D.S. Veeraiah's work is like a collection of Ambedkar's sayings: Dignitaries discuss the work released at the Vice President's House in Delhi
ಬೆಂಗಳೂರು: ದೆಹಲಿಯ ಉಪರಾಷ್ಟ್ರಪತಿ ಭವನದಲ್ಲಿ ಬಿಡುಗಡೆಯಾದ ಡಿ.ಎಸ್. ವೀರಯ್ಯ ಅವರ ಡಾ. ಬಿ.ಆರ್. ಅಂಬೇಡ್ಕರ್ ಸಂದೇಶಗಳು ಕೃತಿಯ ಹಿಂದಿ ಮತ್ತು ಇಂಗ್ಲೀಷ್ ಅನುವಾದಿತ ಕೃತಿಗಳ ಕುರಿತು ಇಂದು ಶಾಸಕರ ಭವನದ ಸಭಾಂಗಣದಲ್ಲಿ ಗಂಭೀರ ಚರ್ಚೆ ನಡೆಯಿತು.
ದೆಹಲಿಯಲ್ಲಿ ನಡೆದ ಕಾರ್ಯಕ್ರಮದ ಕುರಿತು ಅಭಿನಂದನೆ ಸಲ್ಲಿಸಲು ಕರೆದಿದ್ದ ಸಭೆಯಲ್ಲಿ ಗಣ್ಯರು ವೀರಯ್ಯ ಅವರ ಕೃತಿಯಲ್ಲಿ ಮೂಡಿಬಂದಿರುವ ಅಂಬೇಡ್ಕರ್ ಸಂದೇಶದ ವ್ಯಾಖ್ಯಾನಗಳನ್ನು ವಚನ ಸಾಹಿತ್ಯಕ್ಕೆ ಹೋಲಿಸಿದರು. ಬಸವಣ್ಣನವರ ವಚನಗಳಂತೆ ಅಂಬೇಡ್ಕರ್ ಅವರ ಬರಹಗಳನ್ನು ವಚನ ಸಾಹಿತ್ಯ ರೂಪಕ್ಕಿಳಿಸಿದ ಖ್ಯಾತಿ ವೀರಯ್ಯ ಅವರದ್ದು ಎಂದು ಶ್ಲಾಘಿಸಿದರು.
ಹಿರಿಯ ಲೇಖಕರಾದ ಬಿ.ಟಿ. ಲಲಿತಾ ನಾಯಕ್ ಮಾತನಾಡಿ, ಕನ್ನಡದ ಕವಿಯೊಬ್ಬರ ಕೃತಿ ಉಪರಾಷ್ಟ್ರಪತಿ ಭವನದಲ್ಲಿ ಬಿಡುಗಡೆಯಾಗಿರುವುದು ಐತಿಹಾಸಿಕ ದಾಖಲೆ. ಅಂಬೇಡ್ಕರ್ ಕುರಿತ ವೀರಯ್ಯ ಅವರ ಕಾಳಜಿಯ ಕುರಿತು ಹೆಚ್ಚು ಹೇಳುವ ಅಗತ್ಯವಿಲ್ಲ. ಅವರು ಹೋರಾಟದ ಮೂಲಕ ಅಂಬೇಡ್ಕರ್ ಅವರನ್ನು ಜೀವಂತವಾಗಿರಿಸಿದ್ದಾರೆ. ಜತೆಗೆ, ಅವರ ಬರಹಗಳನ್ನು ಹಿಂದಿ, ಇಂಗ್ಲೀಷ್ ಗೆ ಭಾಷಾಂತರ ಮಾಡುವ ಮೂಲಕ ದೇಶಾದ್ಯಂತ ಪಸರಿಸುವಂತೆ ಮಾಡಿದ್ದಾರೆ. ಇದು ತೆಲುಗು, ತಮಿಳು ಭಾಷೆಗೂ ಭಾಷಾಂತರವಾಗಬೇಕು ಎಂದು ತಿಳಿಸಿದರು.
