ಮೈನಹಳ್ಳಿ ಸರ್ಕಾರಿ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ದಿನಾಚರಣೆ ಅಂಗವಾಗಿ ಪಠ್ಯ ಪುಸ್ತಕ ವಿತರಣೆ

Textbook distribution at Mainahalli Government School as part of Independence Day celebrations
 

 

 

 ಕೊಪ್ಪಳ : ದೇಶದ ಸ್ವಾತಂತ್ರ್ಯಕ್ಕಾಗಿ ಹಲವಾರು ಮಹನೀಯರು ತಮ್ಮ ಜೀವನವನ್ನೆ ಮುಡುಪಾಗಿಟ್ಟು ನಮಗೆ ಸ್ವಾತಂತ್ರ್ಯ ತಂದುಕೊಟ್ಟಿರುವುದನ್ನು ನಾವು ಪ್ರತಿ ನಿತ್ಯ ಸ್ಮರಣೆ ಮಾಡುವ ಜೊತೆಗೆ ಅವರ ಆದರ್ಶಗಳನ್ನು ಅಳವಡಿಸಿಕೊಂಡು ಬದುಕು ನಡೆಸಬೇಕು ಎಂದು ಶಾಲಾ ಮುಖ್ಯೋಪಾಧ್ಯಯರು ಮತ್ತು ನಿಕಟಪೂರ್ವ ಕ.ರಾ. ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾದ ಶಂಭುನಗೌಡ್ರು ಪಾಟೀಲ್ ಹೇಳಿದರು. ಅವರು ತಾಲ್ಲೂಕಿನ ಮೈನಹಳ್ಳಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಗಸ್ಟ್ 15ರ ಶುಕ್ರವಾರದಂದು 79 ನೇ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿ ವಿದ್ಯಾರ್ಥಿಗಳು ನಮ್ಮ ದೇಶ ಹಾಗೂ ನಮ್ಮ ನಾಡಿನ ಮಹನೀಯರ ಕುರಿತು ಸತತ ಅಧ್ಯಯನ ನಡೆಸುವ ಮೂಲಕ ಅವರ ಆದರ್ಶಪಾಲನೆಗೆ ಮುಂದಾಗಬೇಕಿದೆ ಎಂದು ಕರೆ ನೀಡಿದರು. ಶಾಲೆಯ ಸುಧಾರಣೆ ನಮ್ಮ ಕರ್ತವ್ಯವಾಗಿದ್ದು ಶಾಲೆಗೆ ದಾನ ಮಾಡಿದವರನ್ನು ಈ ದಿನ ಸ್ಮರಿಸಲೇಬೇಕಿದೆ ಎಂದರು. ಮೈನಳ್ಳಿಯ ಶ್ರೀ ಅಡವಿಬಸಯ್ಯ ತೋಟದ ಶಿಕ್ಷಣ , ಸಾಹಿತ್ಯ, ಮತ್ತು ಸಾಂಸ್ಕೃತಿಕ (ರಿ) ಸಂಸ್ಥೆಯ ಸಂಸ್ಥಾಪಕರು, ಸಾಹಿತಿಗಳು, ಕಲಾವಿದರು, ವಕೀಲರು, ಸಮಾಜಸೇವಕರಾದ ಡಾ.ಷಣ್ಮುಖಯ್ಯ ತೋಟದ ಅವರು ಪ್ರತಿ ವರ್ಷದಂತೆ ಕಳೆದ 36 ವರ್ಷಗಳಿಂದ ಅವರ ತಂದೆ ತಾಯಿಯವರ ಸವಿನೆನಪಗಾಗಿ ಶಾಲೆಯ ಎಲ್ಲಾ ವಿಧ್ಯಾರ್ಥಿಗಳಿಗೆ ಉಚಿತವಾಗಿ ನೋಟ ಬುಕ್, ಲೇಖನಿ, ಪೆನ್ಸಿಲ್, ಜಾಮೆಟ್ರಿ ಬಾಕ್ಸ್ ವಿತರಣೆ ಮಾಡುತ್ತಿರುವುದು ನಿಜಕ್ಕೂ ಶ್ಲಾಘನೀಯವಾಗಿದ್ದು ಅವರ ಕಾರ್ಯ ಸಮಾಜಕ್ಕೆ ಮಾದರಿಯಾಗಿದೆ ಎಂದು ತಿಳಿಸಿದರು. ನಂತರ ಶ್ರೀ ಅಡವಿಬಸಯ್ಯ ತೋಟದ ಶಿಕ್ಷಣ , ಸಾಹಿತ್ಯ, ಮತ್ತು ಸಾಂಸ್ಕೃತಿಕ (ರಿ) ಸಂಸ್ಥೆಯ ಸಂಸ್ಥಾಪಕರಾದ ಡಾ.