ಕಲ್ಯಾಣಸಿರಿ ವಿಶೇಷ

ಸಿಂಗನಾಳ ಗ್ರಾಮದಲ್ಲಿ ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ ರಾಸುಗಳಲ್ಲಿ ಕಂಡುಬರುವ ಆಗೋಚಕರ ಕೆಚ್ಚಲು ಬಾವು ತಪಾಸಣೆ

Milk testing and inspection at the Milk Producers Association


ಕಾರಟಗಿ: ತಾಲೂಕಿನ ಸಿಂಗನಾಳ ಗ್ರಾಮದಲ್ಲಿ ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ ರಾಸುಗಳಲ್ಲಿ ಕಂಡುಬರುವ ಆಗೋಚಕರ ಕೆಚ್ಚಲು ಬಾವು ತಪಾಸಣೆಯನ್ನು ಸಂಘದ ಆಡಳಿತ ಅಧಿಕಾರಿಗಳಾದ ಗವಿಸಿದ್ದಪ್ಪ ಇವರ ನೇತೃತ್ವದಲ್ಲಿ ತಪಾಸಣೆಯನ್ನು ಆಯೋಜಿಸಲಾಯಿತು, ಸಂಘದ ಸಹಾಯಕರಾದ ಯಮನೂರ ಮಾತನಾಡಿ ಪ್ರತಿ ತಿಂಗಳು ಹಾಲಿನ ತಪಾಸಣೆಯನ್ನು ಸಂಘಗಳಲ್ಲಿ ಮಾಡುತ್ತಿದ್ದು ರೈತರು ರಾಸುಗಳ ಆರೋಗ್ಯ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು. ಈ ತಪಾಸಣೆಯಿಂದ ಹಾಲಿನಲ್ಲಿ ಬದಲಾವಣೆಯನ್ನು ಕಾಣಬಹುದು ರೈತರು ಅದನ್ನು ಗಮನಿಸಬೇಕು, ಮತ್ತು ಹಾಲು ತಪಾಸಣೆ ಮಾಡಿದ ಸಂದರ್ಭದಲ್ಲಿ ಆಗೋಚಕರ ಕೆಚ್ಚಲ ಬಾವು ಸಮಸ್ಯೆ ಕಂಡರೆ ಸಂಘದಿಂದ ಉಚಿತವಾಗಿ ಔಷಧವನ್ನು ಪಡೆದುಕೊಳ್ಳಬಹುದು. ಸಂಘದಲ್ಲಿ ಕಡಿಮೆ ದರದಲ್ಲಿ ರಾಸುಗಳಿಗೆ ಜೀವವಿಮೆ ಮಾಡಿಸಲಾಗುತ್ತದೆ.
ಒಕ್ಕೂಟದ ವ್ಯಾಪ್ತಿಯಲ್ಲಿ ರೈತ ಕಲ್ಯಾಣ ಟ್ರಸ್ಟ್ ರಚಿಸಿ ಇದರಿಂದ ಹಾಲು ಉತ್ಪಾದಕರಿಗೆ ಹಲವಾರು ಸೌಲಭ್ಯವನ್ನು ನೀಡುತ್ತಿದೆ. ಅಕಾಲಿಕ ಮರಣ ಹೊಂದಿದ ಪಕ್ಷದಲ್ಲಿ 20000 ಮೊತ್ತವನ್ನು ರೈತರ ಕಲ್ಯಾಣ ಟ್ರಸ್ಟ್ ವತಿಯಿಂದ ನೀಡಲಾಗುತ್ತಿದೆ. ಹಾಲು ಉತ್ಪಾದಕರ ಹೆಣ್ಣು ಮಕ್ಕಳ ಉನ್ನತ ವ್ಯಾಸಂಗದ ವಸತಿ ನಿಲಯ ಶುಲ್ಕವನ್ನು ಟ್ರಸ್ಟ್ ವತಿಯಿಂದ ಪಾವತಿಸಲಾಗುತ್ತದೆ, ಸ್ಟೆಪ್ ಯೋಜನೆ ಅಡಿಯಲ್ಲಿ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘಗಳಿಗೆ ಹೈನು ರಾಸು ಖರೀದಿಸಲು ಬಡ್ಡಿ ರಹಿತ ಸಾಲವನ್ನು ಅಂಚಿನ ಹಣದ ಮೂಲಕ ನೀಡಿ ರಾಸುಗಳಿಗೆ ಉಚಿತ ವಿಮೆ ಸೌಲಭ್ಯ ಸಹ ಕಲ್ಪಿಸಲಾಗುತ್ತದೆ. ಸ್ವಸಾಯ ಸಂಘಗಳನ್ನು ರಚಿಸಿ ಉಳಿತಾಯ ಮಾಡಿ ಸಾಲ ಸೌಲಭ್ಯವನ್ನು ಕಡಿಮೆ ಬಡ್ಡಿ ದರದಲ್ಲಿ ನಿಧಿ ಮೂಲಕ ರಾಸು ಖರೀದಿಸಲು ಧನ ಸಹಾಯ ಮಾಡಲಾಗುತ್ತದೆ. ಸಂಘಗಳಲ್ಲಿ ಕೃತಕ ಗರ್ಭಧಾರಣೆ ಕಾರ್ಯಕರ್ತರಿಂದ ಪ್ರಥಮ ಚಿಕಿತ್ಸೆ ಕೃತಕ ಗರ್ಭಧಾರಣೆಯನ್ನು ಸಹಕಾರ ಸಂಘದಿಂದ ಕಡಿಮೆ ದರದಲ್ಲಿ ಚಿಕಿತ್ಸೆ ನೀಡಲಾಗುತ್ತದೆ. ಗಂಗಾವತಿ ತಾಲೂಕಿನ ಒಕ್ಕೂಟದ ನೂತನ ನಿರ್ದೇಶಕರಾಗಿ ಆಯ್ಕೆಯಾದ ನ ಹಾಗೂ ಮಾಜಿ ಅಧ್ಯಕ್ಷರಾದ ಎನ್. ಸತ್ಯನಾರಾಯಣ ಇವರ ಇವರ ಸಮ್ಮುಖದಲ್ಲಿ ರೈತ ಕಲ್ಯಾಣ ಟ್ರಸ್ಟ್ ಮತ್ತು ಎಲ್ಐಸಿ ಗ್ರೂಪ್ ಆಫ್ ಲೈಫ್ ಇನ್ಶುರೆನ್ಸ್ ಸ್ಕೀಮ್ ಜಾರಿಗೆ ಮಾಡಲು ಸಂಘದ ಕಾರ್ಯದರ್ಶಿಗಳು ಮನವಿ ಮಾಡಿಕೊಂಡಿದ್ದೇವೆ, ಇದರಿಂದ ರೈತರಿಗೂ ಅಕಾಲಿಕ ಮರಣ ಹೊಂದಿದ ರೈತರಿಗೆ ಒಂದು ಲಕ್ಷ ಧನಸಾಯ ನೀಡಲಾಗುವುದು. ಸಂಘದ ಸಹಾಯಕ ಕಾರ್ಯದರ್ಶಿಯಾದ ಯಮನೂರ ಎಂ. ಸಂಘದ ಸದಸ್ಯರಿಗೆ ತಿಳಿಸಿದರು. ಈ ಸಂದರ್ಭದಲ್ಲಿ ಸಂಘದ ರೈತರದ, ತಿಮ್ಮಣ್ಣ ಕನಕ ರೆಡ್ಡಿ, ಮಲೀಯಪ್ಪ ಕಂಬಳಿ, ಸಂಘದ ಉಪಾಧ್ಯಕ್ಷರಾದ ರಾಮಮ್ಮ, ಗಂಗಮ್ಮ ಬಾವಿ, ಹನುಮೇಶ ಬಿ, ಷಣ್ಮುಖಪ್ಪ ಐನಾಯಕ, ರಾಮಣ್ಣ ಹಟ್ಟಿ, ರುದ್ರೇಶ ಐನಾಯಕ ದುರ್ಗಪ್ಪ ಹರಿಜನ, ಹಾಲು ತಪಾಸಣೆ ಸಮಯದಲ್ಲಿ ಭಾಗಿಯಾಗಿದ್ದರು.

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

18 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

18 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

19 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

19 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

19 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

19 hours ago