ರಿಸ್ತರಾಜ ವಿದ್ಯಾಸಂಸ್ಥೆಯಲ್ಲಿ ಪರಿಸರ ಸ್ನೇಹಿ ಹಾಗೂ ಪರಿಸರದ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮವನ್ನು ಯಶಸ್ವಿಯಾಗಿ ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಹನೂರು ಬಫರ್ ವಲಯದ ವಲಯ ಅರಣ್ಯ ಅಧಿಕಾರಿಗಳಾದ ಉಮಾಪತಿ ಕೆ ರವರು ಆಗಮಿಸಿ, ಇದೊಂದು ಅರ್ಥಪೂರ್ಣವಾದ ಕಾರ್ಯಕ್ರಮ ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ ಈ ನಿಟ್ಟಿನಲ್ಲಿ ಕ್ರಿಸ್ತರಾಜ ವಿದ್ಯಾಸಂಸ್ಥೆ ಇಂತಹ ಕಾರ್ಯಕ್ರಮವನ್ನು ಹಮ್ಮಿಕೊಂಡಿರುವುದು ಶ್ಲಾಘನೀಯ ಎಂದು ಬಣ್ಣಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ವ್ಯವಸ್ಥಾಪಕ ವಂದನೀಯ ಫಾದರ್ ರೋಷನ್ ರವರು ಇದೊಂದು ವೈಚಾರಿಕ ಹಾಗೂ ವೈಜ್ಞಾನಿಕ ಕಾರ್ಯಕ್ರಮ ವಿದ್ಯಾರ್ಥಿಗಳು ಶಾಲಾ ಹಂತದಿಂದಲೇ ಪರಿಸರದ ಬಗ್ಗೆ ಕಾಳಜಿ ವಹಿಸಿಕೊಂಡು ಪರಿಸರವನ್ನು ಉಳಿಸಿ ಬೆಳೆಸುವ ಕಾರ್ಯವನ್ನು ಮಾಡಬೇಕೆಂದು ಕರೆನೀಡಿದರು.
ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಮತ್ತೊಬ್ಬ ಅತಿಥಿ ಸಂಸ್ಥೆಯ ಹಳೆಯ ವಿದ್ಯಾರ್ಥಿ ಹಾಗೂ ಹನೂರು ಅಗ್ನಿಶಾಮಕ ಠಾಣೆಯ ಪ್ರಭಾರ ಅಧಿಕಾರಿ ಮಹೇಶ್ ರವರು ಭಾಗವಹಿಸಿದ್ದರು.
ಕಾಲೇಜು ವಿದ್ಯಾರ್ಥಿಗಳು ಪರಿಸರದ ಬಗ್ಗೆ ಅರಿವು ಮೂಡಿಸುವ ಪಥ ಸಂಚಲನ, ಪರಿಸರದ ಬಗ್ಗೆ ಅರಿವು ಮೂಡಿಸುವ ನಾಟಕ, ನೃತ್ಯ ಪ್ರದರ್ಶನ ಹಾಗೂ ವಿವಿಧ ಕಲಾ ತಂಡಗಳು ನೆರೆದಿದ್ದವರ ಕಣ್ಮನ ಸೆಳೆದವು.

   ಈ ಸಂದರ್ಭದಲ್ಲಿ ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲೆ ಸಿಸ್ಟರ್ ಶಾಂತಿ, ಮುಖ್ಯೋಪಾಧ್ಯಾಯರಾದ ಸುಬ್ರಹ್ಮಣ್ಯ, ಸಿಸ್ಟರ್ ಜೆಸಿಂತಾ ಗಲ್ಬವೋ, ಪುಷ್ಪ ಸಗಾಯ ಉಪನ್ಯಾಸಕರು , ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಕಲ್ಲಿಗೆ ಹಾಲಿರೆಯ ಬೇಡಿ, ಹಸಿದವರಿಗೆ ದಾನ ಮಾಡಿ: ಬಸವರಾಜಪ್ಪ ಶರಣರು.

