ಬಳ್ಳಾರಿಯಲ್ಲಿ ಪ್ರೊ. ಬಿ,ಕೃಷ್ಣಪ್ಪ ಅವರ 88ನೇ ಜನ್ಮ ದಿನಾಚರಣೆ ಸಮಾವೇಶ :ಪರಶುರಾಮ್ ಕೆರೆಹಳ್ಳಿ

 
Prof. B. Krishnappa's 88th birthday celebration in Bellary: Parashuram Kerehalli

ಕೊಪ್ಪಳ : ಎರಡನೇ ಅಂಬೇಡ್ಕರ್ ಎಂದೇ ಹೆಸರು ವಾಸಿಯಾಗಿರುವ ಪ್ರೂ. ಬಿ ಕೃಷ್ಣಪ್ಪ ರವರ 88 ನೇ ಜನ್ಮ ದಿನಾಚರಣೆ ಅಂಗವಾಗಿ ಕಾರ್ಯಕರ್ತರ ರಾಜ್ಯ ಮಟ್ಟದ ಸ್ವಾಭಿಮಾನ ಸಂಘರ್ಷ ಚೈತನ್ಯ ಸಮಾವೇಶ ನಾಳೆ ದಿನಾಂಕ 8 ರಂದು ಬಳ್ಳಾರಿಯಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ (ಸ್ವಾಭಿಮಾನಿ ಬಿ ಕೃಷ್ಣಪ್ಪ ಬಣ)ದ ಜಿಲ್ಲಾಧ್ಯಕ್ಷ ಪರಶುರಾಮ್ ಕೆರಹಳ್ಳಿ ಹೇಳಿದರು.
ಅವರು ಬುಧವಾರ  ಗೋಷ್ಠಿ ಉದ್ದೇಶಿಸಿ ಮಾತನಾಡಿ ಕರ್ನಾಟಕದಲ್ಲಿ 70ರ ದಶಕದಲ್ಲಿ ದಲಿತರ ಮೇಲೆ ಜಾತಿ ಬೇದ, ಲಿಂಗಭೇದ ದೌರ್ಜನ್ಯ ದಬ್ಬಾಳಿಕೆಗಳು ಉತ್ತುಂಗ ಸ್ಥಿತಿಯಲ್ಲಿದ್ದ ಸಂದರ್ಭ ದಲಿತರ ಭೂಬಳಕೆ ದಲಿತ ಮಹಿಳೆಯರು ಮತ್ತು ಹೆಣ್ಣು ಮಕ್ಕಳ ಮೇಲೆ ಅತ್ಯಾಚಾರ ಸಾಮಾಜಿಕ ಅಸಮಾನತೆ ಸಜೀವ ದಹನ ನೋಡಿ ಸಹಿಸದ ಅಸ್ಪೃಶ್ಯತೆಯನ್ನ ಅನುಭವಿಸಿ, ಸಿಡಿದೆದ್ದು ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಚಿಂತನೆಯಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯನ್ನು ಸ್ಥಾಪಿಸಿ ಸಿದ್ದಿಪುರ ಬೂಹೋರಾಟ ಚಂದ್ರಗುತ್ತಿ ಬೆತ್ತಲೆ ಸೇವೆ ದೇವದಾಸಿ ಪದ್ಧತಿ, ಕುಂಬಾರ ಅನುಸೂಯಮ್ಮಳ ಅತ್ಯಾಚಾರ ವಿರೋಧಿಸಿದ ತಂದೆ ಶೇಷಗಿರಿಯಪ್ಪನ ಕೊಲೆ ಮಾಡಿ ಸಟ್ಟುಹಾಕ್ಕಿದ್ದನ್ನು ಖಂಡಿಸಿ ಹಲವಾರು ಹೋರಾಟಗಳನ್ನು ರೂಪಿಸಿ ನೊಂದ ದೌರ್ಜನ್ಯ ಕೊಳಗಾದ ವರಿಗೆ ದನಿಯಾಗಿ ಭೂ ಮಾಲೀಕರು ಬಂಡವಾಳ ಶಾಹಿಗಳಿಗೆ ಹಾಗೂ ಆಳುವ ಸರ್ಕಾರಗಳಿಗೆ ಸಿಂಹ ಸ್ವಪ್ನವಾಗಿ ಕಾಡಿ ದಲಿತಪರ ಕಾನೂನುಗಳು ಜಾರಿಯಾಗಲು ಕಾರಣಕರ್ತರಾದರು ಪ್ರೋ ಬಿ.ಕೃಷ್ಣಪ್ಪ ಎಂದು ಹೇಳಿದರು.
