Breaking News

ಶ್ರೀಗಳ ನೇತೃತ್ವದಲ್ಲಿ ಹಿಂದೂ ಸ್ಮಶಾನ ಸ್ವಚ್ಛತೆ

Hindu cemetery cleanliness under the leadership of Sri
Screenshot 2025 07 23 19 13 09 59 6012fa4d4ddec268fc5c7112cbb265e74933278899030229382 1024x559

~ ಸಚೀನ ಆರ್ ಜಾಧವ
ಸಾವಳಗಿ: ರವಿವಾರದ ಸ್ವಚ್ಚತಾ ಅಭಿಯಾನದಲ್ಲಿ ಜಮಖಂಡಿ ನಗರದ ಕಿರಾಣಿ ವ್ಯಾಪಾರಸ್ಥರ ಸಂಘದ ೫೦ ಸದಸ್ಯರ ಸಹಿತ ೧೪೦ಜನರು ಸ್ವಚ್ಚತಾ ಅಭಿಯಾನ ಶ್ರಮದಾನದಲ್ಲಿ ಪಾಲ್ಗೊಂಡು ಹಿಂದು ರುದ್ರಭೂಮಿ ಸ್ವಚ್ಚತೆಯಲ್ಲಿ ತೊಡಗಿಕೊಂಡಿದ್ದರು.

Screenshot 2025 07 23 19 13 34 36 6012fa4d4ddec268fc5c7112cbb265e71923288443671099331 1024x368

ಜಮಖಂಡಿ ನಗರದ ನಗರದ ರಾಜ್ಯ ಹೆದ್ದಾರಿಯಲ್ಲಿ ಬರತಕ್ಕ ಅಂದಾಜು ೨೪ ಎಕರೆ ಪ್ರದೇಶದ ಹಿಂದು ರುದ್ರಭೂಮಿಯಲ್ಲಿ ೪ನೇ ರವಿವಾರದ ಸ್ವಚ್ಚತಾ ಅಭಿಯಾನದ ಶ್ರಮದಾನದಲ್ಲಿ ನೂರೆಂಟು ಜನರು ಮತ್ತು ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಪಾಲ್ಗೊಂಡಿದ್ದರು.
ಕಳೆದ ೪ ವಾರಗಳಿಂದ ಮುತ್ತಿನಕಂತಿ ಹಿರೇಮಠದ ಶಿವಲಿಂಗಪAಡಿತಾರಾಧ್ಯ ಶಿವಾಚರ‍್ಯರ ನೇತೃತ್ವದಲ್ಲಿ ಆರಂಭ ಆಗಿರುವ ಸ್ವಚ್ಚತಾ ಅಭಿಯಾನ ಶ್ರಮದಾನ ಜಮಖಂಡಿ ಜನತೆ ಸಹಕಾರದಿಂದ ಹಿಂದು ರುದ್ರಭೂಮಿಯಲ್ಲಿ ಸ್ವಚ್ಚತಾ ಅಭಿಯಾನ ಯಶಸ್ವಿಯಾಗಿ ಮುನ್ನಡೆಯುತ್ತಿದೆ. ೧ನೇ ರವಿವಾರ ನಡೆದ ಸ್ವಚ್ಚತಾ ಶ್ರಮದಾನದಲ್ಲಿ ೨೫ ಜನರು, ೨ನೇ ರವಿವಾರ ೬೦ ಜನರು, ೩ನೇ ರವಿವಾರ ೮೫ ಜನರು ಪಾಲ್ಗೊಂಡಿದ್ದರು.

