ಕಲ್ಯಾಣಸಿರಿ ವಿಶೇಷ

ಕೃಷಿ ಹೊಂಡದಲ್ಲಿ ಇಬ್ಬರು ಮಕ್ಕಳು ಆಕಸ್ಮಿಕವಾಗಿ ಬಿದ್ದು ಮೃತ

Two children die after accidentally falling into agricultural pond

ಸಾಂದರ್ಭಿಕ ಚಿತ್ರ

ಕುಷ್ಟಗಿ : ಜಮೀನೊಂದರ ಕೃಷಿ ಹೊಂಡದಲ್ಲಿ ಆಕಸ್ಮಿಕವಾಗಿ ಬಿದ್ದು ಇಬ್ಬರು ಮಕ್ಕಳು ಅಸುನೀಗಿದ ಧಾರುಣ ಘಟನೆ ತಾಲೂಕಿನ ಬಿಜಕಲ್ ಗ್ರಾಮದ ಹೊರವಲಯ ಸೋಮವಾರ ಮದ್ಯಾಹ್ನ ನಡೆದಿದ

ಗ್ರಾಮದ ಮಲ್ಲಮ್ಮ ತಂದೆ ನೀಲಪ್ಪ ತೆಗ್ಗಿನಮನಿ (11) ಮತ್ತು ಶ್ರವಣಕುಮಾರ ತಂದೆ ಸಂಗಪ್ಪ ತೆಗ್ಗಿನಮನಿ (8) ಮೃತಪಟ್ಟ ಮಕ್ಕಳು ಎಂದು ಗುರುತಿಸಲಾಗಿದೆ.

ಜಮೀನಿಗೆ ಕುಟುಂಬ ಸದಸ್ಯರೊಂದಿಗೆ ತೆರಳಿದ್ದ ಮಕ್ಕಳು, ಯಾರು ಇಲ್ಲದ ಸಮಯದಲ್ಲಿ ಕೃಷಿ ಹೊಂಡದ ಬಳಿ ತೆರಳಿದ್ದಾರೆ. ಕಳೆದ ಮೂರ್ನಾಲ್ಕು ದಿನಗಳಿಂದ ಸುರಿದ ಮಳೆಯಿಂದಾಗಿ ಕೃಷಿಹೊಂಡ ತುಂಬಿಕೊಂಡಿದೆ. ಆಕಸ್ಮಿಕವಾಗಿ ಎರಡೂ ಮಕ್ಕಳು ತುಂಬಿದ ಹೊಂಡದಲ್ಲಿ ಕಾಲು ಜಾರಿ ಬಿದ್ದಿರಬಹುದು ಎಂದು ಹೇಳಲಾಗುತ್ತಿದೆ. ಮಕ್ಕಳು ನೀರಲ್ಲಿ ಜಾರಿ ಬಿದ್ದ ತಿಳಿದ ಕುಟುಂಬದವರು ಮಕ್ಕಳನ್ನು ಆಚೆ ತೆಗೆದು ಕೂಡಲೇ ಕುಷ್ಟಗಿ ಸಾರ್ವಜನಿಕ ಆಸ್ಪತ್ರೆಗೆ ಕರೆತಂದು ದಾಖಲಿಸಿದ್ದಾರೆ. ಆದರೆ, ಮಕ್ಕಳ ತಪಾಸಣೆ ನಡೆಸಿದ ಕರ್ತವ್ಯದಲ್ಲಿದ್ದ ತಜ್ಞ ವೈದ್ಯ ಡಾ.ಮನೋಜ ಅವರು ಮಕ್ಕಳ ಆರೋಗ್ಯ ಪರಿಶೀಲಿಸಿ ಸಾವನ್ನಪ್ಪಿದ ಬಗ್ಗೆ ದೃಢಪಡಿಸಿದರು ಎಂದು ಕುಟುಂಬದ ಮೂಲಗಳು ತಿಳಿಸಿವೆ.

ನೀಲಪ್ಪ ತೆಗ್ಗಿನಮನಿ, ಸಂಗಪ್ಪ ತೆಗ್ಗಿನಮನಿ ಈ ಇಬ್ಬರೂ ಸಹೋದರರ ಮಕ್ಕಳು ಇವಾಗಿದ್ದು, ಮಕ್ಕಳ ಮೃತದೇಹ ಕಂಡ ಪಾಲಕರು ಮತ್ತು ಕುಟುಂಬಸ್ಥರ ಆಕ್ರಂದನ ಆಸ್ಪತ್ರೆ ಆವರಣದಲ್ಲಿ ಸೇರಿದ್ದ ಸಾರ್ವಜನಿಕರ ಕಣ್ಣಂಚು ತೇವಗೊಳಿಸಿತು.

ಆಸ್ಪತ್ರೆಗೆ ಭೇಟಿ ನೀಡಿದ ಸ್ಥಳೀಯ ಪೊಲೀಸರು ವಿಚಾರಣೆ ನಡೆಸಿ ಘಟನಾ ಮಾಹಿತಿ ಪಡೆದುಕೊಂಡಿದ್ದಾರೆ.

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

11 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

11 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

12 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

12 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

12 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

12 hours ago