Don't ask for alms from a stone, donate to the hungry: Basavarajappa Sharanaru.

ಸಿರಿಗೇರಿ : ಆಹಾರ, ಗಾಳಿ, ಬೆಳಕು, ನೀರು ಇವುಗಳು ಪ್ರಾಕೃತಿಕವಾಗಿ ದೊರೆಯುವ ವಸ್ತುಗಳು ಇವುಗಳನ್ನ ಸದ್ಬಳಕೆ ಮಾಡಿಕೊಂಡು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಹಿರಿಯರು ಮಾಡಿದ ಹಳೆಯ ಮೌಢ್ಯಗಳನ್ನು ತ್ಯಜಿಸಿ ಪ್ರಾತ್ಯಕ್ಷಕವಾಗಿ, ವೈಜ್ಞಾನಿಕವಾಗಿ ವಿದ್ಯಾರ್ಥಿಗಳು ಅಧ್ಯಯನಶೀಲರಾಗಬೇಕು. ಎಂದು ವೆಂಕಟಾಪುರದ ಬಸವರಾಜಪ್ಪ ಶರಣರು ತಿಳಿಸಿದರು.

ಅವರು ವಿವೇಕಾನಂದ ಪ್ರೌಢಶಾಲೆಯಲ್ಲಿ ಬಸವ ಬಳಗದ ಟ್ರಸ್ಟ್ ವತಿಯಿಂದ ಅರಿವು ಎಂಬ ಕಾರ್ಯಕ್ರಮದಲ್ಲಿ ವಿಚಾರವನ್ನು ತಿಳಿಸಿದರು.

ನಾವೇ ಸೃಷ್ಟಿ ಮಾಡಿದ ಕಲ್ಲಿನ ನಾಗದೇವತೆಗಳಿಗೆ ಹಾಲೆರೆದರೆ ಹಾಲು ಮಣ್ಣು ಪಾಲಾಗುತ್ತದೆ. ಹಾವಿಗೆ ಹಾಲೆರೆದರೆ ಸಾಯುತ್ತದೆ. ಅದಕ್ಕೆ ಗಾಳಿಯೇ ಆಹಾರ ಸಾವಿರಾರು ನಿರ್ಗತಿಕರಿಗೆ ಹಾಲನ್ನು ನೀಡಿದರೆ ಹಸಿವು ನೀಗುತ್ತದೆ. ದೇವರ ಹೆಸರುಗಳಲ್ಲಿ ದುರ್ವಿನಿಯೋಗ ಮಾಡಬೇಡಿ. ವಿದ್ಯಾರ್ಥಿಗಳು ತಿಳುವಳಿಕೆಯಿಂದ ನಡೆದುಕೊಳ್ಳಬೇಕು. ಸತತ ಪ್ರಯತ್ನ, ಆತ್ಮವಿಶ್ವಾಸದಿಂದ ಕಾರ್ಯವನ್ಮುಖ ವಾಗಬೇಕು ಎಂದು ಮಕ್ಕಳಿಗೆ ಮಾರ್ಗದರ್ಶನ ನೀಡಿದರು.

ಮುಖ್ಯ ಶಿಕ್ಷಕರ ಎನ್ ಪಂಪಾಪತಿ ಬಸವೇಶ್ವರ ಭಾವಚಿತ್ರಕ್ಕೆ ಪೂಜಿ ಸಲ್ಲಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು.

ಬಸವ ಬಳಗದ ಗ್ರಾಮ ಘಟಕದ ಅಧ್ಯಕ್ಷರಾದ ಶಶಿಧರ್ ಗೌಡ ಮಾತನಾಡಿ ಇಂದಿನ ಮಕ್ಕಳು ನಾಳಿನ ಪ್ರಜೆಗಳು ಈಗಿನಿಂದಲೇ ಒಳ್ಳೆಯ ಯೋಚನೆ, ಅಭ್ಯಾಸಗಳನ್ನು ರೂಢಿಸಿ ಕೊಳ್ಳಿ ಎಂದರು.

