Breaking News

ತುಂಗಭದ್ರೆಯ ನೀರನ್ನು ಮುಂದಿನ ಪೀಳಿಗೆಗೆ ಶುದ್ಧವಾಗಿ ಬಿಟ್ಟುಹೋಗುವುದು ನಮ್ಮೆಲ್ಲರ ಕರ್ತವ್ಯ: ಶ್ರೀಮತಿ ಲಲಿತಾರಾಣಿ ಶ್ರೀರಂಗದೇವರಾಯಲು

It is the duty of all of us to leave the waters of Tungabhadra clean for the next generation: Smt. Lalitharani Srirangadevarayalu

Screenshot 2025 09 06 09 27 36 74 E307a3f9df9f380ebaf106e1dc980bb67187478443919708913

ಗಂಗಾವತಿ: ತುಂಗಭದ್ರಾ ನದಿಯನ್ನು ರಕ್ಷಿಸಲು ನಡೆಯುತ್ತಿರುವ ನಿರ್ಮಲ ತುಂಗಭದ್ರಾ ಅಭಿಯಾನ ದ ಮೂರನೇ ಹಂತದ ಪಾದಯಾತ್ರೆಯನ್ನು ಯಶಸ್ವಿಗೊಳಿಸಲು ರೈತರು ಮತ್ತು ಪರಿಸರ ಪ್ರೇಮಿಗಳು, ಸಾರ್ವಜನಿಕರು, ತನು-ಮನ-ಧನದಿಂದ ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ತುಂಗಭದ್ರಾ ಅಭಿಯಾನದ ರಾಯಭಾರಿಗಳಾದ ಶ್ರೀಮತಿ ಲಲಿತಾರಾಣಿ ಶ್ರೀರಂಗದೇವರಾಯಲು ಕರೆ ನೀಡಿದರು.
ಅವರು ಸೆ.೪ರಂದು ಗುರುವಾರ ರಾಷ್ಟಿçÃಯ ಸ್ವಾಭಿಮಾನಿ ಆಂದೋಲನ ನವದೆಹಲಿ ಹಾಗೂ ಪರ್ಯಾವರಣ ಟ್ರಸ್ಟ್ ಶಿವಮೊಗ್ಗ ಮತ್ತು ನಿರ್ಮಲ ತುಂಗಭದ್ರಾ ಅಭಿಯಾನ ಕೊಪ್ಪಳ ಜಿಲ್ಲಾ ಸಮಿತಿ ಸಹಯೋಗದಲ್ಲಿ ಮೂರನೇ ಹಂತದ ಪಾದಯಾತ್ರೆ ಅಂಗವಾಗಿ ಗಂಗಾವತಿ ತಾಲೂಕಿನ ಚಿಕ್ಕಜಂತಕಲ್ ಗ್ರಾಮದ ತುಂಗಭದ್ರಾ ನದಿಯ ತಟದಲ್ಲಿರುವ ಶ್ರೀ ಗಂಗಾಪರಮೇಶ್ವರಿ ದೇವಸ್ಥಾನದಲ್ಲಿ ನಡೆದ ಸಭೆಯಲ್ಲಿ ಅವರು ಮಾತನಾಡುತ್ತಿದ್ದರು. ಕಿಷ್ಕಿಂದೆ (ಗಂಗಾವತಿ) ಯಿಂದ ಮಂತ್ರಾಲಯದವರೆಗೆ ನಡೆಯಲಿರುವ ಈ ಮೂರನೇ ಹಂತದ ಪಾದಯಾತ್ರೆಯ ಮಹತ್ವದ್ದಾಗಿದೆ “ತುಂಗಭದ್ರಾ ನದಿಯ ನೀರು ಈ ಹಿಂದೆ ಸುರಕ್ಷಿತ ಮತ್ತು ಶುದ್ಧವಾಗಿತ್ತು. ಆದರೆ ಈಗ ಅದು ಆ ಸ್ಥಿತಿಯಲ್ಲಿ ಇಲ್ಲ. ಎಲ್ಲ ನಗರ ಮತ್ತು ಹಳ್ಳಿಗಳ ಕಲುಷಿತ ನೀರು ಮತ್ತು ತ್ಯಾಜ್ಯವು ತಾಯಿ ತುಂಗಭದ್ರಾ ನದಿಯ ಒಡಲಿಗೆ ಸೇರುತ್ತಿದೆ. ತಜ್ಞರ ವರದಿಯ ಪ್ರಕಾರ, ಮುಂದಿನ ನಾಲ್ಕು ವರ್ಷಗಳಲ್ಲಿ ಮಾತ್ರ ಇದರ ನೀರು ಕುಡಿಯಲು ಯೋಗ್ಯವಿರಬಹುದು. ನಂತರ ಅದು ಕೇವಲ ಕೃಷಿ ಮತ್ತು ಕಾರ್ಖಾನೆಗಳಿಗೆ ಮಾತ್ರ ಉಪಯುಕ್ತವಾಗಬಹುದು ಎನ್ನುವ ಆತಂಕಕಾರಿ ಸರ್ವೆ ನಮ್ಮನ್ನೆಲ್ಲ ನಿದ್ದೆಗೆಡಿಸಿದೆ. ಈ ಹಿಂದೆ ಸುರಕ್ಷಿತವಾಗಿದ್ದ ತುಂಗಭದ್ರೆಯ ನೀರನ್ನು ಮುಂದಿನ ಪೀಳಿಗೆಗೆ ಸುರಕ್ಷಿತವಾಗಿ ಬಿಟ್ಟುಹೋಗುವುದು ನಮ್ಮೆಲ್ಲರ ಕರ್ತವ್ಯ.” ಎಂದು ಲಲಿತ ರಾಣಿಯವರು ಹೇಳಿದರು.
ತುಂಗಭದ್ರಾ ಅಭಿಯಾನದ ಸಂಚಾಲಕರಾದ ಡಾ|| ಶಿವಕುಮಾರ್ ಮಾಲಿಪಾಟೀಲ್, ಪ್ರಭಾಕರ್ ಚಿನ್ನಪಾಟಿ, ಮಹಮ್ಮದ್ ರಫಿ, ಮಂಜುನಾಥ ಗುಡ್ಲಾನೂರ್, ಸರ್ವೇಶ ವಸ್ತçದ, ಜಗನ್ನಾಥ ಆಲಂಪಲ್ಲಿ, ವಿಷ್ಣು ಜೋಶಿ, ಅರ್ಜುನ್, ಐ.ಎಂ.ಎ ಅಧ್ಯಕ್ಷರಾದ ಡಾ|| ಎ.ಎಸ್.ಎನ್ ರಾಜು, ಶ್ರೀಕಾಂತ್, ಗವಿ, ಪತ್ರಕರ್ತರಾದ ವೆಂಕಟೇಶ್ ಕುಲಕರ್ಣಿ ಹಾಗೂ ಚಿಕ್ಕಜಂತಗಲ್ ಗ್ರಾಮ ಪಂಚಾಯತಿ ಅಧ್ಯಕ್ಷೆ ನೇತ್ರಾವತಿ, ವಿಎಸ್‌ಎಸ್‌ಎನ್ ಅಧ್ಯಕ್ಷ ವೆಂಕಣ್ಣ ಬಟಾರಿ, ಮಾಜಿ ಜಿಪಂ ಸದಸ್ಯ ಪರಶುರಾಮ್, ಸುಧೀರ್ ಕಂಪ್ಲಿ, ರೇಣುಕನಗೌಡ, ಹುಲುಗಪ್ಪ ಬಳ್ಳಾರಿ, ರಾಘವೇಂದ್ರ ಕುಲಕರ್ಣಿ, ಮಂಜುನಾಥ್, ಚಂದ್ರಶೇಖರ್, ಸುಮಂಗಲ, ಹನುಮೇಶ್ ಭಾವಿಕಟ್ಟಿ, ಭಾಷ ಹಾಗೂ ರೈತರು, ಗ್ರಾಮಸ್ಥರು ಉಪಸ್ಥಿತರಿದ್ದರು.

About Mallikarjun

Check Also

screenshot 2025 12 17 18 45 28 37 e307a3f9df9f380ebaf106e1dc980bb6.jpg

ಉದ್ಯೋಗ ಖಾತ್ರಿ ಸೇರಿ ಮಹತ್ವದ ಯೋಜನೆಗಳ ಬದಲಾವಣೆಯಿಂದ ಬಡವರಿಗೆ ಅನ್ಯಾಯ: ಎಐಸಿಸಿ ಎಸ್.ಸಿ ವಿಭಾಗದ ರಾಷ್ಟ್ರೀಯ ಸಂಯೋಜಕ ಡಾ. ಆನಂದ್ ಕುಮಾರ್

ಉದ್ಯೋಗ ಖಾತ್ರಿ ಸೇರಿ ಮಹತ್ವದ ಯೋಜನೆಗಳ ಬದಲಾವಣೆಯಿಂದ ಬಡವರಿಗೆ ಅನ್ಯಾಯ: ಎಐಸಿಸಿ ಎಸ್.ಸಿ ವಿಭಾಗದ ರಾಷ್ಟ್ರೀಯ ಸಂಯೋಜಕ ಡಾ. ಆನಂದ್ …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.