ಶ್ರೀ ಲಲಿತಾ ಕಲಾನಿಕೇತನ ಸಂಸ್ಥೆಯ ಬೆಳ್ಳಿ ಹಬ್ಬ ಸಂಭ್ರಮಾಚರಣೆ :ನೃತ್ಯ ಮತ್ತು ಕಲಾ ಕ್ಷೇತ್ರದ 25 ಕಲಾವಿದರಿಗೆ ಪ್ರಶಸ್ತಿ ಪ್ರದಾನ

Silver Jubilee Celebrations of Sri Lalitha Kalanikethan Institute: Awards presented to 25 artists in the field of dance and art
 

ಬೆಂಗಳೂರು: ನೃತ್ಯ ಪರಂಪರೆಯಲ್ಲಿ ತನ್ನದೇ ಆದ ಹೆಸರು ಮಾಡಿರುವ ಶ್ರೀ ಲಲಿತಾ ಕಲಾನಿಕೇತನ ಸಂಸ್ಥೆಗೆ ಈಗ 25 ರ ವಸಂತದ ಸಂಭ್ರಮ. ಇದೇ ಆಗಸ್ಟ್‌ 31 ರಂದು ರವೀಂದ್ರ ಕಲಾ ಕ್ಷೇತ್ರದಲ್ಲಿ ಸಂಸ್ಥೆಯ ರಜತ ಮಹೋತ್ಸವ ಸಮಾರಂಭ ನಡೆಯಲಿದೆ.

ನೃತ್ಯ ಮತ್ತು ಕಲಾ ಕ್ಷೇತ್ರದಲ್ಲಿ ತಮ್ಮದೇ ಆದ ಅಮೂಲ್ಯ ಸಾಧನೆ ಮಾಡಿರುವ 25 ಕಲಾವಿದರಿಗೆ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಗುವುದು ಎಂದು ಶ್ರೀ ಲಲಿತ ಕಲಾ ನಿಕೇತನ ಗುರು ವಿದುಷಿ ಶ್ರೀಮತಿ ರೇಖಾ ಜಗದೀಶ್ ತಿಳಿಸಿದ್ದಾರೆ.

ಈ ಸಮಾರಂಭದಲ್ಲಿ ಗೌರವ ಅತಿಥಿಗಳಾಗಿ ಖ್ಯಾತ ಭರತನಾಟ್ಯ ಪ್ರತಿಪಾದಕರು ಮತ್ತು ಗುರು ಸಂಗೀತ ನಾಟಕ ಅಕಾಡೆಮಿ ಪ್ರಶಸ್ತಿ ಪುರಸ್ಕೃತರಾದ ಗುರು ಡಾ. ರಾಧಾ ಶ್ರೀಧರ್, ಭಾರತೀಯ ಕನ್ಸರ್ವೇಟರಿ ಆಫ್ ಪ್ಯಾರಿಸ್ ಕರ್ನಾಟಕ ಗಾಯಕ ಸಂಸ್ಥಾಪಕ- ಅಧ್ಯಕ್ಷರಾದ ವಿಧುಷಿ ಭಾವನ ಪ್ರದ್ಯುಮ್ನ ಉದ್ಘಾಟನೆ ಮಾಡಿದ್ದಾರೆ.

ನೃತ್ಯ ಮತ್ತು ಕಲಾ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಹಿರಿಯ ನೃತ್ಯ ಗುರುಗಳಾದ ಗುರು ಉಷಾ ದಾತಾರ್ , ಖ್ಯಾತ ಮೋಹಿನಿಯಾಟ್ಟಂ ಗುರುಗಳಾದ ಗುರು ಗೋಪಿಕಾ ವರ್ಮ ಅವರಿಗೆ ಲಲಿತಾಶ್ರೀ ಪ್ರಶಸ್ತಿ ನೀಡಿ ಗೌರವಿಸಲಾಗುವುದು.

