Breaking News

ಅಪರಿಚಿತ ವ್ಯಕ್ತಿಯ ಶವದ ವಾರಸುದಾರರ ಪತ್ತೆಗೆ ಮನವಿ

Appeal to find heirs of unidentified body

ಕೊಪ್ಪಳ ಆಗಸ್ಟ್ 25 (ಕರ್ನಾಟಕ ವಾರ್ತೆ): ಹೊಂಬಳ-ಗದಗ ರೈಲ್ವೇ ನಿಲ್ದಾಣಗಳ ಮದ್ಯ 2025ರ ಆಗಸ್ಟ್ 21 ರಂದು ಸುಮಾರು 40 ರಿಂದ 45 ವರ್ಷದ ಅಪರಿಚಿತ ವ್ಯಕ್ತಿ ಯಾವುದೋ ರೈಲುಗಾಡಿಯ ಮುಂದೆ ಬಿದ್ದು ಮೃತಪಟ್ಟಿದ್ದು, ವ್ಯಕ್ತಿಯ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿರುವುದಿಲ್ಲ. ಈ ಬಗ್ಗೆ ಗದಗ ರೈಲ್ವೇ ಪೊಲೀಸ್ ಠಾಣೆಯ ಯುಡಿಆರ್ ನಂ: 36/2025 ಕಲಂ: 194 ಬಿ.ಎನ್.ಎಸ್.ಎಸ್. ಅಡಿ ಪ್ರಕರಣ ದಾಖಲಾಗಿದೆ.
ಮೃತ ವ್ಯಕ್ತಿಯ ಚಹರೆ:
ಮೃತ ವ್ಯಕ್ತಿಯು ಅಗಲವಾದ ಮುಖ, ಅಗಲವಾದ ಮೂಗು ಮತ್ತು ಹಣೆ, ಗೋಧಿಗೆಂಪು ಮೈಬಣ್ಣ, ಸಾಧಾರಣ ಮೈಕಟ್ಟು, ಸುಮಾರು 5.3 ಅಡಿ ಎತ್ತರ, ತಲೆಯಲ್ಲಿ ಸುಮಾರು 1 ಇಂಚು ಕಪ್ಪು ಕೂದಲುಗಳಿದ್ದು, ಸುಮಾರು 1/2 ಇಂಚು ಕಪ್ಪು ಕುರಚಲು ದಾಡಿ-ಮೀಸೆ ಇರುತ್ತವೆ. ಮೃತನ ಮೈಮೇಲೆ ಒಂದು ನೀಲಿ ಕಲರಿನ ಆಫ್ ಟಿ-ಶರ್ಟ್, ಒಂದು ಕೆಂಪು ಕಲರಿನ ಫುಲ್ ಶರ್ಟ್, ಒಂದು ಬೂದು ಕಲರಿನ ಬರ್ಮುಡಾ ಧರಿಸಿರುತ್ತಾರೆ.
ಮೇಲ್ಕಂಡ ಚಹರೆ ಪಟ್ಟಿಗೆ ಹೋಲಿಕೆಯಾಗುವಂತಹ ವ್ಯಕ್ತಿ ಕಾಣೆಯಾಗಿದ್ದಲ್ಲಿ, ಸಂಬAಧಿಕರು ಹಾಗೂ ವಾರಸುದಾರರು ಕೂಡಲೇ ಹತ್ತಿರದ ಪೊಲೀಸ್ ಠಾಣೆಗೆ ಅಥವಾ ಗದಗ ರೈಲ್ವೇ ಪೊಲೀಸ್ ಠಾಣೆ ದೂ.ಸಂ: 08372-278744, ಮೊ.ಸಂ: 9480802128, ಇ-ಮೇಲ್:  gadagrly@ksp.gov.in     ಅಥವಾ ರೈಲ್ವೇ ಪೊಲೀಸ್ ಕಂಟ್ರೋಲ್ ರೂಂ: 080-22871291 ಗೆ ಸಂಪರ್ಕಿಸಿ ಮಾಹಿತಿ ನೀಡುವಂತೆ ಗದಗ ರೈಲ್ವೇ ಪೊಲೀಸ್ ಠಾಣೆಯ ಅಧಿಕಾರಿಗಳು ಪ್ರಕಟಣೆಯಲ್ಲಿ ಕೋರಿದ್ದಾರೆ.

About Mallikarjun

Check Also

screenshot 2025 12 13 08 43 24 46 6012fa4d4ddec268fc5c7112cbb265e7.jpg

ಆತ್ಮವಿಶ್ವಾಸ ವಿದ್ದಲ್ಲಿ ಪ್ರತಿಭೆ ಅನಾವರಣ—ಡಾ! ಮಂಜುನಾಥ ಕುಕನೂರ

ಆತ್ಮವಿಶ್ವಾಸ ವಿದ್ದಲ್ಲಿ ಪ್ರತಿಭೆ ಅನಾವರಣ—ಡಾ! ಮಂಜುನಾಥ ಕುಕನೂರ Unveiling talent in self-confidence—Dr. Manjunatha Kukanoor ಯಲಬುರ್ಗಾ—ಪ್ರತಿಭೆಗೆ ಬಡತನ ಹಾಗೂ …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.