ಕಲ್ಯಾಣಸಿರಿ ವಿಶೇಷ

ಜೈ ಹಿಂದ್ ಭಾರ್ಗವ” ಗೆ ಭರದಿಂದ ಚಿತ್ರೀಕರಣ

Shooting in full swing for “Jai Hind Bhargava”


ಬೆಂಗಳೂರು : ಮಾಯಮ್ಮ ಸಿನಿ ಕ್ರಿಯೇಶನ್ಸ್ ಬೆಂಗಳೂರು ಅರ್ಪಿಸುವ “ಜೈ ಹಿಂದ್ ಭಾರ್ಗವ” ಕನ್ನಡ ಚಲನಚಿತ್ರ ಕಳೆದೊಂದು ವಾರದಿಂದ ಸದ್ದಿಲ್ಲದೆ ಭರದಿಂದ ಚಿತ್ರೀಕರಣ ನಡೆಸಿದೆ ಚಿತ್ರತಂಡ.
ಭಾರತದ ಜಮ್ಮು-ಕಾಶ್ಮೀರದ ಪಹಲ್ಗಾಮ್ ದಾಳಿ ಮತ್ತು ಆಪರೇಶನ್ ಸಿಂಧೂರದ ಕಥಾ ವಸ್ತು ಹೊಂದಿದ್ದು, ಸತತ ಚಿತ್ರೀಕರಣ ನಡೆಸಿದ್ದೇವೆ. ಚಿತ್ರದಲ್ಲಿ ಹಾಡುಗಳಿಲ್ಲ. ಬೆಂಗಳೂರು,ಚಿಕ್ಕಬಳ್ಳಾಪೂರ, ಮೈಸೂರು, ಡೊಡ್ಡಬಳ್ಳಾಪೂರ,ಘಾಟಿ ಸುಬ್ರಮಣ್ಯ ಮೊದಲಾದ ಕಡೆ ಚಿತ್ರೀಕರಣ ನಡೆಸಲಿದೆ ಎಂದು ನಿರ್ದೇಶಕ ಎನ್.ಟಿ.ಜಯರಾಮ್ ತಿಳಿಸಿದ್ದಾರೆ. ಈ ಚಿತ್ರದ ತಾರಾಗಣದಲ್ಲಿ ಮಾಸ್ಟರ್ ಚಿನ್ಮಯ್, ಮಾಸ್ಟರ್ ನಿಶ್ಚಲ್, ಕುಮಾರಿ ಪೂರ್ವಿಕ, ಚಲನಚಿತ್ರ ನಿರ್ದೇಶಕರಾದ ವಸಂತ್‌ಕುಮಾರ್, ರೋಹಿಣಿ ಮೈಸೂರ್, ಯಶೋದಮ್ಮ ,ಮನು ,ರವಿ , ಸುಪ್ರೀತ್ , ಮಂಜುರ್, ಗೀತಾನಂದಕುಮಾರ್ ಹಾಗೂ ವಿಶೇಷ ಸೈನ್ಯಾಧಿಕಾರಿ ಪಾತ್ರದಲ್ಲಿ ಚಲನಚಿತ್ರ ನಟ-ನಿರ್ದೇಶಕರಾದ ಹರಿಹರನ್.ಬಿ.ಪಿ ಅವರು ನಟಿಸುತ್ತಿದ್ದಾರೆ. ಛಾಯಾಗ್ರಹಣ ಭುವನ್ ರೆಡ್ಡಿ ,ವರ್ಣಾಲಂಕಾರ ಕಾಂತರಾಜು, ಸಂಕಲನ ಮುತ್ತುರಾಜ್ ಟಿ , ಸಂಗೀತ ಶಿವಸತ್ಯ , ಪತ್ರಿಕಾ ಸಂಪರ್ಕ ಕಾರ್ತಿಕ್, ಡಾ.ಪ್ರಭು ಗಂಜಿಹಾಳ, ಡಾ.ವೀರೇಶ ಹಂಡಿಗಿ , ನಿರ್ಮಾಣ ನಿರ್ವಹಣೆ ಜವಾಬ್ದಾರಿ ಬೆಳ್ಳೂ ರಾಜು , ಸಹ ನಿರ್ದೇಶನ ಎಸ್ ಶ್ರೀನಿವಾಸ್ ಅವರದಿದೆ. ಈ ಚಿತ್ರಕ್ಕೆ ಕಥೆ-ಚಿತ್ರಕಥೆ-ಸಂಭಾಷಣೆಯನ್ನು ಬರೆದು ಎನ್.ಟಿ. ಜಯರಾಮ್ ರೆಡ್ಡಿ ನಿರ್ದೇಶನದ ಜವಾಬ್ದಾರಿಯನ್ನೂ ಹೊತ್ತಿದ್ದಾರೆ. ನಿರ್ಮಾಪಕರು ಕುಮಾರಿ ತನ್ಮಯ್ ಎನ್ ಆಗಿದ್ದಾರೆ. ಒಂದೇ ಹಂತದಲ್ಲಿ ಚಿತ್ರೀಕರಣ ನಡೆಸಿ ನವಂಬರ್‌ನಲ್ಲಿ ಚಿತ್ರ ಬಿಡುಗಡೆ ಮಾಡುವ ಆಲೋಚನೆ ಚಿತ್ರತಂಡದ್ದಾಗಿದೆ.

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

9 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

9 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

9 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

9 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

9 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

9 hours ago