ನೃತ್ಯ ಮತ್ತು ಕಲಾ ಕ್ಷೇತ್ರದಲ್ಲಿ ಸಾಧನೆ ಗೈದ ಸಂಗೀತ ನಾಟಕ ಅಕಾಡೆಮಿ ಪ್ರಶಸ್ತಿ ಪುರಸ್ಕೃತರು, ಖ್ಯಾತ ಭರತನಾಟ್ಯ ನಿಪುಣ ಮತ್ತು ಗುರುಗಳಾದ ಗುರು ಶ್ರೀ ಡಾ ಸತ್ಯನಾರಾಯಣ ರಾಜು ಅವರಿಗೆ ಕಲಾತಪಸ್ವಿ ಪ್ರಶಸ್ತಿ ನೀಡಿ ಗೌರವಿಸಲಾಗುವುದು.

ನೃತ್ಯ ಮತ್ತು ಕಲಾ ಕ್ಷೇತ್ರದಲ್ಲಿ ಸಾಧನೆ ಮಾಡಿದ 14 ಕಲಾವಿದರುಗಳಾದ ವಿದ್ವಾನ್ ಎಸ್ ಆರ್ ಶಿವಪ್ರಕಾಶ್ , ಡಾ ನಂದಿನಿ ಶಿವಪ್ರಕಾಶ್, ವಿದ್ವಾನ್ ಜಿ ಎಸ್ ನಾಗೇಶ್, ಡಾ. ಶ್ರೀರಂಜಿತಾ ನಾಗೇಶ್, ವಿದುಷಿ ನಿರ್ಮಲಾ ಜಗದೀಶ, ಡಾ. ಶೇಷಾದ್ರಿ ಅಯ್ಯಂಗಾರ್, ಡಾ ವಸಂತ ಕಿರಣ್, ಶ್ರೀಮತಿ ಉಷಾ ಬಸಪ್ಪ, ಶ್ರೀಮತಿ. ಶಾಮ ಕೃಷ್ಣ, ಶ್ರೀ ಮಿಥುನ್ ಶ್ಯಾಮ್, ವಿದ್ವಾನ್ ಸೂರ್ಯ ಎನ್ ರಾವ್, ವಿದುಷಿ ಪ್ರಥಮ ಪ್ರಸಾದ್, ವಿದುಷಿ ಸ್ಮಿತಾ ಪ್ರಕಾಶ್ ಸಿರ್ಸಿ, ವಿದುಷಿ. ಐಶ್ವರ್ಯ ನಿತ್ಯಾನಂದ ಅವರುಗಳಿಗೆ ನೃತ್ಯ ಶ್ರೀ ಪ್ರಶಸ್ತಿ ಪ್ರಧಾನ ಮಾಡಿ ಗೌರವಿಸಲಾಗುವುದು.

ಇದೇ ಸಂದರ್ಭದಲ್ಲಿ ಸಾಂಸ್ಕೃತಿಕ ಪ್ರದರ್ಶನಗಳು ನಡೆಯಲಿದ್ದು, ಪರಂಪರ ಕಲಾ ಕುಸುಮ ಪ್ರಶಸ್ತಿ ಪ್ರಧಾನ ಮಾಡಲಾಗುವುದು.

