ಯುವಸಮೂಹಕ್ಕೆಬೇಕಾಗಿರುವುದು ನಿಜವಾದ ದಿಕ್ಕು: ದೊಡ್ಡ ಕನಸು ಕಾಣುವ ಧೈರ್ಯ: ಭಾವಿಕಾ ವಾಧ್ವಾನಿ

What the youth needs is true direction: the courage to dream big: Bhavika Wadhwani
 


ಬೆಂಗಳೂರು, ಆ.25; ದೇಶದ ಯುವ ಸಮೂಹ ನೈಜ ಪರಿವರ್ತನೆಕಾರರು. ಅವರಿಗೆ ಬೇಕಾಗಿರುವುದು ಸರಿಯಾದ ದಿಕ್ಕು, ಅವಕಾಶಗಳು ಮತ್ತು ದೊಡ್ಡ ಕನಸು ಕಾಣುವ ಧೈರ್ಯ. ಇಂದೇ ನಾವು ವಿದ್ಯಾರ್ಥಿಗಳನ್ನು ಸಶಕ್ತಗೊಳಿಸಿದರೆ ನಾಳೆಯೇ ಉದ್ಯಮ ಸ್ಥಾಪಿಸಬಹುದು ಎಂದು ಬಿ.ಎ.ಎಲ್ ಕಾರ್ಪೋರೇಟ್ ಸರ್ವೀಸ್ ಲಿಮಿಟೆಡ್ ನ ಸ್ಥಾಪಕಿ ಮತ್ತು ವ್ಯವಸ್ಥಾಪಕ ನಿರ್ದೇಶಕರಾದ ಭಾವಿಕಾ ವಾಧ್ವಾನಿ ಹೇಳಿದ್ದಾರೆ.
ದೇಶದ ಉದಯೋನ್ಮುಖ 40 ಉದ್ಯಮಿಗಳಲ್ಲಿ ಒಬ್ಬರಾಗಿರುವ ಅವರು, ಹಲವು ಯಶಸ್ವಿ ಸಂಸ್ಥೆಗಳನ್ನು ನಿರ್ಮಿಸಿದ್ದಾರೆ. ಕ್ರಿಸ್ತು ಜಯಂತಿ ಕಾಲೇಜಿನ ಸಭಾಂಗಣದಲ್ಲಿ ನೂರಾರು ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದ ಅವರು, ಉದ್ಯಮಶೀಲ ಪ್ರಯಾಣದಲ್ಲಿ ಏಳು ಬೀಳು ಸಹಜ. ಹೊಸತನ, ಸಹನೆ ಹಾಗೂ ಸೃಜನಶೀಲತೆಯನ್ನು ಅಳವಡಿಸಿಕೊಂಡರೆ ಯಶಸ್ಸು ಕಟ್ಟಿಟ್ಟ ಬುತ್ತಿ ಎಂದರು.
ತಮ್ಮ ಹೆಸರಿನಲ್ಲಿ ವಾರ್ಷಿಕ ಪ್ರಶಸ್ತಿಗಳನ್ನು ಪ್ರಾರಂಭಿಸುವುದಾಗಿ ಘೋಷಿಸಿದರು. “ಭಾವಿಕಾ ವಾಧ್ವಾನಿ ಬಿಸಿನೆಸ್ ಎಕ್ಸಲೆನ್ಸ್ ಅವಾರ್ಡ್ಸ್” ಮೂಲಕ ವಿದ್ಯಾರ್ಥಿಗಳಿಂದ ಬಂದ ಅತ್ಯುತ್ತಮ ವ್ಯವಹಾರ ಆಲೋಚನೆಗಳನ್ನು ಗುರುತಿಸಿ ಗೌರವಿಸಲಾಗುವುದು. ವಿಜೇತರಿಗೆ ತಮ್ಮ ವ್ಯವಹಾರ ಆರಂಭಿಸಲು ಮಾರ್ಗದರ್ಶನ ಹಾಗೂ ಸಾಧ್ಯವಿರುವ ಹೂಡಿಕೆ ಪಡೆಯಲು ನೆರವಾಗುತ್ತೇನೆ. ಜೊತೆಗೆ ವಿಶೇಷ ಪ್ರೋತ್ಸಾಹ ಸೂಚಕವಾಗಿ, 200 ವಿದ್ಯಾರ್ಥಿಗಳಿಗೆ ಒಂದು ವರ್ಷದ ಉಚಿತ ವ್ಯವಹಾರ ಸಲಹೆ ನೀಡುವುದಾಗಿ ಪ್ರಕಟಿಸಿದರು.
ಈ ಯೋಜನೆ ಹೊಸ ಆಲೋಚನೆಗಳನ್ನು ಬೆಳೆಸಲು ವಿದ್ಯಾರ್ಥಿಗಳು ತಮ್ಮ ಕಲ್ಪನೆಗಳನ್ನು ಶಾಶ್ವತ ಉದ್ಯಮಗಳಾಗಿ ಪರಿವರ್ತಿಸಲು ಸಾಧ್ಯವಾಗಲಿದೆ. ವಿದ್ಯಾರ್ಥಿಗಳು ತಮ್ಮ ಸಲಹಾ ಯೋಜನೆಗಳನ್ನು ನೇರವಾಗಿ ತಮ್ಮ ಜಾಲತಾಣದಲ್ಲಿ ನೋಂದಣಿ ಮಾಡಬಹುದು: www.bhavikawadhwani.com ಎಂದರು.

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

14 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

14 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

14 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

14 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

14 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

14 hours ago