Breaking News

ಆಗಸ್ಟ್-೨೧ ರಂದು ಗಂಗಾವತಿಯಲ್ಲಿನಗರ ಸಂಕೀರ್ತನಾ ಯಾತ್ರೆ: ಸದಾನಂದ ಶೇಟ್

Nagar Sankirtana Yatra in Gangavathi on August 21: Sadanand Shet
Screenshot 2025 08 19 13 42 01 12 6012fa4d4ddec268fc5c7112cbb265e79189525998468589896 1024x889

ಗಂಗಾವತಿ: ಶ್ರಾವಣ ಮಾಸದ ನಿಮಿತ್ಯ ಆಗಸ್ಟ್-೨೧ ಗುರುವಾರದಂದು ನಗರ ಸಂಕೀರ್ತನಾ ಸಮಿತಿ (ಸರ್ವ ಸಮಾಜ) ವತಿಯಿಂದ ಗಂಗಾವತಿ ನಗರದಲ್ಲಿ ಭಜನೆ ಮೂಲಕ ಸಂಕೀರ್ತನಾ ಯಾತ್ರೆ ಬೆಳಿಗ್ಗೆ ೫ ಗಂಟೆಯಿAದ ಗ್ರಾಮದೇವತೆ ದುರ್ಗಮ್ಮ ದೇವಸ್ಥಾನ (ಚನ್ನಬಸವವಸ್ವಾಮಿ ತಾತನ ಮಠ) ದಿಂದ ಪ್ರಾರಂಭಗೊಂಡು ಗಾಂಧಿವೃತ್ತ, ಬಸವಣ್ಣ ಸರ್ಕಲ್, ಪಂಪಾನಗರ ಸರ್ಕಲ್ ಮೂಲಕ ಯಾಜ್ಞವಲ್ಕö್ಯ ಮಂದಿರದವರೆಗೆ ನಡೆಯಲಿದೆ ಎಂದು ಸಮಿತಿಯ ಅಧ್ಯಕ್ಷರಾದ ಸದಾನಂದ ಶೇಟ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈ ಸಂಕೀರ್ತನಾ ಯಾತ್ರೆಯನ್ನು ಶ್ರಾವಣ ಮಾಸದ ನಿಮಿತ್ಯ ಮಾಡಲಾಗುತ್ತಿದ್ದು, ಸಂಕೀರ್ತನ ಯಾತ್ರೆಯ ದಾರಿಯುದ್ದಕ್ಕೂ ಭಜನೆ, ಧಾರ್ಮಿಕ ಭಕ್ತಿ ಗೀತೆಗಳು, ನೃತ್ಯ, ಕೋಲಾಟ ಹಾಗೂ ವಿವಿಧ ವೇಷ ಭೂಷಣಗಳ ಮೂಲಕ ನಡೆಸಲಾಗುವುದು. ಯಾಜ್ಞವಲ್ಕö್ಯ ಮಂದಿರದಲ್ಲಿ ನಡೆಯುವ ಧಾರ್ಮಿಕ ಸಭೆಯಲ್ಲಿ ಶ್ರೀ ನಾರಾಯಣಗುರು ವಿಚಾರ ವೇದಿಕೆ (ರಿ) ಬೆಂಗಳೂರು ಕಾರ್ಯಾಧ್ಯಕ್ಷರಾದ ನಾಗರಾಜ ಎಸ್ ಗುತ್ತೇದಾರ ವಕೀಲರು ಈ ಧಾರ್ಮಿಕ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಸಭೆಯ ನಂತರ ಪ್ರಸಾದದೊಂದಿಗೆ ಕಾರ್ಯಕ್ರಮ ಸಂಪನ್ನಗೊಳ್ಳಲಿದೆ. ಈ ಸಂಕೀರ್ತನಾ ಕಾರ್ಯಕ್ರಮಕ್ಕೆ ಎಲ್ಲರೂ ಒಂದೇ ಮನಸ್ಸಿನಿಂದ ಬಂದು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿಕೊಡಬೇಕೆಂದು ಸರ್ವ ಸಮಾಜದವರಲ್ಲಿ ಕೋರಿದ್ದಾರೆ.

About Mallikarjun

Check Also

screenshot 2025 12 13 08 43 24 46 6012fa4d4ddec268fc5c7112cbb265e7.jpg

ಆತ್ಮವಿಶ್ವಾಸ ವಿದ್ದಲ್ಲಿ ಪ್ರತಿಭೆ ಅನಾವರಣ—ಡಾ! ಮಂಜುನಾಥ ಕುಕನೂರ

ಆತ್ಮವಿಶ್ವಾಸ ವಿದ್ದಲ್ಲಿ ಪ್ರತಿಭೆ ಅನಾವರಣ—ಡಾ! ಮಂಜುನಾಥ ಕುಕನೂರ Unveiling talent in self-confidence—Dr. Manjunatha Kukanoor ಯಲಬುರ್ಗಾ—ಪ್ರತಿಭೆಗೆ ಬಡತನ ಹಾಗೂ …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.