ನಂತರ ಮಾತನಾಡಿದ ರಾಜ್ಯ ಅಲೆಮಾರಿ ಸಮಾಜದ ಜಿಲ್ಲಾಧ್ಯಕ್ಷ ಸಂಜಯ್ ದಾಸ್ ಮಾತನಾಡಿ ಈ ಸಮಾವೇಶದಲ್ಲಿ ವಿವಿಧ ಜಿಲ್ಲೆಗಳಿಂದ ಬಹಳಷ್ಟು ಜನ ಪಾಲ್ಗೊಳ್ಳುವರು ಎಂದು ಹೇಳಿದರು.
ಈ ಸಂದರ್ಭದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯ DSS ಜಿಲ್ಲಾಧ್ಯಕ್ಷ ಪರಶುರಾಮ್ ಕೆರೆಹಳ್ಳಿ,
ಮಾರ್ಕಂಡಪ್ಪ ಹಲಗಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳು, ಗವಿಸಿದ್ದಪ್ಪ ಕುಣಿಕೇರಿ, ಜಿಲ್ಲಾ ಸಂಘಟನಾ ಸಂಚಾಲಕರು, ಶರಣಪ್ಪ ಓಜನಹಳ್ಳಿ ಭೀಮ ಆರ್ಮಿ ಜಿಲ್ಲಾಧ್ಯಕ್ಷ, ಮಂಜುನಾಥ್ ನಡುಲಮನೆ ಸಂಘಟನಾ ಸಂಚಾಲಕರು, ಅಂದಪ್ಪ ಹಡಪದ್ ಇರ್ಕಲ್ಗಡ ಹೋಬಳಿ ಘಟಕದ ಅಧ್ಯಕ್ಷರು, ಹಡಪದ ಸಮಾಜದ ತಾಲೂಕ ಅಧ್ಯಕ್ಷರು, ಸಂಜಯ್ ದಾಸರ್ ಅಲೆಮಾರಿ ಸಮಾಜದ ಅಧ್ಯಕ್ಷರು, ರಾಮಲಿಂಗಯ್ಯ ಶಾಸ್ತ್ರಿ, ಸಿದ್ದು ದದೆಗಲ್, ಮಂಜು ಸಂಗಾಪುರ್, ಲಲಿತಾ ಜಿ, ಬಸ್ಸಮ್ಮ ಸಂಗನಾಲ್, ಗಿಣಿಗೇರಿ,ರಮೇಶ್ ಕೆರೆಹಳ್ಳಿ ಯುವ ವಕೀಲರು, ನಾಗರಾಜ್ ವಕೀಲರು, ನಾಗರಾಜ್ ಹೊನ್ನಕೇರಿ, ಮಂಜು ದೊಡ್ಮನಿ,
ಶಿವು ಬೇಳೂರು, ಕನಕಪ್ಪ ವನಬಳ್ಳಾರಿ, ಮರಿಸ್ವಾಮಿ ಓಜನಹಳ್ಳಿ, ಹನುಮಂತ ಕೆರೆಹಳ್ಳಿ ವಿದ್ಯಾರ್ಥಿ ಘಟಕದ ಅಧ್ಯಕ್ಷ,

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

9 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

9 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

9 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

9 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

9 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

10 hours ago