ನಂತರ ಎಲ್ಲಾ ಮಕ್ಕಳಿಗೆ ಹಾಲನ್ನು ವಿತರಿಸಲಾಯಿತು.

ಈ ಸಂದರ್ಭದಲ್ಲಿ ಮುಖ್ಯ ಶಿಕ್ಷಕರಾದ ಎನ್ ಪಂಪಾಪತಿ ಬಸವ ಬಳಗದ ಸದಸ್ಯರಾದ ಬಸವರಾಜ್ ಗೌಡ, ವೀರೇಶ್ ಗೌಡ, ಹೆಚ್ ಎರ್ರೆಪ್ಪ, ಎಂ ಪಂಪನಗೌಡ, ಆರ್ ಯಲ್ಲನಗೌಡ, ಗುಂಡಿಗನೂರು ಯಲ್ಲನಗೌಡ, ಹೊಸಳ್ಳಿ ಚಂದ್ರಶೇಖರ್ ನಿಮಗಾಗಿ ನಾವು ಸಂಸ್ಥೆಯ ಪದಾಧಿಕಾರಿಗಳಾದ ಹಳ್ಳಿ ಮರದ ನಾಗರಾಜ್, ಶಿವಾಜಿ ರಾವ್, ಪುನೀತ್, ಶಿಕ್ಷಕರಾದ ಮಹಾಬಲೇಶ್, ರಂಜಿತ್ ಕುಮಾರ್ ಇದ್ದರು.

ವೆಂಕಟಪುರದ ಬಸವರಾಜಪ್ಪ ಶರಣರು ಅರಿವು ಎಂಬ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದರು.ಪ್ರಮುಖರಾದ ಬಸವರಾಜ್ ಗೌಡ, ಹೆಚ್ ಎರ್ರೆಪ್ಪ, ವೀರೇಶ್ ಗೌಡ ಇದ್ದರು.

ಚರ್ಮ, ಕೂದಲು-ಕಸಿ ಕ್ಷೇತ್ರದಲ್ಲಿ ಹೆಚ್ಚುತ್ತಿರುವ ನಕಲಿ ತಜ್ಞರನ್ನು ನಿಯಂತ್ರಿಸುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ಒತ್ತಾಯ
Health and Family Welfare Department urged to control the increasing number of fake specialists in the skin, hair and transplant sectors


