ಕಲ್ಯಾಣಸಿರಿ ವಿಶೇಷ

ಉದ್ಯಮಶೀಲತಾ ತರಬೇತಿ: ಅರ್ಜಿ ಆಹ್ವಾನ

Entrepreneurship Training: Call for Applications

ಕೊಪ್ಪಳ ಆಗಸ್ಟ್ 26 (ಕರ್ನಾಟಕ ವಾರ್ತೆ): ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ ಮತ್ತು ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮ ಬೆಂಗಳೂರು ಇವರ ಪ್ರಾಯೋಜಕತ್ವದಲ್ಲಿ, ಕರ್ನಾಟಕ ಉದ್ಯಮಶೀಲತಾಭಿವೃದ್ಧಿ ಕೇಂದ್ರ (ಸಿಡಾಕ್) ಕೊಪ್ಪಳ ಇವರು ಸ್ವಯಂ ಉದ್ಯೋಗ ಪ್ರಾರಂಭಿಸುವ ನಿರುದ್ಯೋಗ ಯುವಕ ಯುವತಿಯರಿಗೆ ಮತ್ತು ಉದ್ಯಮ ಆಕಾಂಕ್ಷಿಗಳಿಗೆ ಹತ್ತು ದಿನಗಳ ಉದ್ಯಮಶೀಲತಾಭಿವೃದ್ಧಿ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಿದ್ದಾರೆ.
ಈ ತರಬೇತಿಯಲ್ಲಿ ಸ್ವಂತ ಉದ್ಯಮವನ್ನು ಸ್ಥಾಪಿಸಲು ಅನುಸರಿಸಬೇಕಾದ ಕ್ರಮಗಳು, ಸರ್ಕಾರದ ಸ್ವಂತ ಉದ್ಯೋಗದ ಯೋಜನೆಗಳು, ಬ್ಯಾಂಕಿನ ವ್ಯವಹಾರ, ಮಾರುಕಟ್ಟೆ ಸಮೀಕ್ಷೆ, ಯೋಜನಾ ವರದಿ ತಯಾರಿಕೆ ಹಾಗೂ ಉದ್ಯಮ ನಿರ್ವಹಣೆ, ಉದ್ಯಮಶೀಲತೆ, ಉದ್ಯಮ ಪ್ರಾರಂಭದ ಹಂತಗಳು, ಉದ್ಯಮಗಳನ್ನು ಪ್ರಾರಂಭಿಸಲು ಸರ್ಕಾರದ ಯೋಜನೆಗಳು, ಸಾಲ ಸೌಲಭ್ಯಗಳು, ಬ್ಯಾಂಕ್ ಬಗ್ಗೆ, ಜಾಹೀರಾತು ಮತ್ತು ಮಾರುಕಟ್ಟೆಯ ಕುರಿತು ನೋಂದಣಿ ಮಾಡುವ ವಿಧಾನಗಳು, ಯಶಸ್ವಿ ಉದ್ಯಮಿಗಳ ಜೊತೆ ಸಂವಾದ, ಉದ್ಯಮ ನಿರ್ವಹಣೆ ಮಾಡುವ ವಿಧಾನಗಳು ಮತ್ತು ಇತ್ಯಾದಿ ವಿಷಯಗಳ ಕುರಿತು ತರಬೇತಿ ನೀಡಲಾಗುತ್ತಿದ್ದು, ಇದಕ್ಕಾಗಿ ಕೊಪ್ಪಳ ಜಿಲ್ಲೆಯ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅಭ್ಯರ್ಥಿಗಳು 18 ವರ್ಷ ರಿಂದ 45 ವರ್ಷ ವಯಸ್ಸಿನವರಾಗಿರಬೇಕು ಹಾಗೂ ಎಸ್.ಎಸ್.ಎಲ್.ಸಿ ವಿದ್ಯಾರ್ಹತೆ ಹೊಂದಿರಬೇಕು. ಆಸಕ್ತರು ಸೆಪ್ಟೆಂಬರ್ 4 ರೊಳಗಾಗಿ ಅರ್ಜಿಯನ್ನು ಜಂಟಿ ನಿರ್ದೇಶಕರು, ಸಿಡಾಕ್, ಜಿಲ್ಲಾ ಕೈಗಾರಿಕಾ ಕೇಂದ್ರ ಕಚೇರಿ ಕೊಪ್ಪಳ ಆವರಣ, ನಗರಸಭೆ ಎದುರುಗಡೆ ಇಲ್ಲಿಗೆ ಸಲ್ಲಿಸಬೇಕು.
ಆಧಾರ್ ಕಾರ್ಡ್, ಜಾತಿ ಪ್ರಮಾಣ ಪತ್ರ, ರೇಶನ್ ಕಾರ್ಡ್ಗಳ ಝರಾಕ್ಸ್ ಪ್ರತಿಗಳು, 2 ಪಾಸ್‌ಪೋರ್ಟ್ ಫೋಟೋಗಳೊಂದಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ 6362557332/7204016012 ಈ ನಂಬರಿಗೆ ಸಂಪರ್ಕಿಸಬಹುದು ಎಂದು ಕೊಪ್ಪಳ ಸಿಡಾಕ್‌ನ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ಕೋರಿದ್ದಾರೆ.

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

18 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

18 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

18 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

18 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

18 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

18 hours ago