Breaking News

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ ಕರ್ನಾಟಕ ಆಯ್ಕೆಗೆ ಅರ್ಜಿ ಆಹ್ವಾನ

Applications invited for selection for Mahatma Gandhi Seva Award Karnataka





ಕೊಪ್ಪಳ ಆಗಸ್ಟ್ 30 (ಕರ್ನಾಟಕ ವಾರ್ತೆ): ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ ಮಹಾತ್ಮಗಾಂಧೀ ಸೇವಾ ಪ್ರಶಸ್ತಿ-ಕರ್ನಾಟಕ ಗೆ ಪ್ರಸಕ್ತ ಸಾಲಿಗೆ ಅರ್ಹ ಸಾಧಕರನ್ನು ಅಥವಾ ಸಂಘ ಸಂಸ್ಥೆಗಳನ್ನು ಆಯ್ಕೆ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.
 ಸಾರ್ವಜನಿಕ ಜೀವನದಲ್ಲಿ ಮಹಾತ್ಮಗಾಂಧೀಜಿಯವರ ಆದರ್ಶಗಳನ್ನು ಅಳವಡಿಸಿಕೊಂಡು ಜೀವನ ನಡೆಸುತ್ತಿರುವ ಕನಿಷ್ಠ 60 ವರ್ಷಗಳಾಗಿರುವ ವ್ಯಕ್ತಿಗಳು ಅಥವಾ 25 ವರ್ಷಗಳು ತುಂಬಿರುವ ಸೇವಾ ಸಂಸ್ಥೆಗಳನ್ನು ಈ ಪ್ರಶಸ್ತಿಗೆ ಪರಿಗಣಿಸಲಾಗುವುದು.
 ಮಹಾತ್ಮಗಾಂಧೀಜಿಯವರು ಪ್ರಚುರುಪಡಿಸಿದ ಜನಪರ ಕಾರ್ಯಕ್ರಮಗಳಾದ “ಅಸ್ಪೃಶ್ಯತೆ ನಿವಾರಣೆ”. “ಅಹಿಂಸೆ”, “ಮಹಿಳಾ ಸಬಲೀಕರಣ”, “ಗ್ರಾಮೀಣ ನೈರ್ಮಲ್ಯ”, “ಮದ್ಯಪಾನ ವಿರೋಧಿ ನೀತಿ”, “ಖಾದಿ ಮತ್ತು ಸ್ವದೇಶಿವಸ್ತು ಬಳಕೆ”, “ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಏಳಿಗೆ”, ಈ ಕ್ಷೇತ್ರಗಳಲ್ಲಿ ಸ್ವಯಂ ಪ್ರೇರಣೆಯಿಂದ ತೊಡಗಿರುವ ವ್ಯಕ್ತಿಗಳು ಅಥವಾ ಸಂಸ್ಥೆಗಳು ಈ ಪ್ರಶಸ್ತಿಗೆ ಅರ್ಜಿ ಸಲ್ಲಿಸಬಹುದು. ಸಂಘ ಸಂಸ್ಥೆಗಳು ಅಥವಾ ವ್ಯಕ್ತಿಗಳು ಶಿಫಾರಸ್ಸನ್ನು ಕೂಡ ಮಾಡಬಹುದಾಗಿದೆ.
 ಅರ್ಜಿಗಳನ್ನು 2025 ನೇ ಸೆಪ್ಟೆಂಬರ್ 19 ರ ಒಳಗಾಗಿ ಆಯುಕ್ತರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ವಾರ್ತಾ ಸೌಧ. ನಂ. 17. ಭಗವಾನ್ ಮಹಾವೀರ ರಸ್ತೆ (ಇನ್‌ಫೆಂಟ್ರಿ ರಸ್ತೆ), ಬೆಂಗಳೂರು-560 001 ಅಥವಾ ಇ-ಮೇಲ್ ವಿಳಾಸ informationdiprawards@gmail.com ಹಾಗೂ ಖುದ್ದಾಗಿ ಇಲಾಖೆಗೆ ಕಳುಹಿಸಬಹುದಾಗಿದೆ ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

ಜಾಹೀರಾತು

About Mallikarjun

Check Also

ಸೆ. 2 ಮತ್ತು 3 ರಂದು ವಿವಿಧ ಇಲಾಖೆಗಳ ಗ್ರೂಪ್ ಸಿ ಹುದ್ದೆಗಳ ಪರೀಕ್ಷೆ: ನಿಷೇಧಾಜ್ಞೆ ಜಾರಿ

Exams for Group C posts of various departments on Sept. 2 and 3: Prohibitory order …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.