Breaking News

ರಾಯಚೂರ ಜಿಲ್ಲೆಯ ನೂತನ ಜಿಲ್ಲಾ ಪಂಚಾಯತ್ ಸಿಇಓ ಈಶ್ವರ ಕುಮಾರ ಕಾಂದೂ ಅಧಿಕಾರ ಸ್ವೀಕಾರ

Raichur district's new Zilla Panchayat CEO Ishwar Kumar Kandu assumes office
Screenshot 2025 07 09 21 11 27 87 6012fa4d4ddec268fc5c7112cbb265e77353037667341317624 1024x886

ರಾಯಚೂರ ಜುಲೈ 9 (ಕ.ವಾ.): 2018ರ ಬ್ಯಾಚನ ಐಎಎಸ್ ಅಧಿಕಾರಿ ಈಶ್ವರ ಕುಮಾರ ಕಾಂದೂ ಅವರು ರಾಯಚೂರ ಜಿಲ್ಲಾ ಪಂಚಾಯತನ ನೂತನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಜುಲೈ 9ರಂದು ಅಧಿಕಾರ ಸ್ವೀಕರಿಸಿದರು.
ಮೂಲತಃ ಉತ್ತರ ಪ್ರದೇಶ ರಾಜ್ಯದವರಾದ ಈಶ್ವರ ಕುಮಾರ ಕಾಂದೂ ಅವರು ಈ ಮೊದಲು 2019-20ರಲ್ಲಿ ಬಳ್ಳಾರಿ ಜಿಲ್ಲೆಯಲ್ಲಿ ಪ್ರೊಬೆಷನರಿ ಅವಧಿಯನ್ನು ಪೂರ್ಣಗೊಳಿಸಿದರು. ಬಳಿಕ
ಮಡಿಕೇರಿಯಲ್ಲಿ 19 ತಿಂಗಳು ಸಹಾಯಕ ಆಯುಕ್ತರಾಗಿ ಸೇವೆ ಸಲ್ಲಿಸಿದರು. ನಂತರ ಬೆಂಗಳೂರಿನಲ್ಲಿ
ವಾಣಿಜ್ಯ ತೆರಿಗೆ ಇಲಾಖೆಯ ಹೆಚ್ಚುವರಿ ಆಯುಕ್ತರಾಗಿ, ಆ ಬಳಿಕ ಕಾರವಾರ ಜಿಲ್ಲೆಯಲ್ಲಿ ಎರಡೂವರೆ ವರ್ಷಗಳ ಕಾಲ ಜಿಲ್ಲಾ ಪಂಚಾಯತ್ ಸಿಇಓ ಆಗಿ ಕಾರ್ಯನಿರ್ವಹಿಸಿದ್ದಾರೆ.
ಇಲ್ಲಿನ ಜಿಪಂ ಸಿಇಓ ಆಗಿದ್ದ ರಾಹುಲ್ ತುಕಾರಾಂ ಪಾಂಡ್ವೆ ಅವರನ್ನು ಸರ್ಕಾರವು ಬೇರೆಡೆ ವರ್ಗಾಯಿಸಿದೆ.

ಜಾಹೀರಾತು

About Mallikarjun

Check Also

20251015 201304 collage.jpg

ರೈತರು ಕೃಷಿ ಸಂಸ್ಕರಣಾ ಘಟಕ ತರಬೇತಿಯಸದುಪಯೋಗ ಪಡೆದುಕೊಳ್ಳಬೇಕು- ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್

Farmers should take advantage of agro-processing unit training - Union Minister Nirmala Sitharaman ಕೊಪ್ಪಳ ಅಕ್ಟೋಬರ್ …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.