Breaking News

ರಾಯಚೂರ ಸಿಟಿಯಲ್ಲಿ ರೋಬೋಟಿಕ್ ಸ್ಕ್ಯಾವೆಂಜರ್ ಬಳಕೆಗೆ ಚಾಲನೆ

Robotic scavenger usage launched in Raichur City
Screenshot 2025 07 24 09 34 05 76 6012fa4d4ddec268fc5c7112cbb265e76824048520826784919 633x1024

ಹೊಸ ಪ್ರಯೋಗದ ಹೆಗ್ಗಳಿಕೆಗೆ ಪಾತ್ರವಾದ ಮಹಾನಗರ ಪಾಲಿಕೆ

ರಾಯಚೂರು ಜುಲೈ 23 (ಕರ್ನಾಟಕ ವಾರ್ತೆ): ಮ್ಯಾನ್‌ಹೋಲ್‌ಗಳನ್ನು ಸ್ವಚ್ಛಗೊಳಿಸಲು ರೂಪಿಸಿರುವ ವಿಶ್ವದ ಮೊದಲ ರೋಬೋಟಿಕ್ ಸ್ಕ್ಯಾವೆಂಜರ್ ಬ್ಯಾಂಡಿಕೂಟ್ ಯಂತ್ರದ ಬಳಕೆಗೆ ರಾಯಚೂರ ಮಹಾನಗರ ಪಾಲಿಕೆಯ ಆಯುಕ್ತರಾದ ಜುಬಿನ್ ಮೊಹಪಾತ್ರ ಅವರು ಜುಲೈ 23ರಂದು ಚಾಲನೆ ನೀಡಿದರು.
ನಗರದ ಹಳೆಯ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿನ ಪಾಲಿಕೆಯ ಕಚೇರಿ ಮುಂದಿನ ರಸ್ತೆಯಲ್ಲಿನ ಮ್ಯಾನ್‌ಹೋಲ್‌ನ್ನು ನೂತನ ರೋಬೋಟಿಕ್ ಸ್ಕ್ಯಾವೆಂಜರ್ ಯಂತ್ರದ ಮೂಲಕ ಶುಚಿಗೊಳಿಸುವುದನ್ನು ಖುದ್ದು ವೀಕ್ಷಣೆ ನಡೆಸಿ ಮಾತನಾಡಿದ ಆಯುಕ್ತರು, ಕರ್ನಾಟಕ ರಾಜ್ಯದಲ್ಲಿಯೇ ಮೊಟ್ಟಮೊದಲ ಬಾರಿ ಈ ನೂತನ ಯಂತ್ರವನ್ನು ಬಳಕೆಗೆ ತಂದ ಹೆಗ್ಗಳಿಕೆಗೆ ರಾಯಚೂರ ಮಹಾನಗರ ಪಾಲಿಕೆಯು ಪಾತ್ರವಾಗಿದೆ. ಸಾರ್ವಜನಿಕ ಸೇವಾ ಕಾರ್ಯಗಳನ್ನು ಸುಧಾರಿಸುವಲ್ಲಿ ಹಾಗೂ ಸುರಕ್ಷತೆಯನ್ನು ಖಚಿತಪಡಿಸುವಲ್ಲಿ ಈ ಯಂತ್ರವು ಪ್ರಮುಖ ಪಾತ್ರ ವಹಿಸುತ್ತದೆ. ಮತ್ತು ಪ್ರತಿಯೊಬ್ಬ ವ್ಯಕ್ತಿಯ ಘನತೆಯನ್ನು ಎತ್ತಿಹಿಡಿಯುವಲ್ಲಿ ಹೊಸ ಯಂತ್ರವನ್ನು ಬಳಸಿಕೊಂಡ ಕೀರ್ತಿಗೆ ರಾಯಚೂರು ಮಹಾನಗರ ಪಾಲಿಕೆಯು ಪಾತ್ರವಾಗಿದೆ ಎಂದು ಹೇಳಲು ತಮಗೆ ಸಂತಸವಾಗುತ್ತಿದೆ ಎಂದು ತಿಳಿಸಿದರು.
ರಾಯಚೂರನ್ನು ಸ್ವಚ್ಛ, ಸುರಕ್ಷಿತ ಮತ್ತು ಸ್ಮಾರ್ಟ್ ನಗರ ಮಾಡಬೇಕು ಎಂಬುದು ನಮ್ಮ ಗುರಿಯಾಗಿದೆ. ಈ ದಿಶೆಯಲ್ಲಿ ನಾವು ಹೊಸ ಹೊಸ ಪ್ರಯೋಗ ಮಾಡುತ್ತಿದ್ದೇವೆ. ಹಸ್ತಚಾಲಿತ ಸ್ಕ್ಯಾವೆಂಜಿಂಗ್ ದುರಾವಸ್ಥೆಯನ್ನು ನಿರ್ಮೂಲನೆ ಮಾಡುವುದು ಮತ್ತು ಕಾರ್ಮಿಕರ ಜೀವ ರಕ್ಷಣೆ ಮಾಡಬೇಕು ಎಂಬುದಕ್ಕೆ ಮಹಾನಗರ ಪಾಲಿಕೆಯು ಬದ್ಧವಾಗಿದೆ. ಈ ಬ್ಯಾಂಡಿಕೂಟ್ ಬಳಕೆಯ ಮೂಲಕ ರಾಯಚೂರು ನಗರವು ಹೊಸ ನಾವೀನ್ಯತೆ ಹೊಂದಿ ನಮ್ಮ ರಾಜ್ಯದ ಹಾಗೂ ದೇಶದ ಬೇರೆ ಬೇರೆ ನಗರಗಳಿಗೆ ಮಾದರಿಯಾಗಿ ಹೊರಹೊಮ್ಮಲಿದೆ ಎಂದು ತಿಳಿಸಿದರು.