ಬೆಂಗಳೂರು,ಜು.29: ಚರ್ಮ ಸಂಬಂಧಿ ಹಾಗು ಕೂದಲು-ಕಸಿ ಕ್ಷೇತ್ರದಲ್ಲಿ ಹೆಚ್ಚುತ್ತಿರುವ ನಕಲಿ ತಜ್ಞರನ್ನು ನಿಯಂತ್ರಿಸುವಂತೆ ಕರ್ನಾಟಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ಐಎಡಿವಿಎಲ್- ಚರ್ಮ ತಜ್ಞರ ಸಂಘದ ಕರ್ನಾಟಕ ಶಾಖೆ ಒತ್ತಾಯಿಸಿದೆ.
ಚರ್ಮದ ಸಮಸ್ಯೆಗೆ ಜೊತೆಗೆ ಅವೈಜ್ಞಾನಿಕವಾಗಿ ಕೂದಲು ಕಸಿ ಮಾಡುವುದಾಗಿ ಜನ ಸಾಮಾನ್ಯರನ್ನು ಯಾಮಾರಿಸುತ್ತಿದ್ದು, ಕೂಡಲೇ ತಪ್ಪಿತಸ್ಥರ ಮೇಲೆ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಯುಕ್ತರಾದ ಶಿವಕುಮಾರ್ ಕೆ.ಬಿ., ಉಪ ನಿರ್ದೇಶಕ ವಿವೇಕ್ ದೊರೈ, ಅವರನ್ನು ಭೇಟಿಯಾಗಿ ರಾಜ್ಯದಲ್ಲಿ ಚರ್ಮರೋಗ ಕ್ಷೇತ್ರದಲ್ಲಿ ಹೆಚ್ಚುತ್ತಿರುವ ನಕಲಿ ತಜ್ಞರ ಹಾವಳಿ ಮತ್ತು ಅದರ ಗಂಭೀರ ಸಾರ್ವಜನಿಕ ಆರೋಗ್ಯದ ಮೇಲಿನ ದುಷ್ಪರಿಣಾಮಗಳ ಬಗ್ಗೆ ನಿಯೋಗ ಕಳವಳ ವ್ಯಕ್ತಪಡಿಸಿತು.
ಐಎಡಿವಿಎಲ್-ಕೆಎನ್ನ ಅಂಟಿಕ್ವ್ಯಾಕರಿ ಮತ್ತು ಕಾನೂನು ವಿಭಾಗವು ಕರ್ನಾಟಕದಾದ್ಯಂತ 65 ಕ್ಕೂ ಅಧಿಕ ನಕಲಿ ಚರ್ಮ ಕ್ಲಿನಿಕ್ಗಳ ಬಗ್ಗೆ ಸ್ಪಷ್ಟ ದಾಖಲೆಗಳನ್ನು ಸಂಗ್ರಹಿಸಿದೆ. ಈ ಚರ್ಮ ಕ್ಲಿನಿಕ್‌ಗಳನ್ನು, ದಂತಚಿಕಿತ್ಸಕರು, ಬ್ಯೂಟಿಷಿಯನ್‌ಗಳು, ಸ್ಥಳೀಯ ಧಾರಾವಾಹಿ ನಟಿಯರು ಹಾಗೂ ಕೇವಲ ಹತ್ತನೇ ಅಥವಾ ಹನ್ನೆರಡನೇ ತರಗತಿವರೆಗೆ ಶಿಕ್ಷಣ ಪಡೆದ ವ್ಯಕ್ತಿಗಳು ನಕಲಿ ಪ್ರಮಾಣಪತ್ರಗಳು ಹಾಗೂ ಮಾನ್ಯತೆ ಇಲ್ಲದ ಪದವಿಗಳನ್ನು ಬಳಸಿ ನಡೆಸುತ್ತಿದ್ದಾರೆ ಎಂದು ನಿಯೋಗ ಆರೋಪಿಸಿದೆ.
ಈ ಮಂಡಳಿಯನ್ನು ಐಎಡಿವಿಎಲ್-ಕೆಎನ್ ಅಧ್ಯಕ್ಷರಾದ ಡಾ. ಮಂಜುನಾಥ ಹುಲ್ಮನಿ ನೇತೃತ್ವ ವಹಿಸಿದ್ದು, ಡಾ. ಮಹೇಶ್ ಕುಮಾರ್ ಸಿ (ಮಾನ್ಯ ಕಾರ್ಯದರ್ಶಿ), ಡಾ. ಸುಜಲಾ ಸಚ್ಚಿದಾನಂದ ಆರಾಧ್ಯ (ಮಾನ್ಯ ಖಜಾಂಚಿ), ಹಿರಿಯ ತಜ್ಞರುಗಳಾದ ಡಾ. ವೆಂಕಟ್ರಾಮ್ ಮೈಸೂರು ಮತ್ತು ಡಾ. ಜಗದೀಶ್ ಪಿ, ಹಾಗೂ ಡಾ. ಅಕ್ಷಯ್ ಸಾಮಗಾನಿ – ಅಂಟಿಕ್ವ್ಯಾಕರಿ ಮತ್ತು ಕಾನೂನು ವಿಭಾಗದ ಸಂಚಾಲಕರು ಇದ್ದರು.
ಮನವಿ ಸ್ವೀಕರಿಸಿ ಮಾತನಾಡಿದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಯುಕ್ತರಾದ ಶಿವಕುಮಾರ್, ಇಂತಹ ನಿಯಂತ್ರಣವಿಲ್ಲದ ಕ್ಲಿನಿಕ್ಗಳ ವ್ಯಾಪಕ ಜಾಲದ ಬಗ್ಗೆ ಕಳವಳ ವ್ಯಕ್ತಪಡಿಸಿದರು. ಸಾರ್ವಜನಿಕ ಆರೋಗ್ಯಕ್ಕೆ ಇದು ಉಂಟುಮಾಡಬಹುದಾದ ಅಪಾಯಗಳನ್ನು ತಪಿಸಬೇಕಾಗಿದೆ. ಇದಕ್ಕಾಗಿ ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ ಎಂದು ಭರವಸೆ ನೀಡಿದರು.
ಈ ನಿಟ್ಟಿನಲ್ಲಿ ಸಾರ್ವಜನಿಕರ ನಡುವೆ ಜಾಗೃತಿ ಮೂಡಿಸುವ ಅಗತ್ಯವಿದೆ. ಔಷಧಿ ಅಥವಾ ಚಿಕಿತ್ಸೆ ಪಡೆಯುವ ಮೊದಲು ನಿಮ್ಮ ಚರ್ಮರೋಗ ತಜ್ಞರ ವಿದ್ಯಾರ್ಹತೆಗಳನ್ನು ಪರಿಶೀಲಿಸುವುದು ಅವಶ್ಯಕ.ಈ ನಕಲಿ ವೈದ್ಯರ ವಿರುದ್ಧ ಕ್ರಮ ತೆಗೆದುಕೊಳ್ಳಲು ಸ್ಥಳೀಯ ರಾಜಕೀಯ ಒತ್ತಡ ಇರುವುದರ ಬಗ್ಗೆ ಆತಂಕ ವ್ಯಕ್ತಪಡಿಸಿ, ಸಾರ್ವಜನಿಕ ಆರೋಗ್ಯದ ದೃಷ್ಟಿಯಿಂದ ಶಾಶ್ವತ ಪರಿಹಾರವನ್ನು ರೂಪಿಸಬೇಕೆಂದು ಒತ್ತಾಯಿಸಿತು.

