ಚರ್ಮ, ಕೂದಲು-ಕಸಿ ಕ್ಷೇತ್ರದಲ್ಲಿ ಹೆಚ್ಚುತ್ತಿರುವ ನಕಲಿ ತಜ್ಞರನ್ನು ನಿಯಂತ್ರಿಸುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ಒತ್ತಾಯ

Health and Family Welfare Department urged to control the increasing number of fake specialists in the skin, hair and transplant sectors


ಬೆಂಗಳೂರು,ಜು.29: ಚರ್ಮ ಸಂಬಂಧಿ ಹಾಗು ಕೂದಲು-ಕಸಿ ಕ್ಷೇತ್ರದಲ್ಲಿ ಹೆಚ್ಚುತ್ತಿರುವ ನಕಲಿ ತಜ್ಞರನ್ನು ನಿಯಂತ್ರಿಸುವಂತೆ ಕರ್ನಾಟಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ಐಎಡಿವಿಎಲ್- ಚರ್ಮ ತಜ್ಞರ ಸಂಘದ ಕರ್ನಾಟಕ ಶಾಖೆ ಒತ್ತಾಯಿಸಿದೆ.
ಚರ್ಮದ ಸಮಸ್ಯೆಗೆ ಜೊತೆಗೆ ಅವೈಜ್ಞಾನಿಕವಾಗಿ ಕೂದಲು ಕಸಿ ಮಾಡುವುದಾಗಿ ಜನ ಸಾಮಾನ್ಯರನ್ನು ಯಾಮಾರಿಸುತ್ತಿದ್ದು, ಕೂಡಲೇ ತಪ್ಪಿತಸ್ಥರ ಮೇಲೆ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಯುಕ್ತರಾದ ಶಿವಕುಮಾರ್ ಕೆ.ಬಿ., ಉಪ ನಿರ್ದೇಶಕ ವಿವೇಕ್ ದೊರೈ, ಅವರನ್ನು ಭೇಟಿಯಾಗಿ ರಾಜ್ಯದಲ್ಲಿ ಚರ್ಮರೋಗ ಕ್ಷೇತ್ರದಲ್ಲಿ ಹೆಚ್ಚುತ್ತಿರುವ ನಕಲಿ ತಜ್ಞರ ಹಾವಳಿ ಮತ್ತು ಅದರ ಗಂಭೀರ ಸಾರ್ವಜನಿಕ ಆರೋಗ್ಯದ ಮೇಲಿನ ದುಷ್ಪರಿಣಾಮಗಳ ಬಗ್ಗೆ ನಿಯೋಗ ಕಳವಳ ವ್ಯಕ್ತಪಡಿಸಿತು.
ಐಎಡಿವಿಎಲ್-ಕೆಎನ್ನ ಅಂಟಿಕ್ವ್ಯಾಕರಿ ಮತ್ತು ಕಾನೂನು ವಿಭಾಗವು ಕರ್ನಾಟಕದಾದ್ಯಂತ 65 ಕ್ಕೂ ಅಧಿಕ ನಕಲಿ ಚರ್ಮ ಕ್ಲಿನಿಕ್ಗಳ ಬಗ್ಗೆ ಸ್ಪಷ್ಟ ದಾಖಲೆಗಳನ್ನು ಸಂಗ್ರಹಿಸಿದೆ. ಈ ಚರ್ಮ ಕ್ಲಿನಿಕ್‌ಗಳನ್ನು, ದಂತಚಿಕಿತ್ಸಕರು, ಬ್ಯೂಟಿಷಿಯನ್‌ಗಳು, ಸ್ಥಳೀಯ ಧಾರಾವಾಹಿ ನಟಿಯರು ಹಾಗೂ ಕೇವಲ ಹತ್ತನೇ ಅಥವಾ ಹನ್ನೆರಡನೇ ತರಗತಿವರೆಗೆ ಶಿಕ್ಷಣ ಪಡೆದ ವ್ಯಕ್ತಿಗಳು ನಕಲಿ ಪ್ರಮಾಣಪತ್ರಗಳು ಹಾಗೂ ಮಾನ್ಯತೆ ಇಲ್ಲದ ಪದವಿಗಳನ್ನು ಬಳಸಿ ನಡೆಸುತ್ತಿದ್ದಾರೆ ಎಂದು ನಿಯೋಗ ಆರೋಪಿಸಿದೆ.