ಬ್ಯಾಂಡಿಕೂಟ್ ಕೇವಲ ಒಂದು ಯಂತ್ರವಲ್ಲ; ಇದು ಪ್ರಗತಿ, ಘನತೆ ಮತ್ತು ಸುರಕ್ಷತೆಯನ್ನು ಪ್ರತಿನಿಧಿಸುತ್ತದೆ. ಜವಾಬ್ದಾರಿಯುತ ಮತ್ತು ಭವಿಷ್ಯಕ್ಕೆ ಸಿದ್ಧವಾಗಿರುವ ನೈರ್ಮಲ್ಯ ನಿರ್ವಹಣೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಭಾರತೀಯ ಡೀಪ್‌ಟೆಕ್ ಕಂಪನಿ ಜೆನ್‌ರೋಬೋಟಿಕ್ಸ್ ಅಭಿವೃದ್ಧಿಪಡಿಸಿದ ಬ್ಯಾಂಡಿಕೂಟ್ ಯಂತ್ರವು ಮಾರುಕಟ್ಟೆಯಲ್ಲಿ ಲಭ್ಯವಿರುವ ಅತ್ಯಂತ ಮುಂದುವರಿದ ಮತ್ತು ಪರಿಣಾಮಕಾರಿಯಾದ ಯಂತ್ರವಾಗಿದೆ. ಮಾನವ ಚಲನೆಯನ್ನು ಅನುಕರಿಸುವ ಈ ರೋಬೋಟಿಕ್ ಯಂತ್ರವು ತೋಳು ಬಳಸಿ ಮಾನವರಂತೆ ಕಾರ್ಯ ನಿರ್ವಹಿಸುತ್ತದೆ. ಮಾನವ ಪ್ರವೇಶವಿಲ್ಲದೆ ಮ್ಯಾನ್‌ಹೋಲ್‌ಗಳನ್ನು ನಿಖರವಾಗಿ ಮತ್ತು ಪರಿಣಾಮಕಾರಿಯಾಗಿ ಸ್ವಚ್ಛಗೊಳಿಸಲು ಅನುವು ಮಾಡಿಕೊಡುತ್ತದೆ. ಅಪಾಯಕಾರಿ ಅನಿಲಗಳನ್ನು ಪತ್ತೆಹಚ್ಚಲು ವಿಷಕಾರಿ ಅನಿಲ ಸಂವೇಧಕಗಳು ಮತ್ತು ಕಡಿಮೆ-ಬೆಳಕಿನ ಪರಿಸ್ಥಿತಿಗಳಲ್ಲಿ ಕಾರ್ಯಾಚರಣೆಗಳಿಗಾಗಿ ಮಹತ್ವದ ಕ್ಯಾಮೆರಾಗಳನ್ನು ಈ ರೋಬೋಟ್ ಹೊಂದಿದೆ ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಪಾಲಿಕೆಯ ಪ್ರಭಾರ ಅಧ್ಯಕ್ಷರಾದ ಸಾಜೀದ್ ಸಮೀರ್ ಹಾಗು ಪಾಲಿಕೆಯ ಸದಸ್ಯರು ಹಾಗೂ ಪಾಲಿಕೆಯ ವಿವಿಧ ವಿಭಾಗದ ಅಧಿಕಾರಿ, ಸಿಬ್ಬಂದಿ ಇದ್ದರು.

ಜಾಹೀರಾತು

About Mallikarjun

Check Also

screenshot 2025 11 11 19 38 54 04 e307a3f9df9f380ebaf106e1dc980bb6.jpg

ಜಿಲ್ಲೆಯ ಯಾವುದೇ ಧಾರ್ಮಿಕ ಮಂದಿರಗಳಲ್ಲಿ ಬಾಲ್ಯ ವಿವಾಹ ಜರುಗದಂತೆ ನೋಡಿಕೊಳ್ಳುವುದು ನಮ್ಮೆಲ್ಲರ ಕರ್ತವ್ಯ : ಡಾ. ಸುರೇಶ ಇಟ್ನಾಳ

It is our duty to ensure that child marriage does not take place in any …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.