Breaking News

ಎಕ್ಕುಂಬಿ-ಮೊಳಕಾಲ್ಮೂರು ರಾಜ್ಯ ಹೆದ್ದಾರಿ ದುರಸ್ತಿಗೆ ಭೂಮಿಪೂಜೆ

Groundbreaking ceremony for the repair of the Ekkumbi-Molakalmuru State Highway

ಕೊಟ್ಟೂರು ಪಟ್ಟಣದ ಮೂಲಕ ಹಾದು ಹೋಗುವ ರಾಜ್ಯ ಹೆದ್ದಾರಿ ಎಕ್ಕುಂಬಿ-ಮೊಳಕಾಲ್ಮೂರು ರಾಜ್ಯ ಹೆದ್ದಾರಿಯ ದುರಸ್ತಿ ಕಾಮಗಾರಿಗೆ ಶಾಸಕ ನೇಮಿರಾಜನಾಯ್ಕ ಶುಕ್ರವಾರ ಭೂಮಿ ಪೂಜೆ ನೆರವೇರಿಸಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡುತ್ತಾ, ಕೊಟ್ಟೂರು ಪಟ್ಟಣದಿಂದ ಹರಪನಹಳ್ಳಿ ರಸ್ತೆಗೆ ಹೋಗುವ ಕೆ.ಅಯ್ಯನಹಳ್ಳಿ ಗ್ರಾಮದ ನಂತರ ರಸ್ತೆ ಇತ್ತೀಚಿನ ದಿನಗಳಲ್ಲಿ ಈ ರಸ್ತೆ ತುಂಬಾ ಗುಂಡಿಗಳು ನಿರ್ಮಾಣವಾಗಿದ್ದು, ಓಡಾಡಲು ತುಂಬಾ ತೊಂದರೆಯಾಗಿ ಕೆಲವೊಂದು ಅಪಘಾತಗಳೂ ಸಂಭವಿಸಿವೆ. ಇದನ್ನು ಗಮನದಲ್ಲಿಟ್ಟುಕೊಂಡು ಸಾರ್ವಜನಿಕರ ಅಹವಾಲಿಗೆ ಸ್ಪಂದಿಸಿ, ಸರ್ಕಾರದಿಂದ ಅನುದಾನ ತಂದು ಭೂಮಿ ಪೂಜೆ ನೆರವೇರಿಸಲಾಗಿದೆ. ಈ ಕಾಮಗಾರಿ ಅಂದಾಜು ವೆಚ್ಚ ೧೫೦.೩೫ ಲಕ್ಷ ಲೆಕ್ಕಶೀರ್ಷಿಕೆ ೫೦೫೪ ಅಪೆಂಡಿಕ್ಸ್ ಇ ೨೦೨೫-೨೬ರಡಿ ಕಾಮಗಾರಿ ಕೈಗೊಳ್ಳಲಾಗಿದೆ. ಈ ಕಾಮಗಾರಿಯು ೧೫೦.೩೦೫ ರಿಂದ ೧೫೧.೧೪೧ ಕಿ.ಮೀ. ವರೆಗೆ ಆಯ್ದ ಭಾಗಗಳನ್ನು ದುರಸ್ತಿ ಕಾಮಗಾರಿ ಕೈಗೊಳ್ಳಲಾಗುತ್ತದೆ ಎಂದರು. ಎರಡು ವರ್ಷಗಳಲ್ಲಿ ಅತೀ ಹೆಚ್ಚು ರಸ್ತೆ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ. ಸರ್ಕಾರದ ಗಮನ ಸೆಳೆದು ಅನುದಾನವನ್ನು ತಂದು ಕ್ಷೇತ್ರದ ಅಭಿವೃದ್ಧಿಗಾಗಿ ಹಗಲಿರುಳು ಶ್ರಮಿಸುತ್ತಿದ್ದೇನೆ ಎಂದರು. ಈ ಸಂದರ್ಭದಲ್ಲಿ ಎಂ.ಎಂ.ಜೆ.ಹರ್ಷವರ್ಧನ್, ಕಾರ್ಯನಿರ್ವಾಹಕ ಅಧಿಕಾರಿ ಆನಂದ್ ಕುಮಾರ್, ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಶ್ರೀಮತಿ ರೂಪಾ ಇದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

About Mallikarjun

Check Also

ಜಿಲ್ಲಾ ಕಾಂಗ್ರೆಸ್‌ಗೆ ಕಾರ್ಯದರ್ಶಿಯಾಗಿ ವಿಶಾಲಾಕ್ಷಿ ನೇಮಕ

Vishalakshi appointed as secretary of District Congress ಕೊಪ್ಪಳ: ತಾಲೂಕಿನ ಕಿನ್ನಾಳ ಗ್ರಾಮದ ವಿಶಾಲಾಕ್ಷಿ ವಿರೇಶ ತಾವರಗೇರಿ ಅವರನ್ನು …

Leave a Reply

Your email address will not be published. Required fields are marked *