MLA M.R. Manjunath listened to the grievances of civic workers.
ವರದಿ:ಬಂಗಾರಪ್ಪ ಸಿ .ಹನೂರು.
ಹನೂರು, ತಾಲೂಕಿನ ಮಲೆ ಮಹದೇಶ್ವರಬೆಟ್ಟದ ನಾಗಮಲೆ ಭವನದಲ್ಲಿ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರಾಭಿವೃದ್ದಿ ಪ್ರಾಧಿಕಾರದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೌರ ಕಾರ್ಮಿಕರ ಕುಂದು ಕೊರತೆಗಳನ್ನು ಶಾಸಕ ಎಂ.ಆರ್. ಮಂಜುನಾಥ್ ಆಲಿಸಿದರು.
ನಂತರ ಮಾತನಾಡಿ ಮಲೈ ಮಹದೇಶ್ವರ ಬೆಟ್ಟವು ಪ್ರಸಿದ್ಧ ಪುಣ್ಯ ಸ್ಥಳವಾಗಿದ್ದು ದಿನನಿತ್ಯ ಸಾವಿರಾರು ಭಕ್ತಾದಿಗಳು ಆಗಮಿಸುತ್ತಿದ್ದು ಅವರಿಗೆ ಯಾವುದೇ ರೀತಿ ತೊಂದರೆ ಆಗದಂತೆ ಜವಾಬ್ದಾರಿ ವಹಿಸುಕೊಂಡವರು ನೋಡಿಕೊಳ್ಳಬೇಕು ಎಂದರು ತಿಳಿಸಿದರು .
ಮಲೈ ಮಹದೇಶ್ವರ ಬೆಟ್ಟದಲ್ಲಿ ಸ್ವಚ್ಚತೆಗೆ ಹೆಚ್ಚು ಒತ್ತು ನೀಡುವ ನಿಟ್ಟಿನಲ್ಲಿ, ಪೌರ ಕಾರ್ಮಿಕರ ಮೇಲ್ವಿಚಾರಕರು ಪ್ರತಿದಿನ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿ ಸ್ವಚ್ಚತೆ ಅಗತ್ಯ ಪೂರಕ ಕ್ರಮ ವಹಿಸುವ ಮೂಲಕ ದಿನಚರಿ ವರದಿ ಜೊತೆ ಕರ್ತವ್ಯ ಪಾಲನೆ ಮಾಡಬೇಕೆಂದು ಸೂಚಿಸಿದರು. ಅಲ್ಲದೆ ಪ್ರಾಧಿಕಾರದ ಕೊಠಡಿಗಳ ದಿನನಿತ್ಯದ ಸ್ವಚ್ಚತೆಗೆ ಅಧ್ಯತೆ ನೀಡಬೇಕು. ಮತ್ತು ಪ್ರಾಧಿಕಾರದ ವ್ಯಾಪ್ತಿಯಲ್ಲಿ ಬರುವಂತಹ ಶೌಚಾಲಗಳ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದರು.
ಪ್ರಾಧಿಕಾರದ ವ್ಯಾಪ್ತಿಯಲ್ಲಿ ವಿದ್ಯುತ್ ಸಮಸ್ಯೆ ಬಗೆಹರಿಸಲು ಕ್ರಮ ಕೈಗೊಳ್ಳುವಂತೆ ಚೆಸ್ಕಾಂ ಇಇ ರವರಿಗೆ ದೂರವಾಣಿ ಮುಖಾಂತರ ಫೋನ್ ಕರೆಮಾಡಿ ಸಮಸ್ಯೆ ಬಗೆಯರಿಸಲು ಕ್ರಮ ಕೈ ಗೊಳ್ಳುವಂತೆ ತಿಳಿಸಿದರು.
ನಿವೇಶನ ಇಲ್ಲದ ಪೌರ ಕಾರ್ಮಿಕರಿಗೆ ಮುಂದಿನ ದಿನಗಳಲ್ಲಿ ಪರಿಶೀಲನೆ ನಡೆಸಿ ಖಾಯಂ ಹಾಗೂ ಹೊರಗುತ್ತಿಗೆ ನೌಕರರಿಗೆ ಅಧ್ಯತೆ ಮೇರೆಗೆ ಸ್ಥಳ ನಿಯುಕ್ತಿಗೊಳಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಪ್ರಾಧಿಕಾರದ ಕಾರ್ಯದರ್ಶಿ ರಘುರವರಿಗೆ ಸೂಚಿಸಿದರು.
ಇದೇ ಸಮಯದಲ್ಲಿ ಪ್ರಾಧಿಕಾರದ ಕಾರ್ಯದರ್ಶಿ ರಘು ಉಪ ಕಾರ್ಯದರ್ಶಿ ಚಂದ್ರಶೇಖರ್ ಲೋಕೋಪಯೋಗಿ ಇಲಾಖೆ ಎಇಇ ಚಿನ್ನಣ್ಣ ಇಂಜಿನೀಯರ್ ಸಂತೋಷ್ ಕುಮಾರ್ ಸಹಾಯಕ ಅಭಿಯಂತರರು ಕಿರಿಯ ಅಭಿಯಂತರರು ಹಾಗೂ ಸ್ವಚ್ಛತಾ ವಿಭಾಗದ ಮೇಸ್ತ್ರಿಗಳು ಹಾಗೂ ನೌಕರರು ಸೇರಿದಂತೆ ಇನ್ನಿತರರು ಹಾಜರಿದ್ದರು.
ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…
ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…
ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…
ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್ ನಲ್ಲಿ…
ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…
ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…