ಶ್ರೀಗಳಿಂದ ಮನವಿ ಮುತ್ತಿನಕಂತಿ ಹಿರೇಮಠದ ಶಿವಲಿಂಗಪAಡಿತಾರಾಧ್ಯ ಶಿವಾಚರ‍್ಯರು ಮತ್ತು ಓಲೇಮಠದ ಪ.ಪೂ.ಆನಂದದೇವರು ನೇತೃತ್ವದಲ್ಲಿ ಅನೈತಿಕ ಚಟುವಟಿಕೆ ನಿಯಂತ್ರಣಕ್ಕಾಗಿ ಬರತಕ್ಕ ೫ನೇ ರವಿವಾರ ಸ್ವಚ್ಚತಾ ಅಭಿಯಾನ ಶ್ರಮದಾನದಲ್ಲಿ ಹೊಸ ಯೋಜನೆ ಚಾಲನೆಗೊಳ್ಳಲಿದೆ. ಜಮಖಂಡಿ ತಾಲೂಕಿನ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸ ಬೇಕು. ಜಿಲ್ಲೆಯಲ್ಲಿ ವಿಶಾಲವಾದ ನಮ್ಮೆಲ್ಲರ ಹಿಂದು ರುದ್ರಭೂಮಿಯನ್ನು ನಾವು ಸಂರಕ್ಷಣೆ ಮಾಡಬೇಕಾಗಿದೆ. ಯಾವುದೇ ಜಾತಿ, ಧರ್ಮ ಎನ್ನದೇ ಎಲ್ಲರೂ ಸಾಮೂಹಿಕವಾಗಿ ಭಾಗವಹಿಸಬೇಕೆಂದು ಮನವಿ ಮಾಡಿದರು.

ಏನಿದು ನಿಯಂತ್ರಣ ಯೋಜನೆ ಹಿಂದು ರುದ್ರಭೂಮಿ ಆವರಣದಲ್ಲಿ ಗಾಂಜಾ ಸೇವನೆ, ಮಧ್ಯ ಸೇವನೆ, ಮಟಕಾ ದಂಧಾ, ಇಸ್ಪೀಟ್, ಜೂಜಾಟ, ಮಾಟ-ಮಂತ್ರದAತಹ ಅನೈತಿಕ ಚಟುವಟಿಕೆಗಳನ್ನು ನಿಯಂತ್ರಿಸಬೇಕಾಗಿದೆ. ರುದ್ರಭೂಮಿಯ ದಕ್ಷಿಣ ಭಾಗದಲ್ಲಿ ವಿಶಾಲವಾದ ಜಾಗವಿದ್ದು, ಗಿಡಗಂಟಿಗಳು ಬೆಳೆದಿರುವ ಹಿನ್ನಲೆಯಲ್ಲಿ ಅನೈತಿಕ ಚಟುವಟಿಕೆಗಳಿಗೆ ಅಂಟಿಕೊAಡ ಜನರು ರುದ್ರಭೂಮಿ ಸುರಕ್ಷಾಗೋಡೆ ಒಡೆದು ಅದರೊಳಗೆ ಆಗಮಿಸಿ ಸಮಾಜದ ಸ್ವಾಸ್ಥ ಹಾಳು ಮಾಡುತ್ತಿದ್ದಾರೆ.

ನಿಯಂತ್ರಣಕ್ಕಾಗಿ ಅಂದಾಜು ಒಂದು ಕಿ.ಮೀ.ವರೆಗೆ ರುದ್ರಭೂಮಿ ಗೋಡೆಯ ಒಳಗಡೆ ಭಾಗದಲ್ಲಿ ಕಾಲುವೆ ಮಾದರಿಯಲ್ಲಿ ಆಳವಾದ ತಗ್ಗು ಮಾಡಿ ಮುಳ್ಳುಗಳಿಂದ ತುಂಬವ ಯೋಜನೆಯಾಗಿದೆ. ಇದಕ್ಕೆ ಜನರ, ಪೊಲೀಸ್ ಇಲಾಖೆ ಮತ್ತು ನಗರಸಭೆ ಸಹಿತ ವಿವಿಧ ಇಲಾಖೆಗಳ ಸಹಕಾರ ಅಗತ್ಯವಾಗಿದೆ.
ಯಶಸ್ವಿ ಮಾಡೋಣ.

1) ಬಾಕ್ಸ್:
ನಗರದ ಹಿಂದು ರುದ್ರಭೂಮಿಯನ್ನು ಸಂಪೂರ್ಣ ಸ್ವಚ್ಚತೆ ಮಾಡುವ ಶ್ರಮದಾನದಲ್ಲಿ ಪ್ರತಿಯೊಬ್ಬರು ಜೊತೆಗೂಡಿ ಯಶಸ್ವಿ ಮಾಡಬೇಕಾಗಿದೆ. ಶ್ರಮದಾನ ಪ್ರತಿ ರವಿವಾರ ನಿರಂತರವಾಗಿ ನಡೆಯಲಿದ್ದು, ಯಾರಿಗೂ ಆಹ್ವಾನಿಸುವ ಅವಶ್ಯಕತೆಯಿಲ್ಲ. ಸ್ವಯಂ ಪ್ರೇರಿತರಾಗಿ ಪ್ರತಿ ರವಿವಾರ ಬೆಳಿಗ್ಗೆ ೭ ಗಂಟೆಗೆ ಹಿಂದು ರುದ್ರಭೂಮಿಗೆ ಆಗಮಿಸಿ ೧೦ ಗಂಟೆವರೆಗೆ ನಡೆಯಲಿಉರವ ಶ್ರಮದಾನದಲ್ಲಿ ಭಾಗವಹಿಸಿ ಹಿಂದು ರುದ್ರಭೂಮಿಯನ್ನು ರಕ್ಷಣೆ ಮಾಡೋಣ.

