ಅಕ್ಟೋಬರ್‌ನಲ್ಲಿ ಅಂಬೇಡ್ಕರ್ ಹೆಸರಲ್ಲಿ ರಾಷ್ಟ್ರ ಮಟ್ಟದ ಕಾರ್ಯಕ್ರಮ

National level program in the name of Ambedkar in October
 

ಕೊಪ್ಪಳ: ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ ರಾಜ್ಯದಲ್ಲೇ ಯುವಜನರ ಧ್ವನಿಯಾಗಿದ್ದು, ಸರ್ಕಾರ ಹಾಗೂ ಯುವ ಸಂಘಗಳ ನಡುವೆ ಕೊಂಡಿಯಾಗಿ ಕೆಲಸ ಮಾಡುತ್ತಿದ್ದು, ಬಾಬಾಸಾಹೇಬ್ ಅಂಬೇಡ್ಕರ್ ಅವರ ಹೆಸರಲ್ಲಿ ಅಕ್ಟೋಬರ್‌ನಲ್ಲಿ ಕೊಪ್ಪಳದಲ್ಲಿ ಅಂಬೇಡ್ಕರ್ ಹೆಸರಲ್ಲಿ ರಾಷ್ಟçಮಟ್ಟದ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತದೆ ಎಂದು ರಾಜ್ಯಾಧ್ಯಕ್ಷ ಡಾ. ಎಸ್. ಬಾಲಾಜಿ ಮತ್ತು ಕಲಬುರಗಿ ವಿಭಾಗೀಯ ಅಧ್ಯಕ್ಷ ಮಂಜುನಾಥ ಜಿ. ಗೊಂಡಬಾಳ ಜಂಟಿ ಹೇಳಿಕೆ ನೀಡಿದ್ದಾರೆ.
ಒಕ್ಕೂಟ ಸುಮಾರು ೧೩ ವರ್ಷಗಳಿಂದ ರಾಜ್ಯಗಳಲ್ಲಿ ಹೊಸ ಯುವಕ ಸಂಘಗಳ ಸ್ಥಾಪನೆ, ಯುವ ಸಂಪರ್ಕ ಸಭೆಗಳು, ಜಿಲ್ಲಾ ಯುವ ವಿನಿಮಯ ಕಾರ್ಯಕ್ರಮಗಳು, ಜನಪದ ಕಲಾ ತರಬೇತಿ ಶಿಬಿರಗಳು, ಯುವಜನ ಮೇಳಗಳನ್ನು ನಡೆಸುತ್ತಾ ಬಂದಿದೆ. ಅದರ ಜೊತೆಗೆ ರಾಜ್ಯದ ಯುವಜನರ ಶಕ್ತಿಯನ್ನು ಇಮ್ಮಡಿಗೊಳಿಸಲು ಸೇವೆ ಗುರುತಿಸಲು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುಮಾರು ೧೨ ವರ್ಷಗಳಿಂದ ೩೧ ಜಿಲ್ಲೆಯ ಯುವ ಜನರಿಗೆ ರಾಜ್ಯ ಯುವ ಪ್ರಶಸ್ತಿ, ಹಾಗೂ ಸಾಂಘಿಕ ಪ್ರಶಸ್ತಿಗಳನ್ನು, ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ಪಟ್ಟಣದಲ್ಲಿ ಸ್ವಾಮಿ ವಿವೇಕಾನಂದ ರಾಜ್ಯ ಯುವ ಪ್ರಶಸ್ತಿ ಹಾಗೂ ರಾಷ್ಟಿçÃಯ ಸದ್ಭಾವನ ಪ್ರಶಸ್ತಿಯನ್ನು ಹೊರ ರಾಜ್ಯ ಹಾಗೂ ನಮ್ಮ ರಾಜ್ಯದ ೫೦ ಜನ ಯುವ ಜನರಿಗೆ ಮೂರು ಸಾಂಘಿಕ ರಾಜ್ಯ ಪ್ರಶಸ್ತಿಗಳನ್ನು ಪ್ರಧಾನ ಮಾಡುತ್ತಿದ್ದು, ಬೆಳಗಾವಿ ಜಿಲ್ಲೆಯ ಮೂಡಲಗಿಯಲ್ಲಿ ೩೧ ಜಿಲ್ಲೆಗೆ ಸಂಗೊಳ್ಳಿ ರಾಯಣ್ಣ ರಾಜ್ಯ ಯುವ ಪ್ರಶಸ್ತಿ, ಎರಡು ಸಾಂಘಿಕ ಪ್ರಶಸ್ತಿ ನೀಡುತ್ತಾ ಬಂದಿದೆ.