 ಪಶುಸಖಿ ಶ್ರೀಮತಿ ಹುಲಿಗೆಮ್ಮ ಕುಂಟೋಜಿ, ನಿಧನ
Pasturist Mrs. Huligemma Kuntoji passes away


ಕಾರಟಗಿ: ತಾಲೂಕಿನ ಶ್ರೀಮತಿ ಹುಲಿಗೆಮ್ಮ ಕುಂಟೋಜಿ, ಬರಗೂರು ಗ್ರಾಮ ಪಂಚಾಯಿತಿಯ ವ್ಯಾಪ್ತಿಗೆ ಬರುವ ಕುಂಟೋಜಿ ಗ್ರಾಮದರು ಪಶು ಸಖಿ ಯಾಗಿ ಕಾರ್ಯನಿರ್ವಹಿಸುತ್ತಿದ್ದರು ಇವರು ಎರಡು ದಿನದ ಹಿಂದೆ ಸೈಕಲ್ ಮೋಟರದಲ್ಲಿ ಅಪಘಾತವಾಗಿದ್ದು, ಮಂಗಳವಾರ ಮಧ್ಯಾಹ್ನ 3 ಗಂಟೆ ಸುಮಾರಿಗೆ ಮರಣ ಹೊಂದಿದ್ದಾರೆ, ಬುಧವಾರ ಬೆಳಗಿನ ಜಾವ 11 ಗಂಟೆಗೆ ಕುಂಟೋಜಿ ಗ್ರಾಮದಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಗುವುದೆಂದು ಕುಟುಂಬದ ಮೂಲಸ್ಥರು ತಿಳಿಸಿದ್ದಾರೆ..