ಕಲಾವಿದರಾದ ಎಂ.ಡಿ.ಗಣೇಶ್, ಭಾವನಾ ಗಣೇಶ್ ಮತ್ತು ಬೇಬಿ ಅಮೂಲ್ಯ , ಶ್ರೀಹರಿ ಮತ್ತು ಚೇತನ ಕು. ಜಾನವಿ, ಆಚಾರ್ಯ ಪುಲಿಕೇಶಿ ಕಸ್ತೂರಿ, ಕು. ಸಮೃದ್ಧಿ ಪುಲಿಕೇಶಿ ಕಸ್ತೂರಿ ಮತ್ತು ಆರ್ ಎಸ್ ಕೇಶವ ಕಸ್ತೂರಿ, ಪಂಡಿತ್ ಶ್ರೀಮತಿ ಪ್ರಮೀಳಾ ಪುರುಷೋತ್ತಮ , ಪಂಡಿತ್ ಪುನೀತ್ ಭಾರದ್ವಾಜ್ ಮತ್ತು ಪಂಡಿತ್ ಲಲಿತ್ ಭಾರದ್ವಾಜ್ , ವಿದುಷಿ ಡಾ. ಬಿ ತನುಜಾ ರಾಜ್ ಮತ್ತು ಕು. ಸಂಜೀವಿನಿ. ಬಿ, ಸೋಮಶೇಖರ್ ಮತ್ತು ಸೌಮ್ಯ ಸೋಮಶೇಖರ್, ಡಾ. ಚೇತನ್ ಗಂಗಾತ್ಕರ್, ವಿದುಷಿ. ಚಂದ್ರಪ್ರಭ ಚೇತನ್ & ಕು. ಶ್ರೀ ಚರಿತಾ ಚೇತನ್ , ಡಾ ಮಾಲಿನಿ ರವಿಶಂಕರ್, ಚೈತ್ರ ಪ್ರವರ್ಧನ್ ಮತ್ತು ಕು. ಲಾಸ್ಯ ಪ್ರಿಯಾ, ಡಾ. ಅನುರಾಧಾ ವಿಕ್ರಾಂತ್ ಮತ್ತು ಕು. ರಿಯಾ ವಿಕ್ರಾಂತ್, ಡಾಕ್ಟರ್ ವೀಣಾ ಮೂರ್ತಿ ವಿಜಯ್ & ಗೌರಿ ಮೂರ್ತಿ ಶ್ರೀವಿದ್ಯಾ ಮೂರ್ತಿ ಮತ್ತು ವಿದುಲ ವೇಣುಗೋಪಾಲ್ ಅವರುಗಳಿಗೆ ಪರಂಪರ ಕಲಾ ಕುಸುಮ ಪ್ರಶಸ್ತಿ ಪ್ರಧಾನ ಮಾಡಲಾಗುವುದು.

ಇತಿಹಾಸದಲ್ಲಿ ಅಜರಾಮರ ಎನಿಸುವಂತೆ ಹೊಸ ಕಲಾ ಪ್ರಬೇಧವನ್ನು ಸೃಷ್ಟಿಸಿ, ಕಲಾ ಪ್ರಪಂಚದಲ್ಲಿ ತನ್ನದೇ ಛಾಪು ಮೂಡಿಸಿ ಕಲಾ ವೈಭವಕ್ಕೆ 300 ಕ್ಕೂ ಹೆಚ್ಚು ವಿಧ್ಯಾರ್ಥಿ ಬಳಗದೊಂದಿಗೆ ಶ್ರೀ ವಿಷ್ಣುವಿನ ದಶಾವತಾರ ಪ್ರಸ್ತುತ ಪಡಿಸುವ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ.

ಪರಂಪರ ಕಲಾ ಕುಸುಮ ಆಚರಣೆಯ ಭಾಗವಾಗಿ, ಶ್ರೀ ಲಲಿತ ಕಲಾ ನಿಕೇತನ ಸಂಸ್ಥೆಯ ಅಧ್ಯಕ್ಷರು ಗೊಂಬೆಮನೆ ಲಲಿತಮ್ಮ ಮತ್ತು ಗುರು ವಿದುಷಿ ರೇಖಾ ಜಗದೀಶ್ ಮತ್ತು ಅವರ ಪುತ್ರ ಜೆ. ಮನು ಅವರು ಮೇಲಿನ ಗಣ್ಯ ಕಲಾವಿದರು ಮತ್ತು ಕುಟುಂಬಗಳೊಂದಿಗೆ ಒಟ್ಟಾಗಿ ನೃತ್ಯ ಪ್ರದರ್ಶನ ನೀಡಲಿದ್ದಾರೆ. ಶ್ರೀ ಲಲಿತ ಕಲಾ ನಿಕೇತನದ ಎಲ್ಲಾ ವಿದ್ಯಾರ್ಥಿಗಳಿಗೆ ಸಂಸ್ಥೆಯೊಂದಿಗಿನ ಅವರ ಅಮೂಲ್ಯ ಸಂಬಂಧವನ್ನು ಗುರುತಿಸಿ “ಬೆಳ್ಳಿ ತಾರೆ” ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುತ್ತದೆ.

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

17 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

17 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

17 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

17 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

17 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

18 hours ago