ಕಲ್ಯಾಣಸಿರಿ ವಿಶೇಷ

ಶ್ರೀ ಧರ್ಮಸ್ಥಳ ಸಂಸ್ಥೆಯ ಕಾರ್ಯ ಶ್ಲಾಘನೀಯ: ಪರಣ್ಣ ಮುನವಳ್ಳಿ

The work of Sri Dharmasthala Institute is commendable: Paranna Munavalli

ಗಂಗಾವತಿ: ಅನೇಕ ಮಹಿಳೆಯರಿಗೆ ಸ್ವಾವಲಂಬಿಗಳಾಗಲು ಸಾಲ ಸೌಲಭ್ಯ, ದೇವಸ್ಥಾನಗಳ ಕಟ್ಟಡಗಳಿಗೆ ಧನ ಸಹಾಯ, ಸರಕಾರಿ ಶಾಲಾ ಮಕ್ಕಳಿಗೆ ಸ್ಕಾಲರ್ ಶಿಪ್ ಸೇರಿದಂತೆ, ಆರೋಗ್ಯ ಸೇವೆ ಇತರೆ ಸಾಮಾಜಿಕ ಸೇವೆಗಳಲ್ಲಿ ತೊಡಗಿಸಿಕೊಂಡಿರುವ ಧರ್ಮಸ್ಥಳ ಶ್ರೀ ಕ್ಷೇತ್ರದ ಸೇವಾ ಕಾರ್ಯ ಶ್ಲಾಘನೀಯ ಎಂದು ಮಾಜಿ ಶಾಸಕ ಪರಣ್ಣ ಮುನವಳ್ಳಿ ಹೇಳಿದರು.
ಅವರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್ ಗಂಗಾವತಿ ಸಹಯೋಗದಲ್ಲಿ ಸಮೀಪದ ವಡ್ಡರಹಟ್ಟಿ ಜಿ ವಿ ಎಸ್ ಗಾರ್ಡನ್‌ನಲ್ಲಿ ೧೯೭೧ನೇ ಮಧ್ಯವರ್ಜನ ಶಿಬಿರದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು.
ಮದ್ಯ ಸೇವನೆ ಸಾಮಾಜಿಕ ಪಿಡುಗುಗಳಲ್ಲೊಂದು ಅನೇಕರು ವ್ಯಸನಿಗಳಾಗಿ ಕುಟುಂಬಕ್ಕೆ ಸಮಸ್ಯೆಯಾಗಿ ಕಾಡುತ್ತಿದ್ದಾರೆ. ಕುಟುಂಬಕ್ಕೆ ಶಕ್ತಿಯಾಗುವ ಯಜಮಾನನೇ ದಾಸನಾದಲ್ಲಿ ಆ ಕುಟುಂಬ ಬೀದಿಗೆ ಬೀಳಲಿದೆ. ಮನೆಯಲ್ಲಿ ಅನೇಕ ಸಮಸ್ಯೆಗಳು ತಲೆದೂರಲಿವೆ. ಶ್ರೀ ಕ್ಷೇತ್ರ ಧರ್ಮಸ್ಥಳ ಸಂಸ್ಥೆ ಇಂಥ ಅಮುಲ್ಯ ಕೆಲಸ ಮಾಡುತ್ತಿರುವುದು ಸಂತಸದ ಸಂಗತಿ ಎಂದು ಗುಣಗಾನ ಮಾಡಿದರು.
ಈ ಕಾರ್ಯಕ್ರಮದಲ್ಲಿ ಅಧ್ಯಕ್ಷತೆಯನ್ನ ಮುದಿಗೌಡ ಮಾಲಿ ಪಾಟೀಲ್ ಅವರು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ *ಮಾಜಿ ವಿಧಾನ ಪರಿಷತ್ ಸದಸ್ಯರಾದ ಎಚ್ ಆರ್ ಶ್ರೀನಾಥ್ ಮಾತನಾಡಿ, ಶ್ರೀ ಕ್ಷೇತ್ರಕ್ಕೆ ಅನೇಕರು ಅಪಚಾರ ತರುವ ಯತ್ನ ಮಾಡಿದರು ಆದರೆ ಮೋಡಸರಿದಂತೆ ಎಲ್ಲವು ದೂರವಾಗಿ ಕ್ಷೇತ್ರದಲ್ಲಿ ನಡೆಯುತ್ತಿದೆ ಎನ್ನವ ಕಳಂಕಗಳು ನಿಚ್ಛಳವಾಗಿ ಪ್ರಜ್ವಲಿಸದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಯುವ ಪ್ರಮುಖರಾದ ನಟರಾಜ್ ಬಾದಾಮಿ, ನೀಲಕಂಠ ನಾಗಶೆಟ್ಟಿ, ಚನ್ನವೀರನಗೌಡ ಕೋರಿ, ಮಲ್ಲಿಕಾರ್ಜುನ್ ನೋಲ್ವಿ, ಭಾರತಿ ಕೃಷ್ಣ ಅಗಲೂರ್, ಗೋವರ್ಧನ್, ದೇವೇಂದ್ರಪ್ಪ, ನಾರಾಯಣಪ್ಪ, ನಾಗರತ್ನ, ಲಕ್ಷಿ÷್ಮ ಗಣೇಶ್, ನಿಮಿಷಾಂಬ ಹಾಗು ಲಕ್ಷ÷್ಮಮ್ಮ ಇತರರಿದ್ದರು.

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

12 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

12 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

12 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

12 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

13 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

13 hours ago