Breaking News

ಶಿಷ್ಟಾಚಾರ ಉಲ್ಲಂಘಿಸಿದ ಅಧಿಕಾರಿಗಳ ಮೇಲೆ ಕ್ರಮಕ್ಕೆ ಮ್ಯಾಗಳಮನಿ ಒತ್ತಾಯ.





Magalamani demands action against officers who violated etiquette.

ಗಂಗಾವತಿ :-8-ನಗರದ ತಾಲೂಕ ಪಂಚಾಯತ್ ಮಂಥನ ಸಭಾಂಗಣದಲ್ಲಿ ಸೋಮವಾರ ತ್ರೈಮಾಸಿಕ ಕೆ ಡಿ ಪಿ ಸಭೆ ಜರುಗಿತು. ಸಭೆಯಲ್ಲಿ ಅಧಿಕಾರಿಗಳು ಮತ್ತು ಕೆ ಡಿ ಪಿ ಸಭೆಯಲ್ಲಿ ಭಾಗವಹಿಸಲು ನಿಯಮದ ಪ್ರಕಾರ ಜನಪ್ರತಿನಿಧಿ ಭಾಗವಹಿಸಬೇಕಾಗಿರುತ್ತದೆ.ಆದರೆ ಬೇರೆಯವರು ಮತ್ತು ಶಾಸಕರ ಆಪ್ತರು ಭಾಗವಹಿಸುವಿಕೆಯಿಂದ ಶಿಷ್ಟಚಾರ ಉಲ್ಲಂಘನೆಯಾಗಿದೆ. ಸಭೆ ನಡೆಸುವ ಜವಾಬ್ದಾರಿ ಇರುವ ಅಧಿಕಾರಿಯು ಕರ್ತವ್ಯ ಲೋಪ ಮಾಡಿದ್ದಾರೆ. ಆ ಅಧಿಕಾರಿಯ ಮೇಲೆ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಕೊಪ್ಪಳ ಜಿಲ್ಲಾ ಸರ್ವಾ0ಗೀಣ ಅಭಿವೃದ್ಧಿ ಹೋರಾಟ ಸಮಿತಿಯ ಜಿಲ್ಲಾ ಅಧ್ಯಕ್ಷ ಬಸವರಾಜ ಮ್ಯಾಗಳಮನಿ ಆಗ್ರಹಿಸಿದ್ದಾರೆ. ಕ್ರಮ ತೆಗೆದುಕೊಳ್ಳದಿದ್ದರೆ ಮುಂದೆ ನಡೆಯುವ ಎಲ್ಲಾ ಕೆ ಡಿ ಪಿ ಸಭೆಗಳಿಗೆ ನಮ್ಮ ಸಂಘದ ಪದಾಧಿಕಾರಿಗಳು ಕೂಡ ಭಾಗವಹಿಸುತ್ತೇವೆ. ಮಂತ್ರಿಗಳ ಅಥವಾ ಶಾಸಕರ ಯಾವುದೇ ಸರ್ಕಾರಿ ಕಾರ್ಯಕ್ರಮಗಳ ವೇದಿಕೆಗಳಲ್ಲಿ ಶಿಷ್ಟಚಾರ ಉಲ್ಲಂಘನೆಯದಲ್ಲಿ ಸ್ಥಳದಲ್ಲಿಯೇ ಪ್ರತಿಭಟಿಸಲಾಗುವದು. ಈ ನಿಟ್ಟಿನಲ್ಲಿ ಸರಕಾರವು ಎಲ್ಲ ಅಧಿಕಾರಿಗಳೆಗೆ ಎಚ್ಚರಿಕೆ ನೀಡಬೇಕೆಂದು ಮ್ಯಾಗಳಮನಿ ಸರಕಾರವನ್ನು ಒತ್ತಾಯಿಸಿದ್ದಾರೆ.

ಜಾಹೀರಾತು

About Mallikarjun

Check Also

1001883611

ಗಿಣಿಗೇರಾ ಜಾನುವಾರು ಸಂತೆಯಲ್ಲಿ ವ್ಯಾಪಾವಿಲ್ಲದೆ ದನಕರುಗಳಿಗೆ ನೀರು ಮೇವಿಲ್ಲದೆ ಪರದಾಟ

Cattle are stranded without water or fodder at the Ginigera cattle fair due to lack …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.