ಈ ಮಂಡಳಿಯನ್ನು ಐಎಡಿವಿಎಲ್-ಕೆಎನ್ ಅಧ್ಯಕ್ಷರಾದ ಡಾ. ಮಂಜುನಾಥ ಹುಲ್ಮನಿ ನೇತೃತ್ವ ವಹಿಸಿದ್ದು, ಡಾ. ಮಹೇಶ್ ಕುಮಾರ್ ಸಿ (ಮಾನ್ಯ ಕಾರ್ಯದರ್ಶಿ), ಡಾ. ಸುಜಲಾ ಸಚ್ಚಿದಾನಂದ ಆರಾಧ್ಯ (ಮಾನ್ಯ ಖಜಾಂಚಿ), ಹಿರಿಯ ತಜ್ಞರುಗಳಾದ ಡಾ. ವೆಂಕಟ್ರಾಮ್ ಮೈಸೂರು ಮತ್ತು ಡಾ. ಜಗದೀಶ್ ಪಿ, ಹಾಗೂ ಡಾ. ಅಕ್ಷಯ್ ಸಾಮಗಾನಿ – ಅಂಟಿಕ್ವ್ಯಾಕರಿ ಮತ್ತು ಕಾನೂನು ವಿಭಾಗದ ಸಂಚಾಲಕರು ಇದ್ದರು.
ಮನವಿ ಸ್ವೀಕರಿಸಿ ಮಾತನಾಡಿದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಯುಕ್ತರಾದ ಶಿವಕುಮಾರ್, ಇಂತಹ ನಿಯಂತ್ರಣವಿಲ್ಲದ ಕ್ಲಿನಿಕ್ಗಳ ವ್ಯಾಪಕ ಜಾಲದ ಬಗ್ಗೆ ಕಳವಳ ವ್ಯಕ್ತಪಡಿಸಿದರು. ಸಾರ್ವಜನಿಕ ಆರೋಗ್ಯಕ್ಕೆ ಇದು ಉಂಟುಮಾಡಬಹುದಾದ ಅಪಾಯಗಳನ್ನು ತಪಿಸಬೇಕಾಗಿದೆ. ಇದಕ್ಕಾಗಿ ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ ಎಂದು ಭರವಸೆ ನೀಡಿದರು.
ಈ ನಿಟ್ಟಿನಲ್ಲಿ ಸಾರ್ವಜನಿಕರ ನಡುವೆ ಜಾಗೃತಿ ಮೂಡಿಸುವ ಅಗತ್ಯವಿದೆ. ಔಷಧಿ ಅಥವಾ ಚಿಕಿತ್ಸೆ ಪಡೆಯುವ ಮೊದಲು ನಿಮ್ಮ ಚರ್ಮರೋಗ ತಜ್ಞರ ವಿದ್ಯಾರ್ಹತೆಗಳನ್ನು ಪರಿಶೀಲಿಸುವುದು ಅವಶ್ಯಕ.ಈ ನಕಲಿ ವೈದ್ಯರ ವಿರುದ್ಧ ಕ್ರಮ ತೆಗೆದುಕೊಳ್ಳಲು ಸ್ಥಳೀಯ ರಾಜಕೀಯ ಒತ್ತಡ ಇರುವುದರ ಬಗ್ಗೆ ಆತಂಕ ವ್ಯಕ್ತಪಡಿಸಿ, ಸಾರ್ವಜನಿಕ ಆರೋಗ್ಯದ ದೃಷ್ಟಿಯಿಂದ ಶಾಶ್ವತ ಪರಿಹಾರವನ್ನು ರೂಪಿಸಬೇಕೆಂದು ಒತ್ತಾಯಿಸಿತು.

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

12 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

12 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

12 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

12 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

12 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

12 hours ago