ಷಣ್ಮುಖಯ್ಯ ತೋಟದ ಅವರು ಮಾತನಾಡಿ ನಮ್ಮ ದೇಶ ಹಾಗೂ ನಮ್ಮ ನಾಡಿನ ಒಳಿತಿಗಾಗಿ ವಿದ್ಯಾರ್ಥಿಗಳು ಸದಾ ಕಾರ್ಯೋನ್ಮುಖರಾಗಿ ಜೀವನ ನಡೆಸಬೇಕು, ದೇಶಕ್ಕೆ ಮಹಾನ್ ನಾಯಕರ, ಹೋರಾಟಗಾರರ, ಯೋಧರ, ರೈತರ ಕಾರ್ಯ ನಿಜಕ್ಕೂ ಸದಾಸ್ಮರಣೀಯವಾಗಿದ್ದು ಅವರ ಆದರ್ಶ ಗುಣಗಳನ್ನು ಅಳವಡಿಸಿಕೊಂಡು ವಿದ್ಯಾರ್ಥಿಗಳು ಸಾಗಬೇಕು ಎಂದರು. ನಂತರ ಎಸ್.ಡಿ.ಎಮ್.ಎಸ್. ಅಧ್ಯಕ್ಷ ಮಹೇಂದ್ರಕಮಾರ ಕುರಡಿಗಿ ಹಾಗೂ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷರು ಹಾಲಿ ಸದಸ್ಯರಾದ ಮರಿ ಶಾಂತವೀರ ಸ್ವಾಮಿ ಚಕ್ಕಡಿ ವಿದ್ಯಾಧರ ಹಿರೇಗೌಡ್ರು, ಸಿದ್ದರಡ್ಡಿ ಡಂಬ್ರಳ್ಳಿ, ಬಸನಗೌಡ್ರ, ಜಗದೀಶ ಕತ್ತಿ ಇತರರು ಸ್ವಾತಂತ್ರ್ಯದ ಬಗ್ಗೆ ಮಾತನಾಡಿದರು. ಈ ವೇಳೆ ಶಾಲೆಯ ವಿದ್ಯಾರ್ಥಿಗಳು ಸ್ವಾತಂತ್ರ್ಯೋತ್ಸವದ ಕುರಿತು ಭಾಷಣ ಮಾಡಿದರು. ಮತ್ತು ವಿವಿಧ ದೇಶ ಭಕ್ತಿ ಹಾಗೂ ನೃತ್ಯಗಳು ಜರುಗಿದವು, ಹಾಗೂ ಸ್ಕೌಟ್ ಆಂಡ್ ಗೈಡ್ಸ್ ವಿದ್ಯಾರ್ಥಿಗಳಿಗೆ ರಾಜ್ಯಪಾಲರ ಪ್ರಮಾಣಿಕೃತ ಪತ್ರ ನೀಡಲಾಯಿತು. ಇದೇ ವೇಳೆ ಶಾಲೆಯ ಅಡುಗೆ ಸಹಾಯಕರಿಗೆ ನಿವೃತ್ತಿ ಹೊಂದಿದ ಕಾರಣ ಸನ್ಮಾನಿಸಿ ಗೌರವಿಸಲಾಯಿತು. ‌ ಈ ಸಂದರ್ಭದಲ್ಲಿ ಎಸ್ ಡಿ ಎಂ ಸಿ ಸದಸ್ಯರು ಹಾಗೂ ಗ್ರಾಮ ಪಂಚಾಯಿತಿ ಉಪಾಧ್ಯಕ್ಷರು, ಸದಸ್ಯರು ಮುದ್ದು ವಿದ್ಯಾರ್ಥಿಗಳು ಗ್ರಾಮದ ಗುರು‌ಹಿರಿಯರು, ಸಹ ಶಿಕ್ಷಕರು, ಅಂಗನವಾಡಿ ಕಾರ್ಯಕರ್ತೆಯರು ಆಶಾ ಕಾರ್ಯಕರ್ತೆಯರು ಹಾಗೂ ಶಾಲೆಯ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

16 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

16 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

16 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

16 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

16 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

16 hours ago