ಅಂತಿಮ ನಮನ: ಗ್ರಾಮ ಪಂಚಾಯಿತಿ ಅಧ್ಯಕ್ಷರು/ ಸದಸ್ಯರು ಅಧಿಕಾರಿಗಳು, ಸಿಬ್ಬಂದಿ ವರ್ಗದವರು, ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರು ನಿರ್ದೇಶಕರು, ಪಶು ಇಲಾಖೆಯ ಪಶು ವೈದ್ಯರು, ಗ್ರಾಮದ ಗುರು ಹಿರಿಯರು ಅಂತಿಮ ನಮನವನ್ನು ಸಲ್ಲಿಸಿದರು.

ಒಳಮೀಸಲಾತಿ ಜಾರಿಗಾಗಿಆಗಸ್ಟ್ 1 ಬೃಹತ್ ಪ್ರತಿಭಟನೆ : ಬಸವರಾಜ್ ದಡೇಸೂಗುರು,,
Massive protest on August 1 for implementation of internal reservation: Basavaraj Dadesuguru,,

ವರದಿ : ಪಂಚಯ್ಯ ಹಿರೇಮಠ.
ಕೊಪ್ಪಳ : ಒಳ ಮೀಸಲಾತಿ ಜಾರಿಗಾಗಿ ನಗರದ ಪ್ರವಾಸಿ ಮಂದಿರದಲ್ಲಿ ವಿವಿಧ ಮಾದಿಗ ಸಂಘಟನೆಗಳ ಒಕ್ಕೂಟದ ವತಿಯಿಂದ ಮಂಗಳವಾರ ಪೂರ್ವಭಾವಿ ಸಭೆ ನಡೆಯಿತು

ಪೂರ್ವಭಾವಿ ಸಭೆಯಲ್ಲಿ ಅಗಸ್ಟ್ 1 ರಂದು ಒಳಮೀಸಲಾತಿ ಜಾರಿಗಾಗಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದ್ದು, ಸಭೆಯಲ್ಲಿ ಕೊಪ್ಪಳ ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರಗಳಿಂದ ಸುಮಾರು 10 ಸಾವಿರ ಮಾದಿಗ ಸಮುದಾಯ ಜನಾಂಗ ಬರುತ್ತಿದ್ದು, ಅಂದು ಜಿಲ್ಲಾಧಿಕಾರಿಗಳ ಕಚೇರಿಯ ಮುಂದೆ ಬೃಹತ್ ಪ್ರತಿಭಟನೆ ನಡೆಯಲಿದೆ ಎಂದು ಚರ್ಚಿಸಲಾಯಿತು.

ಒಳ ಮೀಸಲಾತಿ ವಿಚಾರವಾಗಿ 2024 ಆಗಸ್ಟ್ 1 ರಂದು ಸುಪ್ರೀಂಕೋರ್ಟ್ ತೀರ್ಪು ನೀಡಿ ಒಂದು ವರ್ಷ ಕಳೆಯುತ್ತಿದೆ, ನ್ಯಾಯಾಲಯದ ಆದೇಶವನ್ನು ಪಾಲಿಸದ ಕಾಂಗ್ರೆಸ್ ಸರ್ಕಾರ ಒಳಮೀಸಲಾತಿ ಜಾರಿಮಾಡದೆ, ಹಲವು ನೆಪಗಳನ್ನು ಹೇಳುತ್ತಾ, ದಲಿತ ಸಮುದಾಯಕ್ಕೆ ಅನ್ಯಾಯ ಮಾಡುತ್ತಿದೆ ಎಂದರು.

ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಆಡಳಿತಕ್ಕೆ ಬಂದು ಎರಡು ವರ್ಷಗಳು ಗತಿಸಿವೆ. ಚುನಾವಣೆ ಸಂದರ್ಭದಲ್ಲಿ ಪ್ರಣಾಳಿಕೆಯಲ್ಲಿ ಒಳ ಮೀಸಲಾತಿ ಜಾರಿ ಬಗ್ಗೆ ಭರವಸೆ ನೀಡಲಾಗಿತ್ತು, ಎರಡು ವರ್ಷ ಗತಿಸಿದರು ಸರ್ಕಾರ ಈ ಬಗ್ಗೆ ತುಟಿಬಿಚ್ಚುತ್ತಿಲ್ಲ. ಈ ಹಿನ್ನೆಲೆ ಮಾದಿಗ ಸಮುದಾಯ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತಪಡಿಸುತ್ತಿದೆ.

