ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಉಚಿತ ‌ಪರೀಕ್ಷಾ ಕಾರ್ಯಗಾರ

Free exam workshop for SSLC students

ಕುಷ್ಟಗಿ: ಪಟ್ಟಣದ ಎಸ್ ವಿ ಸಿ ಶಿಕ್ಷಣ ಸಂಸ್ಥೆ ರಾಜ್ಯ ಮತ್ತು ಕೇಂದ್ರೀಯ ಪಠ್ಯಕ್ರಮದ ಶಾಲೆಗಳ 10ನೇ ತರಗತಿ ವಿದ್ಯಾರ್ಥಿಗಳ ವಾರ್ಷಿಕ ಪರೀಕ್ಷೆಯ ಫಲಿತಾಂಶ ಸುಧಾರಣೆಗಾಗಿ ಎರಡು ದಿನಗಳ ಉಚಿತ ಕಾರ್ಯಾಗಾರ ಹಮ್ಮಿಕೊಂಡಿದೆ ಎಂದು ಸಂಸ್ಥೆಯ ಅಧ್ಯಕ್ಷರಾದ ಸಿ ವಿ ಚಂದ್ರಶೇಖರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಖ್ಯಾತ ಶಿಕ್ಷಣ ತಜ್ಞ, ಪರೀಕ್ಷಾ ತರಬೇತುದಾರ ಹಾಗೂ ಲೇಖಕರಾದ ಅರವಿಂದ ಚೊಕ್ಕಾಡಿ ಜುಲೈ 26 ಹಾಗೂ 27 ರಂದು
ಎಸ್ ವಿ ಸಿ ಸಂಸ್ಥೆ ಆವರಣದಲ್ಲಿ ಕಾರ್ಯಾಗಾರ ನಡೆಸಿಕೊಡಲಿದ್ದಾರೆ. ನಿವೃತ್ತ ಉಪನ್ಯಾಸಕರಾದ ಬಸವರಾಜ ಸವಡಿ ಹಾಗೂ ರಾಜ್ಯ ಆಂಗ್ಲ ಭಾಷಾ ಸಂಪನ್ಮೂಲ ವ್ಯಕ್ತಿ
ಸಿ ವಿ ಪಾಟೀಲ ಭಾಗವಹಿಸಲಿದ್ದಾರೆ.
ಪ್ರಶ್ನೆ ಪತ್ರಿಕೆಗಳ ವಿಶ್ಲೇಷಣೆ
ವಿಷಯವಾರು ಅಧ್ಯಯನ ವಿಧಾನ, ಏಕಾಗ್ರತೆ ಹಾಗೂ ಧಾರಣ ಸಾಮರ್ಥ್ಯ ಸಾಧಿಸುವ ಮಾರ್ಗ ಕ್ಲಿಷ್ಟಕರ ಪರಿಕಲ್ಪನೆಗಳನ್ನು ನೆನಪಿಟ್ಟುಕೊಳ್ಳುವ ಬಗೆ, ಉತ್ತರ ಬರವಣಿಗೆಯ ಶೈಲಿ, ದೈನಂದಿನ ವೇಳಾಪಟ್ಟಿ ಹಾಗೂ ಅತಿ ಹೆಚ್ಚು ಅಂಕ ಪಡೆಯುವ ವಿಧಾನಗಳನ್ನು ವಿದ್ಯಾರ್ಥಿಗಳಿಗೆ ತಿಳಿಸಿಕೊಡಲಿದ್ದಾರೆ. ವಾರ್ಷಿಕ ಪರೀಕ್ಷೆಯಲ್ಲಿ ಅತಿ ಹೆಚ್ಚು
ಅಂಕ ಗಳಿಸುವಲ್ಲಿ ಈ ಕಾರ್ಯಗಾರ ಮಕ್ಕಳಿಗೆ ನೆರವಾಗಲಿದೆ.
ವಿದ್ಯಾರ್ಥಿಗಳು ಕಾರ್ಯಾಗಾರದಲ್ಲಿ ಪಾಲ್ಗೊಳ್ಳಲು ದಾಖಲಾತಿಗಾಗಿ
ಈ ಕೆಳಗಿನ ಸಂಖ್ಯೆಗಳನ್ನು ಸಂಪರ್ಕಿಸಬಹುದು ಎಂದು ಪತ್ರಿಕಾ ಪ್ರಕಟಣೆ ತಿಳಿಸಿದೆ
+91 96060 44849 / +919620172080

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

18 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

18 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

18 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

18 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

18 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

19 hours ago