ಆ.23 ರಂದು ಮಾದಕವಸ್ತು ವಿರೋಧಿ ಜಾಗೃತಿ ವಾಕಥಾನ್

Anti-drug awareness walkathon on August 23
 


ಬೆಂಗಳೂರು,ಆ.20; ನಗರ ಪೊಲೀಸರು ಮತ್ತು ಅಲಯನ್ಸ್ ಕ್ಲಬ್ಸ್ ಇಂಟರ್‌ನ್ಯಾಷನಲ್ ಸಹಯೋಗದಲ್ಲಿ ಆ,23 ರಂದು ನಗರದ ಶಂಕರ್‌ ನಾಗ್‌ ವೃತ್ತದ ಡೋಂಕಾಳ ಮೈದಾನದಲ್ಲಿ ಮಾದಕವಸ್ತು ವಿರೋಧಿ ಜಾಗೃತಿ ವಾಕಥಾನ್ ಹಮ್ಮಿಕೊಳ್ಳಲಾಗಿದೆ.
ಸುದ್ದಿಗೋಷ್ಠಿಯಲ್ಲಿ ವಿವಿ ಪುರಂ ಉಪ ವಿಭಾಗದ ಸಹಾಯಕ ಪೊಲೀಸ್ ಆಯುಕ್ತ ಶಾಮಿದ್ ಬಾಷಾ ಅಧಿಕೃತ ಪೋಸ್ಟರ್ ಹಾಗೂ ಟಿ-ಶರ್ಟ್ ಬಿಡುಗಡೆ ಮಾಡಿ ಮಾತನಾಡಿ, ವಿಶೇಷವಾಗಿ ಯುವಜನತೆಯಲ್ಲಿ ಮಾದಕವಸ್ತು ದುರ್ಬಳಕೆಯ ಅಪಾಯಗಳು ಮತ್ತು ಪರಿಣಾಮಗಳ ಕುರಿತು ಜಾಗೃತಿ ಮೂಡಿಸಲಾಗುತ್ತಿದೆ. ಈ ಕಾರ್ಯಕ್ರಮದ ಮೂಲಕ ಮಾದಕವಸ್ತುಗಳ ದಾಸರಾಗಿರುವ ವ್ಯಕ್ತಿಗಳು, ಕುಟುಂಬಗಳು ಮತ್ತು ಸಮುದಾಯಗಳ ಮೇಲೆ ಬೀರುವ ಹಾನಿಕಾರಕ ಪರಿಣಾಮಗಳ ಕುರಿತು ಜನಸಾಮಾನ್ಯರಲ್ಲಿ ಬಲವಾದ ಮತ್ತು ಏಕಮತದ ಸಂದೇಶ ಹರಡುವ ಉದ್ದೇಶ ಹೊಂದಲಾಗಿದೆ ಎಂದರು.
ಆರೋಗ್ಯಕರ ಹಾಗೂ ಸುರಕ್ಷಿತ ಸಮಾಜ ನಿರ್ಮಾಣದತ್ತ ಬದ್ಧತೆಯನ್ನು ಉತ್ತೇಜಿಸುವತ್ತ ಗುರಿಯಿಟ್ಟಿದೆ. ಮಹತ್ತರವಾದ ಅಭಿಯಾನದಲ್ಲಿ ಪ್ರತಿಯೊಬ್ಬರೂ ಪಾಲ್ಗೊಳ್ಳಬೇಕು. ವಾಕಥಾನ್‌ ಗೆ ಉಪ ಪೊಲೀಸ್ ಆಯುಕ್ತ ಲೋಕೇಶ್ ಬಿ. ಜಗಲಸರ್, ಸಂಸದರಾದ ಡಾ. ಸಿ. ಎನ್. ಮಂಜುನಾಥ್, ತೇಜಸ್ವಿ ಸೂರ್ಯ, ಶಾಸಕರಾದ ಎಲ್. ಎ. ರವಿ ಸುಬ್ರಮಣ್ಯ ಚಾಲನೆ ನೀಡಲಿದ್ದಾರೆ ಎಂದರು.
ಅಲಯನ್ಸ್ ಕ್ಲಬ್ಸ್ ಇಂಟರ್‌ನ್ಯಾಷನಲ್ ಬೆಂಗಳೂರು ಜಿಲ್ಲಾ ರಾಜ್ಯಪಾಲರಾದ ಸತ್ಯವತಿ ಬಸವರಾಜ್, ಅಲಯನ್ಸ್ ಕ್ಲಬ್ ಆಫ್ ಬೆಂಗಳೂರು ಕಿಂಗ್ಸ್ ಅಧ್ಯಕ್ಷ ವಿಜಯೇಂದ್ರ, ಕಾರ್ಯದರ್ಶಿ ಧೀರಜ್, ಖಜಾಂಚಿ ನಿಶಾಂತ್ ಹಾಗೂ ವೃದ್ಧಿ ವೆಂಚರ್ಸ್ ವ್ಯವಸ್ಥಾಪಕ ನಿರ್ದೇಶಕ ಅಜಯ್ ಗೌಡ ನೇತೃತ್ವದಲ್ಲಿ ಅಭಿಯಾನ ನಡೆಯಲಿದೆ ಎಂದರು.
ಈ ಸಂದರ್ಭದಲ್ಲಿ ಪೊಲೀಸ್ ಇನ್ಸ್‌ಪೆಕ್ಟರ್ ಗಳಾದ ಸೂರ್ಯಪ್ರಸಾದ್ ಎಸ್, ಹನುಮಂತನಗರ ಪೊಲೀಸ್ ಠಾಣೆಯ ಸತೀಶ್ ಕುಮಾರ್, ಗಿರಿನಗರ ಪೊಲೀಸ್ ಠಾಣೆಯ ಗಿರೀಶ್ ನಾಯಕ್ ರವರು, ಚೆನ್ನಮ್ಮಕೆರೆ ಅಚುಕಟ್ಟು ಪೊಲೀಸ್ ಠಾಣೆಯ ವಿನಯ್ ಎಚ್.ಎನ್, ಕೆ.ಜಿ.ನಗರ ಪೊಲೀಸ್ ಠಾಣೆ, ಜಿ. ಉದಯ್ ರವಿ, ಶಂಕರಪುರ ಪೊಲೀಸ್ ಠಾಣೆಯ ಧರ್ಮೇಂದ್ರ ಟಿ.ಎಂ, ವಿ. ವಿ. ಪುರಂ ಪೊಲೀಸ್ ಠಾಣೆಯ ಲಿಂಗಣ್ಣ ಗೌಡ ಪಾಟೀಲ್ ಮತ್ತಿತರರು ಉಪಸ್ಥಿತರಿದ್ದರು.

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

14 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

14 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

14 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

14 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

14 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

15 hours ago