ಕಲ್ಯಾಣಸಿರಿ ವಿಶೇಷ

ಅಲೆಮಾರಿ ಸಮುದಾಯಕ್ಕೆ ಶೇ. ೧% ರಷ್ಟು ಮೀಸಲಾತಿಗೆ ಒತ್ತಾಯ: ಭಾರಧ್ವಾಜ್

Demand for 1% reservation for nomadic community: Bharadwaj

ಗಂಗಾವತಿ: ಸದಾಶಿವ ಆಯೋಗದ ಶಿಫಾರಸಿನಂತೆ ರಾಜ್ಯ ಸರ್ಕಾರವು ಒಳ ಮೀಸಲಾತಿಯನ್ನು ಜಾರಿಗೊಳಿಸಿರುವುದು ಸ್ವಾಗತಾರ್ಹ, ಆದರೆ ಅಲೆಮಾರಿ ಮತ್ತು ಅರೆ ಅಲೆಮಾರಿ ಸಮುದಾಯಗಳಿಗೆ ನಿರ್ದಿಷ್ಟ ಮೀಸಲಾತಿ ನೀಡದಿರುವುದು ಭಾರೀ ಅನ್ಯಾಯವಾಗಿದೆ. ಸರ್ಕಾರ ಅಲೆಮಾರಿ ಸಮುದಾಯಗಳಿಗೆ ಶೇ ೧ ರಷ್ಟು ಮೀಸಲಾತಿ ನೀಡಬೇಕೆಂದು ಕ್ರಾಂತಿಚಕ್ರ ಬಳಗದ ರಾಜ್ಯಾದ್ಯಕ್ಷರಾದ ಭಾರಧ್ವಾಜ್ ಪ್ರಕಟಣೆಯಲ್ಲಿ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿದ ಅವರು “ಅಲೆಮಾರಿ ಸಮುದಾಯಗಳು ನಾಡಿಗೆ ಶತಮಾನಗಳಿಂದ ಕಲೆ, ಸಂಸ್ಕೃತಿ, ಪುರಾಣಗಳ ಐತಿಹ್ಯವನ್ನು ಸಾರಿದರೂ, ಅವರ ಬದುಕು ಮಾತ್ರ ಬತ್ತಿ ಹೋಗಿದೆ. ಸರ್ಕಾರ ತಕ್ಷಣವೇ ತಿದ್ದುಪಡಿ ಮಾಡಿ ಆ ಸಮುದಾಯಕ್ಕೆ ಶೇ. ೧ ರಷ್ಟು ಮೀಸಲಾತಿ ಘೋಷಿಸಬೇಕು. ಈ ನಾಡಿಗೆ ಮತ್ತು ದೇಶಕ್ಕೆ ಅಲೆಮಾರಿ ಸಮುದಾಯಗಳು ನೀಡಿದ ಕೊಡುಗೆ ಅನನ್ಯ, ಅದನ್ನ ಯಾರು ಅಲ್ಲಗಳಿಯುವಂತಿಲ್ಲ. ನಾಡಿಗಾಗಿ ಮತ್ತು ದೇಶ ಸುಸಂಸ್ಕೃತವಾಗಿರಲು ಅಲೆಮಾರಿ ಸಮುದಾಯಗಳು ತಮ್ಮ ಬದುಕಿನ ನೆಲೆಯನ್ನೇ ಕಳೆದುಕೊಂಡಿವೆ. ಸರ್ಕಾರಗಳು ಆ ಸಮುದಾಯಗಳು ನಾಡಿಗೆ ನೀಡಿದ ಸೇವೆಯನ್ನು, ಅವರ ತ್ಯಾಗವನ್ನು ಗೌರವಿಸಲಿ. ಮೂಲ ದ್ರಾವಿಡರಾದ ಈ ಸಮುದಾಯದ ಬೆಂಬಲಕ್ಕೆ ದ್ರಾವಿಡರೆಲ್ಲರೂ ಬೆಂಬಲ ನೀಡಬೇಕು. ಸರ್ಕಾರ ಆ ಸಮುದಾಯಕ್ಕೆ ಶೇ ೧ ರಷ್ಟು ಮೀಸಲಾತಿ ಘೋಷಿಸಿ ಆದೇಶ ಹೊರಡಿಸಬೇಕೆಂದು ಕ್ರಾಂತಿಚಕ್ರ ಬಳಗ ಒತ್ತಾಯಿಸಿದೆ ಎಂದರು.

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

12 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

12 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

12 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

12 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

12 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

12 hours ago