ಕಲ್ಯಾಣಸಿರಿ ವಿಶೇಷ

ಆಗಷ್ಟ ೨೯ಕ್ಕೆ “ಸಿಂಹ ರೂಪಿಣಿ” ಬಿಡುಗಡೆ

“Simha Rupini” to release on August 29

ಬೆಂಗಳೂರು : ಕೆ ಜಿ ಎಫ್. ಸಲಾರ್. ಕಬ್ಜ. ಭೈರತಿ ರಣಗಲ್ ಮೊದಲಾದ ಚಿತ್ರಗಳಿಗೆ ಹಾಡು ಬರೆದ ಖ್ಯಾತ ಸಾಹಿತಿ, ಕಿನ್ನಾಳ ರಾಜ್ ನಿರ್ದೇಶನದ “ಸಿಂಹರೂಪಿಣಿ” ಚಿತ್ರವು ಆಗಸ್ಟ್ ೨೯ಕ್ಕೆ ತೆರೆಕಾಣಲಿದ್ದು ಪ್ರೇಕ್ಷಕರು ಚಿತ್ರವನ್ನು ನೋಡುವಂತೆ ಜನಪ್ರಿಯ ಬರಹಗಾರ, ನಿರ್ದೇಶಕ , ನಿರ್ಮಾಪಕ ಆರ್.ಚಂದ್ರು ಹೇಳಿದರು.
ಚಿತ್ರವು ಮಾರಮ್ಮದೇವಿಯ ಕುರಿತಾಗಿದ್ದು.ಕಾಂತಾರ ಚಿತ್ರದಂತೆ ಇಲ್ಲೂ ಕೂಡ ದೈವ ಶಕ್ತಿಯಿದೆ. ಈ ಚಿತ್ರವು ಸಹ ಎಲ್ಲರಿಗೂ ಇಷ್ಟ ಆಗುತ್ತದೆ. ಚಿತ್ರಮಂದಿರಕ್ಕೆ ಬಂದು ಅಮ್ಮನ ಮಹಿಮೆಗಳನ್ನು ನೋಡಿರಿ ಎಂದು ಆರ್ ಚಂದ್ರು ತಂಡದ ಪರವಾಗಿ ಮಾತನಾಡಿದರು. ಚಿತ್ರದ ಕೆಲ ದೃಶ್ಯಗಳನ್ನ,ಹಾಡುಗಳನ್ನು ನೋಡಿ. ತುಂಬಾ ಇಷ್ಟ ಪಟ್ಟು ಮೆಚ್ಚುಗೆಯ ಮಾತನಾಡಿದರು.
ಮಾರಮ್ಮನಿಗೆ ಕೋಣ ಬಲಿ ಕೊಡುವ ಪದ್ಧತಿ ಯಾಕಿತ್ತು ? ಅದರ ಹಿನ್ನಲೆ ಏನು? ಎನ್ನುವದನ್ನು ‘ಸಿಂಹರೂಪಿಣಿ’ ಚಿತ್ರದಲ್ಲಿ ತೋರಿಸಲಾಗಿದೆ. ಜಸ್ಕರಣ್ ಹಾಡಿರುವ “ಬಂಗಾರದ ಗೊಂಬೆ ಬಂದು ಎದುರು ನಿಂತರೆ” ಹಾಡು ಸೂಪರ್ ಹಿಟ್ ಆಗಿದ್ದು. ಚಿತ್ರದ ಪ್ಲಸ್ ಪಾಯಿಂಟ್ ಎನ್ನಬಹುದು. ಕೆ ಜಿ ಎಫ್ ಚಿತ್ರದ ಸಂಗೀತ ನಿರ್ದೇಶಕರಾದ ರವಿ ಬಸ್ರೂರು ವಿಶೇಷ ಹಾಡಿನಲ್ಲಿ ಕಾಣಿಸಿಕೊಂಡಿದ್ದು. ಇದು ಪಕ್ಕಾ ಕಮರ್ಷಿಯಲ್ ಚಿತ್ರ ಎನ್ನಬಹುದು. ಸಾಗರ್. ಅಂಕಿತಾ ಯಶ್ ಶೆಟ್ಟಿ. ದಿವ್ಯಾ ಆಲೂರ್. ಯಶಸ್ವಿನಿ ಹರೀಶ್ ರಾಯ್. ದಿನೇಶ್ ಮಂಗಳೂರ್. ವಿಜಯ್ ಚೆಂಡೂರ್. ಖುಷಿ ಬಸ್ರೂರ್. ತಬಲಾ ನಾಣಿ. ನಿನಾಸಂ ಅಶ್ವಥ್. ಪುನೀತ್ ರುದ್ರನಾಗ್. ಭಜರಂಗಿ ಪ್ರಸನ್ನ. ಸುನಂದಾ ಕಲ್ಬುರ್ಗಿ. ನವಾಜ್. ಲೋಹಿತ್.