Breaking News

ಅ.ಭಾ.ಸಾ.ಪ ವತಿಯಿಂದ ಗಂಡುಗಲಿ ಕುಮಾರರಾಮನ ಜಯಂತಿ ಅಂಗವಾಗಿ ಉಪನ್ಯಾಸ

Lecture by A.B.S.P. on the occasion of the birth anniversary of Gandugali Kumara Ram
Screenshot 2025 08 08 16 55 51 16 E307a3f9df9f380ebaf106e1dc980bb689437812210163661 659x1024

ಗಂಗಾವತಿ: ಅಖಿಲ ಭಾರತೀಯ ಸಾಹಿತ್ಯ ಪರಿಷತ್‌ನ ಗಂಗಾವತಿ ಸಮಿತಿಯಿಂದ ಆಗಸ್ಟ್-೦೯ ಶನಿವಾರ ಗಂಡುಗಲಿ ಕುಮಾರಾಮನ ಜಯಂತಿ ಅಂಗವಾಗಿ ಉಪನ್ಯಾಸ ಕಾರ್ಯಕ್ರಮವನ್ನು ಅಂದು ಬೆಳಗ್ಗೆ ೧೧:೩೦ಕ್ಕೆ ವಡ್ಡರಹಟ್ಟಿಯ ಕೆ.ಎಲ್.ಇ ಸಂಸ್ಥೆಯ ಶ್ರೀಮತಿ ಈರಮ್ಮ ಸಿದ್ದಪ್ಪ ಸಿದ್ದಾಪುರ ಪದವಿಪೂರ್ವ ಮಹಾವಿದ್ಯಾಲಯದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಸಮಿತಿಯ ಕಾರ್ಯದರ್ಶಿಯಾದ ಯಲ್ಲಪ್ಪ ಕಲಾಲ್ ಪ್ರಕಟಣೆಯಲ್ಲಿ ತಿಳಿಸಿದರು.
ಸದರಿ ಉಪನ್ಯಾಸ ಕಾರ್ಯಕ್ರಮದ ಉದ್ಘಾಟನೆಯನ್ನು ಮಹಾವಿದ್ಯಾಲಯದ ಪ್ರಾಚಾರ್ಯರಾದ ಶ್ರೀಮತಿ ಡಾ. ಮಾನಸಾ ಡಿ.ಎ ಅವರು ಮಾಡಲಿದ್ದು, ಅ.ಭಾ.ಸಾ.ಪ ಕರ್ನಾಟಕ ಪ್ರಾಂತ ಕಾರ್ಯಕಾರಿಣಿ ಸದಸ್ಯರಾದ ಅಶೋಕ ರಾಯಕರ್‌ರವರು ಗೌರವ ಉಪಸ್ಥಿತಿಯಲ್ಲಿ ನಡೆಯಲಿರುವ ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅ.ಭಾ.ಸಾ.ಪ ಗಂಗಾವತಿ ತಾಲೂಕು ಸಮಿತಿಯ ಅಧ್ಯಕ್ಷರಾದ ಜಡೆಪ್ಪ ಮೆಟ್ರಿ ವಹಿಸಲಿದ್ದಾರೆ.
ಈ ಕಾರ್ಯಕ್ರಮದಲ್ಲಿ ಅ.ಭಾ.ಸಾ.ಪ ಬಳ್ಳಾರಿ ವಿಭಾಗ ಸಂಯೋಜಕರಾದ ಟಿ. ಶ್ರೀಧರ ಶಿಕ್ಷಕರು, ಕೊಪ್ಪಳ ಜಿಲ್ಲಾ ಉಪಾಧ್ಯಕ್ಷರಾದ ಯಂಕಪ್ಪ ಕಟ್ಟಿಮನಿ, ಜಿಲ್ಲಾ ಕಾರ್ಯದರ್ಶಿ ಶರಣಪ್ಪ ತಳ್ಳಿ, ಗಂಡುಗಲಿ ಕುಮಾರರಾಮ ವಂಶಸ್ಥರಾದ ರಾಜೇಶ್ ನಾಯಕ ದೊರೆ, ಅಖಿಲ ಕರ್ನಾಟಕ ಹಕ್ಕಬುಕ್ಕ ನಾಯಕ ವೇದಿಕೆಯ ಹರನಾಯಕ ಉಪಸ್ಥಿತರಿರಲಿದ್ಧಾರೆ.
ಈ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಾಹಿತ್ಯಾಸಕ್ತರು, ಸಾರ್ವಜನಿಕರು ಪಾಲ್ಗೊಂಡು ಯಶಸ್ವಿಗೊಳಿಸಬೇಕೆಂದು ವಿನಂತಿಸಿದ್ದಾರೆ. ವರದಿ:

About Mallikarjun

Check Also

screenshot 2025 12 13 08 43 24 46 6012fa4d4ddec268fc5c7112cbb265e7.jpg

ಆತ್ಮವಿಶ್ವಾಸ ವಿದ್ದಲ್ಲಿ ಪ್ರತಿಭೆ ಅನಾವರಣ—ಡಾ! ಮಂಜುನಾಥ ಕುಕನೂರ

ಆತ್ಮವಿಶ್ವಾಸ ವಿದ್ದಲ್ಲಿ ಪ್ರತಿಭೆ ಅನಾವರಣ—ಡಾ! ಮಂಜುನಾಥ ಕುಕನೂರ Unveiling talent in self-confidence—Dr. Manjunatha Kukanoor ಯಲಬುರ್ಗಾ—ಪ್ರತಿಭೆಗೆ ಬಡತನ ಹಾಗೂ …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.