ಕಲ್ಯಾಣಸಿರಿ ವಿಶೇಷ

ಕರಡಿ ದಾಳಿ ಬೆನ್ನಲ್ಲೆಯೇ ಈಗ ಚಿರತೆ ದಾಳಿಗೆ 13 ಕುರಿಗಳು ಸಾವು ತತ್ತರಿಸಿದ ದೇವಪ್ಪ ಬೇವಿನ ಗಿಡದ ರೈತ ಮತ್ತು ರೈತರು

After bear attack, now 13 sheep killed in leopard attack Devappa neem farmer and farmers in distress
 

ವರದಿ ಮಂಗಳೇಶ ಮೆತಗಲ್ ಮಂಗಳೂರು

ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ,: ಕೆಲವು ದಿನಗಳ ಹಿಂದೆ ಇದೇ ಭಾಗ ಮಂಗಳೂರು ಗ್ರಾಮದ ಹತ್ತಿರ ಕರಡಿ ಹೊಲದಲ್ಲಿ ಕೆಲಸ ಮಾಡುತ್ತಿದ್ದ ರೈತಬ್ಬನಿಗೆ ದಾಳಿ ಮಾಡಿತ್ತು. ಈಗ ನೆಲಜೇರಿ ಗ್ರಾಮದಲ್ಲಿ ಬುಧವಾರ ರಾತ್ರಿ ಚಿರತೆ ದಾಳಿ ಮಾಡಿ ಸುಮಾರು 13 ಕುರಿಗಳನ್ನು ಕೊಂದುಹಾಕಿದೆ.

ನೆಲಜೇರಿ ಗ್ರಾಮದ ದೇವಪ್ಪ ಬೇವಿನಗಿಡದ ಅವರಿಗೆ ಸೇರಿದ 13 ಕುರಿಗಳು ಚಿರತೆ ದಾಳಿಗೆ ಬಲಿಯಾಗಿವೆ. ದೇವಪ್ಪ ಅವರ ಕೊಟ್ಟಿಗೆಯಲ್ಲಿ ಇದ್ದ ಕುರಿಗಳ ಮೇಲೆ ಚಿರತೆ ದಾಳಿ ನಡೆಸಿದೆ. ಇದರಿಂದ ರೈತನಿಗೆ ಲಕ್ಷಾಂತರ ನಷ್ಟ ಸಂಭವಿಸಿದೆ.

ಘಟನಾ ಸ್ಥಳಕ್ಕೆ ಭೇಟಿ ನೀಡಿದ ಅರಣ್ಯ ಇಲಾಖೆ ಅಧಿಕಾರಿಗಳು ಚಿರತೆ ಸೆರೆಗೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಅಲ್ಲದೇ ಸರ್ಕಾರದಿಂದ ಪರಿಹಾರ ಕೊಡಿಸಲಾಗುವುದು ಎಂದು ಭರವಸೆ ನೀಡಿದ್ದಾರೆ.

ಚಿರತೆ ಹಾವಳಿ ತಪ್ಪಿಸಲು ಆಗ್ರಹ : ಗ್ರಾಮಗಳಲ್ಲಿ ಚಿರತೆ ಬಂದಿದ್ದು, ಇದರಿಂದ ರೈತರು ಹಸು, ಕರು, ಎಮ್ಮೆ ಮೇಕೆ, ಕುರಿಗಳನ್ನು ಮೇಯಿಸಲು ಭಯಪಡುವ ಸ್ಥಿತಿ ಇದೆ. ಚಿರತೆ ದಾಳಿಯಿಂದ ಈಗಾಗಲೇ ಸಾಕು ಪ್ರಾಣಿಗಳನ್ನು ಕಳೆದುಕೊಂಡಿದ್ದೇವೆ. ಚಿರತೆ ಹಾವಳಿ ತಪ್ಪಿಸಲು ಶಾಶ್ವತ ಕ್ರಮ ಕೈಗೊಳ್ಳಬೇಕು’ ಎಂದು ಗ್ರಾಮಸ್ಥರು ಆಗ್ರಹಿಸಿದರು.

ಅರಣ್ಯ ಇಲಾಖೆಯ ಅಧಿಕಾರಿ ಲಿಂಗರಾಜ ಕನ್ನಾಳ, ಪಶುಸಂಗೋಪನೆ ಇಲಾಖೆಯ ಅಧಿಕಾರಿಗಳು ಡಾ. ಬಾಪುಗೌಡ್ ಪಾಟೀಲ್, ಡಾ. ಸುಷ್ಮಾ ಬೆಲ್ಲದ ಅರಣ್ಯ ಇಲಾಖೆ ಸಿಬ್ಬಂದಿಗಳು ಮತ್ತು ಪಶು ಸಂಗೋಪನೆ ಇಲಾಖೆ ಸಿಬ್ಬಂದಿಗಳು ಗ್ರಾ.ಪ. ನೆಲಜೇರಿ ಅಧ್ಯಕ್ಷರು ಉಪಾಧ್ಯಕ್ಷರು ಸರ್ವ ಮತ್ತು ಗ್ರಾಮದ ಎಲ್ಲಾ ಹಿರಿಯರು ಮುಖಂಡರು ಯುವಕ ಮಿತ್ರರು ಹಾಗೂ ಸುತ್ತಮುತ್ತಲಿನ ಅನೇಕರು ನೋಡಲು ಆಗಮಿಸಿದ್ದರು

ವರದಿ ಮಂಗಳೇಶ ಮೆತಗಲ್ ಮಂಗಳೂರು

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

5 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

6 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

6 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

6 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

6 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

6 hours ago