ಖ್ಯಾತ ಸಾಹಿತಿ ಡಾ.ಸಿದ್ದಯ್ಯ ಪುರಾಣಿಕ್ ಟ್ರಸ್ಟ್ ರಚನೆ- ಅಧ್ಯಕ್ಷರಾಗಿ ಅಜ್ಮೀರ್ ನಂದಾಪುರ ನೇಮಕ

Renowned writer Dr. Siddaya Puranik Trust formed - Ajmer Nandapur appointed as president

ಕನಕಗಿರಿ:ಕಾವ್ಯಾನಂದ’ ಕಾವ್ಯ ನಾಮದಿಂದ ಚಿರ ಪರಿಚಿತರಾದ ಡಾ. ಸಿದ್ದಯ್ಯ ಪುರಾಣಿಕ ಅವರ ಹೆಸರಿನಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಟ್ರಸ್ಟ್ ರಚನೆ ಮಾಡಿರುವ ಸರಕಾರ, ಟ್ರಸ್ಟ್ ಗೆ ಅಧ್ಯಕ್ಷರನ್ನಾಗಿ ಗಂಗಾವತಿಯ ಸಾಹಿತಿ ಹಾಗೂ ಜೆ.ಎಸ್.ಎಸ್ ಅನುದಾನಿತ ಶಾಲೆಯ ಶಿಕ್ಷಕ ಅಜ್ಮೀರ್ ನಂದಾಪುರ್ ಅವರನ್ನು ನೇಮಕ ಮಾಡಿ ಜೊತೆಗೆ ಹನ್ನೊಂದು ಜನರನ್ನು ಸದಸ್ಯರನ್ನಾಗಿ ನೇಮಿಸಿದೆ.
ಗುರುವಾರ ಬೆಂಗಳೂರಿನಲ್ಲಿ ನಡೆದ ಸಚಿವ ಸಂಪುಟದಲ್ಲಿ ಅನುಮೋದನೆ ನೀಡಲಾಗಿದೆ. ಸ್ವತಂತ್ರ ಧೀರ ಸಿದ್ದೇಶ್ವರ ಅಂಕಿತದಲ್ಲಿ ‘ವಚನೋದ್ಯಾನ’ ಮತ್ತು ‘ವಚನ ರಾಮ’ ಎಂಬ ಮೂರು ವಚನ ಸಂಕಲನಗಳಲ್ಲಿ ಸುಮಾರು 1500 ವಚನಗಳನ್ನು ಬರೆದಿರುವ ಡಾ. ಸಿದ್ದಯ್ಯ ಪುರಾಣಿಕರು ವ್ಯಕ್ತಿ, ಸಮಾಜ, ಕುಟುಂಬ, ಸಹಬಾಳ್ವೆ, ನೈತಿಕತೆ, ವಿಜ್ಞಾನ, ವಿಚಾರ ಮುಂತಾದ ವಿಚಾರಗಳನ್ನು ವಸ್ತುವಾಗಿಸಿಕೊಂಡು ವಚನಗಳನ್ನು ಬರೆದಿದ್ದಾರೆ. ಬಹಳ ಮುಖ್ಯವಾಗಿ ಅವರ ವಚನಗಳಲ್ಲಿ ಬದುಕು, ಸಮನ್ವಯತೆಯ ದೃಷ್ಟಿಕೋನವನ್ನು ಕಾಣುತ್ತೇವೆ.
ಇವರು ಕನ್ನಡ ಸಾಹಿತ್ಯಕ್ಕೆ ಆಗಾಧವಾದ ಕೊಡುಗೆ ನೀಡಿದ ಒಬ್ಬ ಶ್ರೇಷ್ಠ ಬರಹಗಾರರು ಮಾತ್ರವಲ್ಲದೆ, ಮಾನವೀಯ ಮೌಲ್ಯವುಳ್ಳ ಐ.ಎ.ಎಸ್.‌ ಅಧಿಕಾರಿಯಾಗಿದ್ದರು. ಕನ್ನಡ, ಇಂಗ್ಲಿಷ್‌, ಹಿಂದಿ, ಸಂಸ್ಕೃತ ಹಾಗೂ ಉರ್ದು ಭಾಷೆಗಳಲ್ಲಿ ವಿದ್ವಾಂಸರಾಗಿದ್ದರು. ಇವರು ಆನೇಕ ಪ್ರತಿಷ್ಠಿತ ಪ್ರಶಸ್ತಿಗಳಿಗೆ ಪಾತ್ರರಾಗಿದ್ದಾರೆ. ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ಸೂಚನೆಯಂತೆ 23.12.2023 ರಂದು ಕೊಪ್ಪಳ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಕೊಪ್ಪಳ ಜಿಲ್ಲೆಯಲ್ಲಿ ಟ್ರಸ್ಟ್ ರಚನೆ ಮಾಡುವಂತೆ ಸರಕಾರಕ್ಕೆ ಸಲ್ಲಿಸಿದ್ದ ಪ್ರಸ್ತಾವನೆಗೆ ಸರಕಾರ ಇಂದು ಅಧಿಕೃತ ಮುದ್ರೆ ಹಾಕಿದೆ.
