Breaking News

 ಅಂಜನಾದ್ರಿ ಅಭಿವೃದ್ಧಿ ಕೇವಲ ಹೇಳಿಕೆಗೆಸೀಮಿತವಾಗದಿರಲಿ-ಮಾಜಿ ಶಾಸಕ ಪರಣ್ಣ ಮುನವಳ್ಳಿ

Anjanadri development should not be limited to mere statements - Paranna Munavalli

Screenshot 2025 09 05 14 06 33 89 965bbf4d18d205f782c6b8409c5773a46276800924569587448 681x1024

Screenshot 2025 09 05 14 07 20 61 439a3fec0400f8974d35eed09a31f9145107158824845508142 782x1024

ಗಂಗಾವತಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಶ್ರೀ ಹನುಮಂತ ದೇವರು ಜನಿಸಿದ ತಾಣ, ಐತಿಹಾಸಿಕ ಧಾರ್ಮಿಕ ಪುಣ್ಯಕ್ಷೇತ್ರವಾಗಿರುವ ಅಂಜನಾದ್ರಿ ಸಮಗ್ರ ಅಭಿವೃದ್ಧಿಗೆ ಸ್ವತಃ ಮಾನ್ಯ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯರವರು ಆಸಕ್ತಿವಹಿಸಿ ಅಧಿಕಾರಿಗಳೊಂದಿಗೆ ಸಭೆ ನಡೆಸಿರುವುದು ಸ್ವಾಗತಾರ್ಹ.

ಜಾಹೀರಾತು

ಆದರೆ ಮಾನ್ಯ ಮುಖ್ಯಮಂತ್ರಿಯವರ ಸಲಹೆ-ಸೂಚನೆಗಳು ಕೇವಲ ಸಭೆಗೆ ಮಾತ್ರ ಸೀಮಿತವಾಗಬಾರದು, ಅವುಗಳು ಕಾರ್ಯಗತವಾಗಿ ಅಂಜನಾದ್ರಿ ಅಭಿವೃದ್ಧಿಗೆ ಪೂರಕವಾಗಿ ಅನುಷ್ಟಾನಕ್ಕೆ ಬರಬೇಕೆಂದು ನಾನು ಸರ್ಕಾರಕ್ಕೆ ಒತ್ತಾಹಿಸುತ್ತೇನೆ.

ಈ ಹಿಂದೆ ನಾನು ಬಿಜೆಪಿ ಸರ್ಕಾರದ ಶಾಸಕ ಇದ್ದ ಅವಧಿಯಲ್ಲಿ ಆಗಿನ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಸವರಾಜ್ ಬೊಮ್ಮಯಿಯವರು 120 ಕೋಟಿ ರೂ.ಗಳ ಅನುದಾನ ಒದಗಿಸಿ ಅದರಲ್ಲಿ 20 ಕೋಟಿ ರೂ.ಗಳ ಕೆಲಸ ಆಗಿದ್ದು ನಂತರದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬದ್ದು ಕೇವಲ ಬಜೆಟ್‌ಗೆ ಮಾತ್ರ ಸಿಮಿತವಾದ 100 ಕೋಟಿ ಅನುದಾನ ಒದಗಿಸಲಾಗಿದೆ ಎಂದು ಪತ್ರಿಕೆಯಲ್ಲಿ ಪ್ರಕಟವಾಗಿದ್ದು ಬಿಟ್ಟರೆ ನಯಾಪೈಸ ಕೆಲಸ ಆಗಿಲ್ಲ.

ಅಂಜನಾದ್ರಿ ಐತಿಹಾಸಿಕ ಪ್ರಸಿದ್ದಿ ಪಡೆದ ಕ್ಷೇತ್ರವಾಗಿರುದರಿಂದ ದಿನಾಲು ಸಾವಿರಾರು ಭಕ್ತರು ರಾಜ್ಯ ಹೊರರಾಜ್ಯದಿಂದ ಬರುತ್ತಾರೆ. ಬಂದಂತಹ ಭಕ್ತರಿಗೆ ಮೂಲಭೂತ ಸೌಕಾರ್ಯ ಒದಸುವುದು ಸರ್ಕಾರದ ಆದ್ಯ ಕರ್ತವ್ಯವಾಗಿದ್ದು, ಈಗ ಬಿಡುಗಡೆಯಾಗಿರುವ ಅನುದಾನದಲ್ಲಿಯೆ ರೈತರನ್ನು ಮನಪರಿವರ್ತಿಸಿ ಅವರ ಜಮೀನಿಗೆ ಸೂಕ್ತ ಪರಿಹಾರವನ್ನು ನೀಡಿ ಕೂಡಲೇ ಅಂಜನಾದ್ರಿಯ ಸಮಗ್ರ ಅಭಿವ್ರದ್ಧಿಗೆ ಮಾನ್ಯ ಮುಖ್ಯಮಂತ್ರಿಗಳು ಬದ್ಧತೆ ತೋರಬೇಕೆಂದು ಪತ್ರಿಕಾ ಪ್ರಕಟಣೆಯ ಮೂಲಕ ವಿನಂತಿಪೂರ್ವಕವಾಗಿ ಒತ್ತಾಯಿಸುತ್ತೇನೆ.

شتم

(

About Mallikarjun

Check Also

screenshot 2025 10 25 17 53 12 59 6012fa4d4ddec268fc5c7112cbb265e7.jpg

ಶಿವರಾತ್ರಿ ರಾಜೇಂದ್ರ ಮಹಾಸ್ವಾಮಿಗಳ ಶತೋತ್ತರ ದಶಮಾನೋತ್ಸವದ ಪೂರ್ವಭಾವಿ ಸಭೆ

Preparatory meeting for the centenary celebrations of Shivaratri Rajendra Mahaswamy. ವರದಿ: ಬಂಗಾರಪ್ಪ .ಸಿ .ಹನೂರು : …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.