Groundbreaking ceremony for the repair of the Ekkumbi-Molakalmuru State Highway
ಕೊಟ್ಟೂರು ಪಟ್ಟಣದ ಮೂಲಕ ಹಾದು ಹೋಗುವ ರಾಜ್ಯ ಹೆದ್ದಾರಿ ಎಕ್ಕುಂಬಿ-ಮೊಳಕಾಲ್ಮೂರು ರಾಜ್ಯ ಹೆದ್ದಾರಿಯ ದುರಸ್ತಿ ಕಾಮಗಾರಿಗೆ ಶಾಸಕ ನೇಮಿರಾಜನಾಯ್ಕ ಶುಕ್ರವಾರ ಭೂಮಿ ಪೂಜೆ ನೆರವೇರಿಸಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡುತ್ತಾ, ಕೊಟ್ಟೂರು ಪಟ್ಟಣದಿಂದ ಹರಪನಹಳ್ಳಿ ರಸ್ತೆಗೆ ಹೋಗುವ ಕೆ.ಅಯ್ಯನಹಳ್ಳಿ ಗ್ರಾಮದ ನಂತರ ರಸ್ತೆ ಇತ್ತೀಚಿನ ದಿನಗಳಲ್ಲಿ ಈ ರಸ್ತೆ ತುಂಬಾ ಗುಂಡಿಗಳು ನಿರ್ಮಾಣವಾಗಿದ್ದು, ಓಡಾಡಲು ತುಂಬಾ ತೊಂದರೆಯಾಗಿ ಕೆಲವೊಂದು ಅಪಘಾತಗಳೂ ಸಂಭವಿಸಿವೆ. ಇದನ್ನು ಗಮನದಲ್ಲಿಟ್ಟುಕೊಂಡು ಸಾರ್ವಜನಿಕರ ಅಹವಾಲಿಗೆ ಸ್ಪಂದಿಸಿ, ಸರ್ಕಾರದಿಂದ ಅನುದಾನ ತಂದು ಭೂಮಿ ಪೂಜೆ ನೆರವೇರಿಸಲಾಗಿದೆ. ಈ ಕಾಮಗಾರಿ ಅಂದಾಜು ವೆಚ್ಚ ೧೫೦.೩೫ ಲಕ್ಷ ಲೆಕ್ಕಶೀರ್ಷಿಕೆ ೫೦೫೪ ಅಪೆಂಡಿಕ್ಸ್ ಇ ೨೦೨೫-೨೬ರಡಿ ಕಾಮಗಾರಿ ಕೈಗೊಳ್ಳಲಾಗಿದೆ. ಈ ಕಾಮಗಾರಿಯು ೧೫೦.೩೦೫ ರಿಂದ ೧೫೧.೧೪೧ ಕಿ.ಮೀ. ವರೆಗೆ ಆಯ್ದ ಭಾಗಗಳನ್ನು ದುರಸ್ತಿ ಕಾಮಗಾರಿ ಕೈಗೊಳ್ಳಲಾಗುತ್ತದೆ ಎಂದರು. ಎರಡು ವರ್ಷಗಳಲ್ಲಿ ಅತೀ ಹೆಚ್ಚು ರಸ್ತೆ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ. ಸರ್ಕಾರದ ಗಮನ ಸೆಳೆದು ಅನುದಾನವನ್ನು ತಂದು ಕ್ಷೇತ್ರದ ಅಭಿವೃದ್ಧಿಗಾಗಿ ಹಗಲಿರುಳು ಶ್ರಮಿಸುತ್ತಿದ್ದೇನೆ ಎಂದರು. ಈ ಸಂದರ್ಭದಲ್ಲಿ ಎಂ.ಎಂ.ಜೆ.ಹರ್ಷವರ್ಧನ್, ಕಾರ್ಯನಿರ್ವಾಹಕ ಅಧಿಕಾರಿ ಆನಂದ್ ಕುಮಾರ್, ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಶ್ರೀಮತಿ ರೂಪಾ ಇದ್ದರು.
ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…
ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…
ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…
ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್ ನಲ್ಲಿ…
ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…
ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…