ಮೂಲತಃ ಕನಕಗಿರಿ ಯವಾರದ ಅಜ್ಮೀರ್ ನಂದಾಪುರ್ ಹಾಗೂ ಡಾ. ಗೀತಾ ತಂದೆ ಚಿದಾನಂದಗೌಡ ಪಾಟೀಲ್ ಈ ಇಬ್ಬರು ಸದಸ್ಯರು ಈ ಟ್ರಷ್ಟಿಗೆ ಆಯ್ಕೆಯಾಗಿರುವುದು ಹೆಮ್ಮೆಯ ವಿಚಾರ.
ಅಜ್ಮೀರ್ ನಂದಾಪುರ ಅಧ್ಯಕ್ಷರಾಗಿದ್ದು, ಟ್ರಸ್ಟ್ ಗೆ ಸದಸ್ಯರನ್ನಾಗಿ ಶಿ.ಕಾ. ಬಡಿಗೇರ, ಕೊಪ್ಪಳ, ಡಾ: ಗೀತಾ ತಂದೆ ಚಿದಾನಂದಗೌಡ ಪಾಟೀಲ್ ಕನಕಗಿರಿ, ಡಾ: ಉದಯಶಂಕರ್ ಪುರಾಣಿಕ್, ಶೈಲಜಾ ಹಿರೇಮಠ, ಗಂಗಾವತಿ, ಡಾ: ಹನುಮಂತಪ್ಪ ಚಂದಲಾಪೂರ, ಕೊಪ್ಪಳ, ಹನುಮಂತಪ್ಪ ಯಂಕಪ್ಪ ವಡ್ಡರ, ಕೊಪ್ಪಳ, ರಮೇಶ ಬನ್ನಿಕೊಪ್ಪ, ಕೊಪ್ಪಳ, ರತ್ನಮ್ಮ ಗಂಡ ರತ್ನಾಕರ್, ಪ್ರೇಮಾ ಎಸ್.ಮುದುಗಲ್ ಮತ್ತು ಸದಸ್ಯ ಕಾರ್ಯದರ್ಶಿಯನ್ನಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕೊಪ್ಪಳ ಅವರನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಎಸ್.ಗೀತಾಬಾಯಿ ಅವರು ಆದೇಶ ಮಾಡಿದ್ದಾರೆ.
ಜಿಲ್ಲೆಯ ಖ್ಯಾತ ಸಾಹಿತಿ ದಿವಂಗತ ಡಾ. ಸಿದ್ದಯ್ಯ ಪುರಾಣಿಕ ಅವರ ಹೆಸರಿನಲ್ಲಿ ಟ್ರಸ್ಟ್ ರಚನೆ ಮಾಡಿ ಅವರ ಹೆಸರನಲ್ಲಿ ಸಾಹಿತ್ಯಕ ಚಟುವಟಿಕೆ ನಡೆಸುವ ಅವಕಾಶ ಮಾಡಿರುವ ಕನ್ನಡ ಮತ್ತು ಸಂಸ್ಕೃತಿ ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ತಂಗಡಿಯವರನ್ನು ಮತ್ತು ಸರಕಾರವನ್ನು ಸಾಹಿತಿಗಳು, ಸಾಹಿತ್ಯ ಆಸಕ್ತರು, ಸ್ವಾಗತಿಸಿ ಅಭಿನಂದಿಸಿದ್ದಾರೆ. ವರದಿ ಸೋಮಶೇಖರಯ್ಯ ಸ್ವಾಮಿ ಹಿರೇಮಠ ಕನಕಗಿರಿ

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

19 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

19 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

20 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

20 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

20 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

20 hours ago