Breaking News

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ: ವಿವಿಧ ಸೌಲಭ್ಯಗಳ ಕುರಿತು ಪ್ರಕಟಣೆ

Backward Classes Welfare Department: Announcement on various facilities

ಕೊಪ್ಪಳ ಆಗಸ್ಟ್ 25 (ಕರ್ನಾಟಕ ವಾರ್ತೆ): ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಅಲೆಮಾರಿ/ಅರೆಅಲೆಮಾರಿ ಜನಾಂಗದವರಿಗೆ ಸರ್ಕಾರದಿಂದ ವಿವಿಧ ಸೌಲಭ್ಯಗಳನ್ನು ನೀಡಲಾಗುತ್ತಿದ್ದು, ಅರ್ಹ ಫಲಾನುಭವಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ತಿಳಿಸಿದ್ದಾರೆ.
ಇಲಾಖೆಯಿಂದ ಮೆಟ್ರಿಕ್ ಪೂರ್ವ ವಿದ್ಯಾರ್ಥಿಗಳಿಗೆ ವಿಶೇಷ ಪ್ರೋತ್ಸಾಹಧನ ಯೋಜನೆಯಡಿ ಅಲೆಮಾರಿ/ಅಲೆಮಾರಿ ಪಂಗಡಕ್ಕೆ ಸೇರಿದ ವಿದ್ಯಾರ್ಥಿಗಳ ಪ್ರಾಥಮಿಕ, ಮಾಧ್ಯಮಿಕ ಹಾಗೂ ಪ್ರೌಢಶಿಕ್ಷಣಕ್ಕೆ ಆರ್ಥಿಕ ನೆರವು ನೀಡಲು, ಸರ್ಕಾರಿ ಅಥವಾ ಸರ್ಕಾರದಿಂದ ಮಾನ್ಯತೆ ಪಡೆದ ಖಾಸಗಿ ಶಿಕ್ಷಣ ಸಂಸ್ಥೆಯಲ್ಲಿ ವ್ಯಾಸಂಗ ಮಾಡುವ 1 ರಿಂದ 8ನೇ ತರಗತಿ ವಿದ್ಯಾರ್ಥಿಗಳಿಗೆ ಮಾಹೆಯಾಣ ರೂ.200 ರಂತೆ 10 ತಿಂಗಳ ಅವಧಿಗೆ ರೂ.2000/- ಗಳನ್ನು ಹಾಗೂ 9 ರಿಂದ 10 ನೇ ತರಗತಿ ವಿದ್ಯಾರ್ಥಿಗಳಿಗೆ ಮಾಹೆಯಾನ ರೂ.400 ರಂತೆ 10 ತಿಂಗಳ ಅವಧಿಗೆ ರೂ.4000/- ಗಳ ಪ್ರೋತ್ಸಾಹಧನ ಮಂಜೂರು ಮಾಡಲಾಗುತ್ತದೆ.
ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ಅರ್ಹತಾ ವಿದ್ಯಾರ್ಥಿ ವೇತನ ಯೋಜನೆಯಡಿ ಅಲೆಮಾರಿ/ಅಲೆಮಾರಿ ಪಂಗಡಕ್ಕೆ ಸೇರಿದ ಮೆಟ್ರಿಕ್ ನಂತರದ ಶಿಕ್ಷಣ ಸಂಸ್ಥೆಗಳಲ್ಲಿ ವ್ಯಾಸಂಗ ಮಾಡುವ ಕಾಲೇಜು ವಿದ್ಯಾರ್ಥಿಗಳಿಗೆ ಗ್ರೂಪ್-1 ರಲ್ಲಿ ಬರುವ ಪದವಿ ಮತ್ತು ಸ್ನಾತಕೋತ್ತರ ಪದವಿ ಮಟ್ಟದ ವೃತ್ತಿಪರ ಕೋರ್ಸುಗಳಿಗೆ ವಾರ್ಷಿಕ ರೂ.20,000/-, ಗ್ರೂಪ್-2 ರಲ್ಲಿ ಬರುವ ಪದವಿ ಡಿಪ್ಲೋಮಾ, ಪ್ರಮಾಣ ಪತ್ರಕ್ಕೆ ಕಾರಣವಾಗುವ ಇತರೆ ವೃತ್ತಿಪರ ಕೋರ್ಸುಗಳಿಗೆ ವಾರ್ಷಿಕ ರೂ.13,000/-, ಗ್ರೂಪ್-3 ರಲ್ಲಿ ಬರುವ ಗ್ರೂಪ್-1 ಮತ್ತು ಗ್ರೂಪ್-2 ರಲ್ಲಿ ಒಳಗೊಳ್ಳದ ಪದವಿ ಮತ್ತು ಸ್ನಾತಕೋತ್ತರ ಪದವಿ ಕೋರ್ಸುಗಳಿಗೆ ವಾರ್ಷಿಕ ರೂ.8000/- ಹಾಗೂ ಗ್ರೂಪ್-4 ರಲ್ಲಿ ಬರುವ ಎಲ್ಲಾ ಮೆಟ್ರಿಕ್ಯೂಲೇಷನ್ ನಂತರದ (10ನೇ ತರಗತಿ ನಂತರದ ಕೋರ್ಸುಗಳು) ಕೋರ್ಸುಗಳಿಗೆ ರೂ.5000/- ಗಳನ್ನು ಅರ್ಹತಾ ವಿದ್ಯಾರ್ಥಿ ವೇತನವಾಗಿ ನೀಡಲಾಗುತ್ತದೆ.
ಆಶ್ರಮ ಶಾಲೆಗಳ ನಿರ್ವಹಣೆ ಕಾರ್ಯಕ್ರಮದಡಿ ಅಲೆಮಾರಿ/ಅಲೆಮಾರಿ ಜನಾಂಗದವರ ಕುಟುಂಬಕ್ಕೆ ಸೇರಿದ ಮಕ್ಕಳ ಪ್ರಾಥಮಿಕ ಶಿಕ್ಷಣಕ್ಕೆ ನೆರವು ಹಾಗೂ ಉತ್ತೇಜನ ನೀಡುವ ದೃಷ್ಠಿಯಿಂದ 125 ಸಂಖ್ಯಾಬಲದ ಶಾಲೆಯನ್ನು ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲ್ಲೂಕಿನ ತಾವರಗೇರಾ ಗ್ರಾಮದಲ್ಲಿ ನಿರ್ವಹಣೆ ಮಾಡಲಾಗುತ್ತಿದೆ. ಈ ಆಶ್ರಮ ಶಾಲೆಗಳಲ್ಲಿ 1 ರಿಂದ 5 ನೇ ತರಗತಿಯವರೆಗೆ ಊಟ ಮತ್ತು ವಸತಿ ಸೌಲಭ್ಯವನ್ನು ಕಲ್ಪಿಸಿ, ಹತ್ತಿರದಲ್ಲಿ ಸಕಾರಿ ಶಾಲೆ ಇಲ್ಲದೇ ಇದ್ದಲ್ಲಿ, ಶೈಕ್ಷಣಿಕ ಸೌಲಭ್ಯವನ್ನು ಕೂಡಾ ಒದಗಿಸಲಾಗುತ್ತದೆ.
ಅಲೆಮಾರಿ/ಅರೆಅಲೆಮಾರಿ ಮೂಲಭೂತ ಸೌಕರ್ಯಗಳು-ಕಾಂಕ್ರೀಟ್ ರಸ್ತೆ ಮತ್ತು ಚರಂಡಿ ಕಾರ್ಯಕ್ರಮಗಳಡಿ ಅಲೆಮಾರಿ/ಅರೆಅಲೆಮಾರಿ ಜನಾಂಗದವರು ಹೆಚ್ಚಾಗಿ ವಾಸಿಸುವ ಕಾಲೋನಿಗಳಲ್ಲಿ ಹಾಗೂ ಹೊಸದಾಗಿ ನಿರ್ಮಾಣ ಮಾಡಿದ ಬಡಾವಣೆಗಳಲ್ಲಿ ಕಾಂಕ್ರಿಟ್ ರಸ್ತೆ ಮತ್ತು ಚರಂಡಿ ನಿರ್ಮಾಣವನ್ನು ಮಾಡಿ ನಾಗರೀಕ ಸೌಲಭ್ಯವನ್ನು ಒದಗಿಸಲಾಗುತ್ತದೆ.
ವಸತಿ ಯೋಜನೆಯಡಿ ಅಲೆಮಾರಿ/ಅರೆಅಲೆಮಾರಿ ಜನಾಂಗದ ವಸತಿ ರಹಿತರಿಗೆ ಅತಿ ಅಗತ್ಯ ಮೂಲಭೂತ ಸೌಕರ್ಯವಾದ ವಸತಿ ಸೌಲಭ್ಯವನ್ನು ಒದಗಿಸಲಾಗುವುದು. ನಿರ್ದಿಷ್ಟ ನೆಲೆ ಇಲ್ಲದೆ ಒಂದು ಪ್ರದೇಶದಿಂದ ಇನ್ನೊಂದು ಪ್ರದೇಶಕ್ಕೆ ವಲಸೆ ಹೋಗುವ ಕಾರಣ, ಶೈಕ್ಷಣಿಕ ಮತ್ತು ಆರ್ಥಿಕವಾಗಿ ಈ ಜನಾಂಗವು ಅತ್ಯಂತ ಹಿಂದುಳಿದಿರುವ ಕಾರಣ ವಸತಿ ಸೌಲಭ್ಯವನ್ನು ಕಲ್ಪಿಸಿ, ಒಂದು ಸ್ಥಳದಲ್ಲಿ ನೆಲೆ ನಿಲ್ಲಲು ಅವಕಾಶವನ್ನು ನೀಡುವುದು ಈ ಕಾರ್ಯಕ್ರಮದ ಉದ್ದೇಶವಾಗಿರುತ್ತದೆ.