-ಶಿವಲಿಂಗ ಪಂಡಿತಾರಾಧ್ಯ ಶಿವಾಚರ‍್ಯರು, ಮುತ್ತಿನಕಂತಿ ಹಿರೇಮಠ ಜಮಖಂಡಿ.

2) ಬಾಕ್ಸ್:
ಶ್ರಾವಣಮಾಸದಲ್ಲಿ ನಗರದ ಓಲೇಮಠ ಹಮ್ಮಿಕೊಂಡಿರುವ ವಚನ ಶ್ರಾವಣ-೨೫ ಕಾರ್ಯಕ್ರಮವನ್ನು ಹಿಂದು ರುದ್ರಭೂಮಿಯಲ್ಲಿ ಇಟ್ಟುಕೊಳ್ಳುವ ಮೂಲಕ ಜನರ ಮನದಲ್ಲಿರುವ ಸ್ಮಶಾನದ ಭಯ ಹೋಗಲಾಡಿಸಿ ಅನೈತಿಕ ಚಟುವಟಿಕೆ ನಿಯಂತ್ರಣ ಸಾಧ್ಯವಾಗಲಿದೆ. ಭಾರತೀಯ ಸಂಸ್ಕೃತಿಯಲ್ಲಿ ಶ್ರಾವಣಮಾಸ ಅತ್ಯಂತ ಪವಿತ್ರವಾಗಿದ್ದು, ಶ್ರಾವಣಮಾಸದ ಮೂಲಕ ಯುವಪೀಳಿಗೆಗೆ ಒಳ್ಳೆಯ ಸಂಸ್ಕಾರಗಳನ್ನು ನೀಡೋಣ.

-ಪ.ಪೂ.ಆನಂದೇವರು, ಓಲೇಮಠ ಜಮಖಂಡಿ.

ಪೋಟೋ ವಿವರ: ಜಮಖಂಡಿ ನಗರದ ಹಿಂದು ರುದ್ರಭೂಮಿಯಲ್ಲಿ ಸ್ವಚ್ಚತಾ ಅಭಿಯಾನ ಶ್ರಮದಾನದಲ್ಲಿ ಮುತ್ತಿನಕಂತಿಮಠ ಮತ್ತು ಓಲೇಮಠ ಶ್ರೀಗಳು ಕಸಗುಡಿಸುತ್ತಿರುವ ದೃಶ್ಯ.

ಪೋಟೋ ವಿವರ: ಜಮಖಂಡಿ ನಗರದ ಹಿಂದು ರುದ್ರಭೂಮಿಯಲ್ಲಿ ಸ್ವಚ್ಚತಾ ಅಭಿಯಾನ ಶ್ರಮದಾನದಲ್ಲಿ ಕಿರಾಣಿ ವ್ಯಾಪಾರಸ್ಥರ ಸಂಘದ ಸದಸ್ಯರು ಮತ್ತು ಸಾರ್ವಜನಿಕರು ಪಾಲ್ಗೊಂಡಿದ್ದರು.

About Mallikarjun

Check Also

ಕರ್ನಾಟಕ ಈಶಾನ್ಯ ಶಿಕ್ಷಕರ ಕ್ಷೇತ್ರ: ಮತದಾರರ ನೋಂದಣಿ ಪ್ರಕ್ರಿಯೆ ಪ್ರಾರಂಭ

Karnataka North East Teachers Constituency: Voter Registration Process ಜಿಲ್ಲಾ ಮಟ್ಟದಲ್ಲಿ ಮೇಲ್ವಿಚಾರಣೆ ತಂಡ, ಮತದಾರರ ಮಾಹಿತಿ ಮತ್ತು …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.