ಮನಮೋಹನ್ ರೈ. ಶಶಿಕುಮಾರ್. ಮಲ್ಲಿಕ್. ಜೋತೆಗೆ ತೆಲುಗಿನ ಹಿರಿಯ ನಟ ಸುಮನ್ ತಲ್ವಾರ್. ತಮಿಳಿನ ಸಾಯಿದಿನ ಮುಖ್ಯ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.ಅರವತ್ತಕ್ಕೂ ಹೆಚ್ಚಿನ ದೊಡ್ಡ ತಾರಾಗಣ ಚಿತ್ರದಲ್ಲಿ ಅಭಿನಯಿಸಿದ್ದಾರೆ.
ಸಂಗೀತ ನಿರ್ದೇಶನ ಆಕಾಶ ಪರ್ವ. ಛಾಯಾಗ್ರಹಣ ಕಿರಣ್ ಕುಮಾರ್. ಸಂಕಲನ ವೆಂಕಿ ಯು ಡಿ ವಿ. ಡಿ ಟಿ ಎಸ್. & ಸೌಂಡ್ ಎಫೆಕ್ಟ್ಸ್ ನಂದು ಜೆ. (ಕೆ ಜಿ ಎಫ್.) ಡಿ ಐ ಕಿಶೋರ್ ಅಕ್ಕನ್ನ. ಕಲಾ ನಿರ್ದೇಶನ ಪ್ರಭು ಬಡಿಗೇರ್. ಪತ್ರಿಕಾ ಸಂಪರ್ಕ ಆರ್ ಚಂದ್ರ ಶೇಖರ್. ಡಾ. ಪ್ರಭು ಗಂಜಿಹಾಳ್. ಡಾ. ವೀರೇಶ್ ಹಂಡಿಗಿ , ಪ್ರಚಾರ ಕಲೆ ಚೇತು ಡಿಜೈನ್ ಅವರದಿದೆೆ. ಕಲ್ಯಾಣ ಕರ್ನಾಟಕದ ಪ್ರತಿಭೆ ಕೊಪ್ಪಳದ ಕಿನ್ನಾಳರಾಜ್ ಚಿತ್ರಕತೆ. ಸಂಭಾಷಣೆ. ಹಾಡುಗಳನ್ನ ಬರೆದು ಚಿತ್ರ ನಿರ್ದೇಶನ ಮಾಡಿದ್ದಾರೆ. ನಿರ್ಮಾಪಕ ಕೆ ಎಂ ನಂಜುAಡೇಶ್ವರ ಅವರು ಕಥೆ ಬರೆದು ಶ್ರೀ ಚಕ್ರ ಫಿಲಂಸ್ ಲಾಂಚನದಡಿ ಚಿತ್ರ ನಿರ್ಮಿಸಿದ್ದಾರೆ. ಚಿತ್ರವನ್ನು ರಮೇಶ್ ಬಾಬು ಲಿಖಿತ ಫಿಲಂಮ್ಸ್ ಮೂಲಕ ವಿತರಣೆ ಮಾಡಿದ್ದಾರೆ.

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

17 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

17 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

17 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

17 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

18 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

18 hours ago