ಡಿ.ದೇವರಾಜ ಅರಸು ಅಲೆಮಾರಿ/ಅರೆ ಅಲೆಮಾರಿ ಜನಾಂಗದ ವಸತಿ ಶಾಲೆ ಕಾರ್ಯಕ್ರಮದ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲ್ಲೂಕಿನ ಕಾರಟಗಿಯಲ್ಲಿ ಡಿ.ದೇವರಾಜ ಅರಸು ಅಲೆಮಾರಿ/ಅರೆ ಅಲೆಮಾರಿ ಜನಾಂಗದ ವಿದ್ಯಾರ್ಥಿಗಳಿಗೆ 2025-26 ನೇ ಸಾಲಿಗೆ ಶೈಕ್ಷಣಿಕ ವರ್ಷದಿಂದ ವಸತಿ ಶಾಲೆ ಪ್ರಾರಂಭಿಸುತ್ತಿದ್ದು, ಈ ವಸತಿ ಶಾಲೆಯನ್ನು ಶೇ.100 ರಷ್ಟು ಅಲೆಮಾರಿ/ಅರೆ ಅಲೆಮಾರಿ ಜನಾಂಗದ ವಿದ್ಯಾರ್ಥಿಗಳಿಗೆ ಮೀಸಲಿರಿಸಿ, 6ನೇ ತರಗತಿಗೆ ಪ್ರಸಕ್ತ ಸಾಲಿಗೆ ಒಟ್ಟು 60 ವಿದ್ಯಾರ್ಥಿಗಳಿಗೆ ಪ್ರವೇಶ ಕಲ್ಪಿಸಲಾಗುತ್ತಿದೆ.
ಈ ಎಲ್ಲಾ ಸೌಲಭ್ಯಗಳ ಕುರಿತ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಕೊಪ್ಪಳ ದೂ.08539-221606 ಹಾಗೂ ತಾಲ್ಲೂಕಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಕೊಪ್ಪಳ, ಕುಷ್ಟಗಿ, ಗಂಗಾವತಿ, ಯಲಬುರ್ಗಾ ಇವರನ್ನು ಸಂಪರ್ಕಿಸಬಹುದು ಎಂದು ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

About Mallikarjun

Check Also

screenshot 2025 12 13 08 43 24 46 6012fa4d4ddec268fc5c7112cbb265e7.jpg

ಆತ್ಮವಿಶ್ವಾಸ ವಿದ್ದಲ್ಲಿ ಪ್ರತಿಭೆ ಅನಾವರಣ—ಡಾ! ಮಂಜುನಾಥ ಕುಕನೂರ

ಆತ್ಮವಿಶ್ವಾಸ ವಿದ್ದಲ್ಲಿ ಪ್ರತಿಭೆ ಅನಾವರಣ—ಡಾ! ಮಂಜುನಾಥ ಕುಕನೂರ Unveiling talent in self-confidence—Dr. Manjunatha Kukanoor ಯಲಬುರ್ಗಾ—ಪ್ರತಿಭೆಗೆ ಬಡತನ ಹಾಗೂ …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.