Breaking News

ಹುಟ್ಟುಹಬ್ಬವನ್ನು ಬುದ್ಧಿಮಾಂಧ್ಯ ಮಕ್ಕಳಿಗೆ ಹಾಗೂ ವಯೋವೃದ್ಧರಿಗೆ ಹಾಲು ಹಣ್ಣು ಹಂಚುವುದರ ಮೂಲಕ ಜನ್ಮದಿನ ಆಚರಣೆ

Birthdays are celebrated by distributing milk and fruits to mentally retarded children and the elderly.
Screenshot 2025 07 12 19 41 14 12 E307a3f9df9f380ebaf106e1dc980bb63277552732218385642 1024x576

ಗಂಗಾವತಿ: ಧೀರ ಕನ್ನಡಿಗರ ಕರ್ನಾಟಕ ರಕ್ಷಣಾ ವೇದಿಕೆಯ ಸಂಸ್ಥಾಪಕ ರಾಜ್ಯಾಧ್ಯಕ್ಷರಾದ ವಿರುಪಾಕ್ಷಿಗೌಡ ನಾಯಕ ಅವರು ತಮ್ಮ ಜನ್ಮದಿನದ ಅಂಗವಾಗಿ ನಗರದ ಲಯನ್ಸ್ ಬುದ್ಧಿಮಾಂಧ್ಯ ಮಕ್ಕಳಿಗೆ ಡ್ರಾಯಿಂಗ್ ಬುಕ್, ಸ್ಕೆಚ್ ಪೆನ್ಸಿಲ್ ನೀಡುವುದರ ಮೂಲಕ ಹಾಗೂ ೬೦ ಹಾಸಿಗೆ ಹೆರಿಗೆ ಆಸ್ಪತ್ರೆಯಲ್ಲಿ ಹಣ್ಣು ಬ್ರೆಡ್ ವಿತರಣೆ ಮೂಲಕ ಮತ್ತು ನವ ಜೀವನ ವೃದ್ರಾಶ್ರಮದಲ್ಲಿ ವಯೋವೃದ್ಧರಿಗೆ ಹಣ್ಣು ಹಾಗೂ ಊಟ ವಿತರಣೆ ಮೂಲಕ ಆಚರಣೆ ಮಾಡಿಕೊಂಡರು.
ನAತರ ಅವರು ಗಂಗಾವತಿ ಪ್ರವಾಸಿ ಮಂದಿರದಲ್ಲಿ ಶ್ರೀಯುತ ವಿರುಪಾಕ್ಷಿಗೌಡ ನಾಯಕ ಇವರ ನೇತೃತ್ವದಲ್ಲಿ ಕೊಪ್ಪಳ ಜಿಲ್ಲಾ ಉಪಾಧ್ಯಕ್ಷರನ್ನಾಗಿ ಪರಸಪ್ಪ ನಾಯಕ ಹಾಗೂ ಗಂಗಾವತಿ ನಗರ ಘಟಕದ ಉಪಾಧ್ಯಕ್ಷರನ್ನಾಗಿ ಹುಲಿಗೇಶ್, ಹೊಸಳ್ಳಿ ಅವರನ್ನು ಆಯ್ಕೆ ಮಾಡಲಾಯಿತು.
ಈ ಸಂದರ್ಭದಲ್ಲಿ ಉತ್ತರ ಕರ್ನಾಟಕ ಹಾಗೂ ವಿಜಯನಗರ ಜಿಲ್ಲಾ ಅಧ್ಯಕ್ಷರಾದ ರಾಜು ಗುಜ್ಜಲ್ ಹಾಗೂ ವಿಜಯನಗರ ಜಿಲ್ಲಾ ಘಟಕದ ಪದಾಧಿಕಾರಿಗಳು, ಕೊಪ್ಪಳ ಜಿಲ್ಲಾ ಘಟಕ ಅಧ್ಯಕ್ಷರು ಉಪಾಧ್ಯಕ್ಷರು ಪದಾಧಿಕಾರಿಗಳು. ಹಾಗೂ ಇನ್ನೂ ಅನೇಕರು ಪಾಲ್ಗೊಂಡಿದ್ದರು.

ಜಾಹೀರಾತು

About Mallikarjun

Check Also

20251015 201304 collage.jpg

ರೈತರು ಕೃಷಿ ಸಂಸ್ಕರಣಾ ಘಟಕ ತರಬೇತಿಯಸದುಪಯೋಗ ಪಡೆದುಕೊಳ್ಳಬೇಕು- ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್

Farmers should take advantage of agro-processing unit training - Union Minister Nirmala Sitharaman ಕೊಪ್ಪಳ ಅಕ್ಟೋಬರ್ …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.