ಈಗ ಕೊಪ್ಪಳದಲ್ಲಿ ರಾಷ್ಟçಮಟ್ಟದ ಕಾರ್ಯಕ್ರಮ ಮಾಡಿ, ಅಂಬೇಡ್ಕರ್ ತತ್ವ ಪ್ರಸಾರ, ಸಂವಿಧಾನ ಸಂರಕ್ಷಣೆಯ ಅಗತ್ಯ ಹಾಗೂ ಶೋಷಿತರ ಹಿರಕ್ಷಣೆ ಕುರಿತು ವಿಶಿಷ್ಟ ಕಾರ್ಯಕ್ರಮ ಮಾಡುತ್ತಿದ್ದು, ಅದರಲ್ಲಿ ಪ್ರಸಕ್ತ ಸಾಲಿನಿಂದ ಬಾಬಾ ಸಾಹೇಬ್ ಅಂಬೇಡ್ಕರ್ ರಾಜ್ಯ ಹಾಗೂ ರಾಷ್ಟç ಯುವ ಪ್ರಶಸ್ತಿಗಳನ್ನು ೩೧ ಜಿಲ್ಲೆಯ ಜನರಿಗೆ ಹಾಗೂ ಎರಡು ಸಾಂಘಿಕ ಪ್ರಶಸ್ತಿಗಳನ್ನು ಜೊತೆಗೆ ಕೆಲವು ವಿಶೇಷ ಪ್ರಶಸ್ತಿ ನೀಡಲು ಒಕ್ಕೂಟ ತೀರ್ಮಾನಿಸಿದೆ.
ಸರ್ಕಾರ ಯುವಜನ ಮೇಳಗಳನ್ನು ನಿಲ್ಲಿಸಿದ್ದನ್ನು ಪುನಃಟಾರಂಭಿಸಬೇಕು, ತಾಲೂಕು, ಜಿಲ್ಲೆ, ವಿಭಾಗ, ರಾಜ್ಯ ಯುವಜನ ಮೇಳಗಳನ್ನು ಮತ್ತೆ ಸ್ಥಾಪಿಸಬೇಕು, ರಾಜ್ಯದಲ್ಲಿ ಯುವ ನೀತಿ ಅನುಷ್ಠಾನವಾಗಬೇಕು, ಕ್ರೀಡೆಗೆ ನೀಡುತ್ತಿರುವ ಸವಲತ್ತು ಯುವ ಸಬಲೀಕರಣಕ್ಕೂ ನೀಡಬೇಕು ಎಂಬುದು ಒಕ್ಕೂಟದ ಆಶಯವಾಗಿದೆ. ರಾಜ್ಯದಲ್ಲಿ ದಶಕಗಳಿಂದ ಮಾಡುತ್ತಿರುವ ಕಾರ್ಯಕ್ರಮಗಳಿಗೆ ಸರಕಾರ ಅನುದಾನ ನೀಡಬೇಕು. ಯುವಜನರು ಸಹ ಉತ್ತಮವಾಗಿ ಮೇಲೆ ಬರಲು ಅವಕಾಶ ನೀಡಬೇಕು ಎಂದು ಸರಕಾರವನ್ನು ಒತ್ತಾಯಿಸಿದ್ದಾರೆ. ರಾಷ್ಟçಮಟ್ಡದ ಕಾರ್ಯಕ್ರಮದಲ್ಲಿ ಅಂಬೇಡ್ಕರ್ ಅವರ ಮೊಮ್ಮಕ್ಕಳು ಪಾಲ್ಗೊಳ್ಳುವರು, ಸ್ವಾಮೀಜಿಯವರು, ಸಚಿವರು ಭಾಗವಹಿಸುವರು ಎಂದು ತಿಳಿಸಿದ್ದಾರೆ.

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

13 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

13 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

13 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

13 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

13 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

13 hours ago