ಒಳ ಮೀಸಲಾತಿ ಬಾರಿಯಾಗದಿದ್ದರೆ ಸರ್ಕಾರ ಮುಂದಿನ ಪರಿಣಾಮ ಎದುರಿಸಬೇಕಾಗುತ್ತೆ. ಈ ಕೂಡಲೇ ಒಳ ಮೀಸಲಾತಿ ಜಾರಿಗೆಗೋಳಿಸಬೇಕು, ಸುಪ್ರೀಂಕೋರ್ಟ್ ಆದೇಶವನ್ನು ಗೌರವಿಸಬೇಕು, ಜಾರಿಯಾಗದಿದ್ದರೆ ಸರ್ಕಾರಿ ಕಚೇರಿಗಳಲ್ಲಿ ಯಾರಿಗೂ ಆಡಳಿತ ನಡೆಸುವುದಕ್ಕೆ ಬಿಡುವುದಿಲ್ಲ ನ್ಯಾಯ ಸಿಗುವವರೆಗೂ ನಿರಂತರ ಹೋರಾಟ ಮಾಡುತ್ತೇವೆ ಎಂದು ಸಭೆಯಲ್ಲಿ ಎಚ್ಚರಿಸಲಾಯಿತು.

ಮೀಸಲಾತಿ ಹೋರಾಟದಲ್ಲಿ ಜಿಲ್ಲೆಯ ಎಲ್ಲಾ ಮಾದಿಗ ಸಮುದಾಯದವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕು ಎಂದು ಸಭೆಯಲ್ಲಿ ಬಸವರಾಜ್ ದಡೇಸುಗೂರು ಕರೆ ನೀಡಿದರು.

ಸಭೆಯಲ್ಲಿ ಇಟಗಿ ಮರಳಸಿದ್ದ ಗದ್ದಿಗೆಪ್ಪ ಶ್ರೀಗಳು, ಮರಳು ಸಿದ್ದೇಶ್ವರ ಶ್ರೀಗಳು ಬಿಸರಳ್ಳಿ ಹಾಗೂ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಈರಪ್ಪ ಕುಡುಗುಂಟಿ, ಗವಿಸಿದ್ದಪ್ಪ ಕಂದಾರಿ, ಗಣೇಶ್ ಹೊರತಟ್ನಾಳ, ಮಂಜುನಾಥ ಮುಸಲಾಪುರ, ಪರಶುರಾಮಪ್ಪ ಆನೆಗುಂದಿ,ಹನುಮೇಶ ಕಡೆಮನಿ, ಚನ್ನಬಸಪ್ಪ ಹೊಳೆಯಪ್ಪನವರ್, ದ್ಯಾಮಣ್ಣ ಚಾಮಲಾಪುರ್, ಮಲ್ಲು ಪೂಜಾರ, ಯಲ್ಲಪ್ಪ ಮುದ್ಲಾಪುರ, ಗಾಳೆಪ್ಪ ಹಿಟ್ನಾಳ, ನಿಂಗಪ್ಪ ಮೈನಲ್ಲಿ, ಜುಂಜಪ್ಪ ಮೆಲ್ಲಿಕೇರಿ, ಮಹಾಲಕ್ಷ್ಮಿ ಕಂದಾರಿ, ಹನುಮಂತ ಮ್ಯಗಳಮನಿ, ಪರಶುರಾಮ ಕೀಡದಾಳ, ಹನುಮಂತಪ್ಪ ಡಗ್ಗಿ , ರಾಮಣ್ಣ ಚೌಡಕಿ, ಸೇರಿದಂತೆ ನೂರಾರು ಮಾದಿಗ ಸಮುದಾಯದ ಯುವಕರು ಹಿರಿಯರು ಭಾಗವಹಿಸಿದ್ದರು.