ಲೇಖಕರಾದ ಡಿ.ಎಸ್. ವೀರಯ್ಯ ಮಾತನಾಡಿ, ಉಪರಾಷ್ಟ್ರಪತಿ ಅವರು ಪುಸ್ತಕ ಮೆಚ್ಚಿ ತಮ್ಮದೇ ಕಚೇರಿಯಲ್ಲಿ ಬಿಡುಗಡೆ ಮಾಡುವ ನಿರ್ಧಾರ ಮಾಡಿದ್ದರು. ಅಂತೆಯೇ ಕಾರ್ಯಕ್ರಮ ಆಯೋಜನೆ ಮಾಡಿ ಪುಸ್ತಕ ಬಿಡುಗಡೆ ಮಾಡಿ, ಅಂಬೇಡ್ಕರ್ ಆಶಯಗಳು ಎಷ್ಟು ಮುಖ್ಯ ಎಂಬುದನ್ನು ವಿವರಿಸಿದರು. ದೇಶದ ಎಲ್ಲ ರಾಜಕಾರಣಿಗಳೂ ಓದಲೇ ಬೇಕಾದ ಪುಸ್ತಕ ಎಂದು ಶ್ಲಾಘಿಸಿದ್ದು ನನಗೆ ಹೆಮ್ಮೆಯ ಕ್ಷಣ ಎಂದರು.
ಅಂಬೇಡ್ಕರ್ ಸಂವಿಧಾನದ ಮಹತ್ವ ಹಾಗೂ ಅಂಬೇಡ್ಕರ್ ಪ್ರಸ್ತುತ ದಿನಮಾನದಲ್ಲಿ ಎಷ್ಟು ಮುಖ್ಯವಾಗುತ್ತಾರೆ ಎಂಬ ಮೂಲಕ ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರು, ಬಾಬಾ ಸಾಹೇಬರ ಮೇಲಿನ ತಮ್ಮ ಗೌರವ ಹೊರಹಾಕಿದರು. ಕರ್ನಾಟಕದಿಂದ ಆಗಮಿಸಿದ್ದ ಎಲ್ಲ ಗಣ್ಯರಿಗೆ ತಮ್ಮ ಕಚೇರಿಯಲ್ಲಿ ಆತಿಥ್ಯ ನೀಡಿ ಸತ್ಕರಿಸಿದ್ದು ಮರೆಯಲಾಗದ ಕ್ಷಣ ಎಂದರು.
ಕಾರ್ಯಕ್ರಮ ಆರಂಭದಲ್ಲಿ ಡಿ.ಎಸ್. ವೀರಯ್ಯ ಅವರು ವಿರಚಿತ ಗೀತೆಗಳನ್ನು ಪ್ರದರ್ಶನ ಮಾಡಲಾಯಿತು. ಅವರ ಗೀತೆಗಳನ್ನು ಹಾಡಿ ಗಾಯಕರು ರಂಜಿಸಿದರು. ವಿಧಾನಪರಿಷತ್ ಮಾಜಿ ಸದಸ್ಯ ಅ.ದೇವೇಗೌಡ, ಕಾವೇರಿ ಸಂರಕ್ಷಣಾ ವೇದಿಕೆಯ ರಾಮು ಸೇರಿ ಅನೇಕ ಗಣ್ಯರು ವೀರಯ್ಯ ಅವರನ್ನು ಸನ್ಮಾನಿಸಿದರು.
ಪುಸ್ತಕಗಳ ಅನುವಾದಕರಾದ ಎಚ್.ಎಸ್. ಎನ್ ಪ್ರಕಾಶ್, ಶ್ರೀನಿವಾಸಯ್ಯ ಅವರಿಗೆ ಸನ್ಮಾನ ಮಾಡಲಾಯಿತು. ದೆಹಲಿಯ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಎಲ್ಲರಿಗೂ ಡಿ.ಎಸ್. ವೀರಯ್ಯ ಅವರು ಸ್ಮರಣಿಕೆ ನೀಡಿ ಅಭಿನಂದನೆ ಸಲ್ಲಿಸಿದರು. ಮಾಜಿ ಸಚಿವೆ ಹಾಗೂ ಲೇಖಕಿ ಬಿ.ಟಿ. ಲಲಿತಾ ನಾಯಕ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಅನೇಕ ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
Ben.V. Result: Sanjana S.A, Lavanya Yadav R. of APS Educational Institute rank first ಬೆಂ.ವಿವಿ ಫಲಿತಾಂಶ…
Cancel my account and give me all the money in my account. ನನ್ನ ಅಕೌಂಟನ್ನು ಕ್ಯಾನ್ಸಲ್…
ತಂದೆಯ ಋಣ ತೀರಿಸಲು ..ಎಷ್ಟೇ ಜನ್ಮ ಹುಟ್ಟಿ ಬಂದರೂ ಸಾಧ್ಯವಿಲ್ಲ No matter how many births you take,…
Devotee's iPhone fell into his pocket! Alas, it ended after falling into his pocket. ಹುಂಡಿಗೆ…
ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…
ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…