ಕಲ್ಯಾಣಸಿರಿ ವಿಶೇಷ

ಪ್ರತಿಷ್ಠಿತ ಮಾತೃಭೂಮಿ ರಾಜ್ಯ ಪ್ರಶಸ್ತಿಗೆ ಮಹ್ಮದ್ ಆಸೀಫ್ ಆಯ್ಕೆ

Mohammad Asif selected for the prestigious Mathrubhumi State Award

ಕೊಪ್ಪಳ: ಕರ್ನಾಟಕ ಕಂಡ ಅದ್ಭುತ ಮತ್ತು ರಾಷ್ಟçಮಟ್ಟದ ಖ್ಯಾತಿ ಗಳಿಸಿರುವ ಬೆಂಗಳೂರಿನ ಲಗ್ಗೆರೆಯ ಮಾತೃಭೂಮಿ ಯುವಕರ ಸಂಘ ತನ್ನ ಬೆಳ್ಳಿ ಮಹೋತ್ಸವದ ಅಂಗವಾಗಿ ಬೆಂಗಳೂರಿನಲ್ಲಿ ಹಮ್ಮಿಕೊಂಡಿರುವ ರಾಷ್ಟçಮಟ್ಡದ ಕಾರ್ಯಕ್ರಮದಲ್ಲಿ ಗಂಗಾವತಿಯ ಯುವ ನಾಯಕ, ಕಾಂಗ್ರೆಸ್ ಪಕ್ಷದ ರಾಜ್ಯ ಯುವ ಕಾರ್ಯದರ್ಶಿ ಮಹಮ್ಮದ್ ಆಸೀಫ್ ಹುಸೇನ್ ಅವರಿಗೆ ಮಾತೃಭೂಮಿ ರಾಜ್ಯ ಪ್ರಶಸ್ತಿಯನ್ನು ಸಮಾಜ ಸೇವಾ ಕ್ಷೇತ್ರದ ವಿಭಾಗದಿಂದ ಆಯ್ಕೆ ಮಾಡಲಾಗಿದೆ ಎಂದು ಸಂಘದ ಸಂಸ್ಥಾಪಕ ಅಧ್ಯಕ್ಷ ಡಾ. ಎಸ್ ಬಾಲಾಜಿ ತಿಳಿಸಿದ್ದಾರೆ.
ಮಾತೃಭೂಮಿ ಯುವಕ ಸಂಘವು ಸುಮಾರು ೩೦ ವರ್ಷಗಳಿಂದ ಸಾಂಸ್ಕöÈತಿಕ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಅದರ ಬೆಳ್ಳಿ ಹಬ್ಬದ ಅಂಗವಾಗಿ ವಿಶೇಷ ಕಾರ್ಯಗಳನ್ನು ಹಮ್ಮಿಕೊಳ್ಳಲಾಗಿದೆ. ಈ ಸಂಘವು ೨೦೦೭-೦೮ ರಲ್ಲಿ ಭಾರತ ಸರ್ಕಾರದ ಅತ್ಯುತ್ತಮ ಸಾಂಘಿಕ ಪ್ರಶಸ್ತಿಯನ್ನು, ಕರ್ನಾಟಕ ಸರ್ಕಾರದ ರಾಜ್ಯ ಯುವ ಸಾಂಘಿಕ ಪ್ರಶಸ್ತಿಯನ್ನು ಪಡೆದಿದ್ದು, ಈ ಸಂಘದ ವತಿಯಿಂದ ೩೦ ವರ್ಷಗಳ ಕಾಲ ಸಾಧಕರನ್ನು ಗುರುತಿಸಿ ಪ್ರೋತ್ಸಾಹಿಸುವ ಕಾರ್ಯ ನಡೆಯುತ್ತಿದೆ, ಈ ಸಾಲಿನಲ್ಲಿ ಬೆಳ್ಳಿ ಹಬ್ಬವಾದ್ದರಿಂದ ೩೦ನೇ ವರ್ಷದ ವಾರ್ಷಿಕೋತ್ಸವ ಹಾಗೂ ಮೂವತ್ತರ ಸಂಭ್ರಮವನ್ನು ೨೦ ಸಾಧಕರನ್ನು ೦೨ ಸಾಂಘಿಕ ಪ್ರಶಸ್ತಿ ಸೇರಿ ಒಟ್ಟು ೩೦ ಸಾಧಕರಿಗೆ ಮಾತೃಭೂಮಿ ಪ್ರಶಸ್ತಿಗಳನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ಹರ್ಷ ಅಂತರಾಷ್ಟಿçÃಯ ಶಿಕ್ಷಣ ಸಂಸ್ಥೆಯ ಸಭಾಂಗಣದಲ್ಲಿ ೧೩.೦೯.೨೦೨೫, ಶನಿವಾರ ಬೆಳಗ್ಗೆ ೧೦ ಗಂಟೆಗೆ ಪ್ರಶಸ್ತಿ ಪ್ರಧಾನ ಸಮಾರಂಭವನ್ನು ಏರ್ಪಡಿಸಲಾಗಿದೆ. ಸಮಾಜದಲ್ಲಿ ಬಡವರ ಪರ, ಯುವಜನರ ಪರ ಹಾಗೂ ಶೋಷಿಥ ಪರವಾಗಿ ಮಾಡಿದ ಅಮೂಲ್ಯ ಸೇವೆಯನ್ನು ಗುರುತಿಸಿ ಮಾತೃಭೂಮಿ ರಾಜ್ಯ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದ್ದು ಅನೇಕ ಗಣ್ಯರ, ಸ್ವಾಮೀಜಿಯವರ ಸಮ್ಮುಖದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ.

Mallikarjun

Share
Published by
Mallikarjun

Recent Posts

ತಂದೆಯ ಋಣ ತೀರಿಸಲು ..ಎಷ್ಟೇ ಜನ್ಮ ಹುಟ್ಟಿ ಬಂದರೂ ಸಾಧ್ಯವಿಲ್ಲ

ತಂದೆಯ ಋಣ ತೀರಿಸಲು ..ಎಷ್ಟೇ ಜನ್ಮ ಹುಟ್ಟಿ ಬಂದರೂ ಸಾಧ್ಯವಿಲ್ಲ No matter how many births you take,…

1 minute ago

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

19 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

20 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

20 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

20 hours ago