Missing person: Request for assistance in finding him/her ಕೊಪ್ಪಳ ಸೆಪ್ಟೆಂಬರ್ 06, (ಕರ್ನಾಟಕ ವಾರ್ತೆ): ಯಲಬುರ್ಗಾ ತಾಲೂಕಿನ ಕಲ್ಲೂರು ಗ್ರಾಮದ ಕಲ್ಲಪ್ಪ ದೇವಪ್ಪ ಉಪ್ಪಾರ ಎಂಬ 35 ವರ್ಷದ ವ್ಯಕ್ತಿಯು ಮಾರ್ಚ್ 12 ರಂದು ಸಂಜೆ 6 ಗಂಟೆಯ ಸುಮಾರಿಗೆ ಉಡುಪಿಗೆ ಕೂಲಿ ಕೆಲಸಕ್ಕಾಗಿ ತೆರಳಿದ ನಂತರ ವಾಪಸ್ ಮನೆಗೆ ಬಾರದೇ ಕಾಣೆಯಾಗಿದ್ದು, ಮೊಬೈಲ್ ಸಂಖ್ಯೆಯು ಸ್ವಿಚ್ಛ್ ಆಫ್ ಎಂದು ಬರುತ್ತಿದೆ. ಈ ಬಗ್ಗೆ ಯಲಬುರ್ಗಾ ಪೊಲೀಸ್ ಠಾಣೆಯಲ್ಲಿ ಗುನ್ನೆ ನಂ: 126/2025 ಕಲಂ: ಮನುಷ್ಯ ಕಾಣೆ ನೇದ್ದರ ಅಡಿಯಲ್ಲಿ ಪ್ರಕರಣದ ದಾಖಲಾಗಿದೆ.
ಕಾಣೆಯಾದ ವ್ಯಕ್ತಿಯ ಚಹರೆ:
ವ್ಯಕ್ತಿಯು 5.5 ಅಡಿ ಎತ್ತರವಿದ್ದು, ಸದೃಢ ಮೈಕಟ್ಟು, ಸಾದಗೆಂಪು ಮೈಬಣ್ಣ ಹಾಗೂ ದುಂಡು ಮುಖ ಹೊಂದಿದ್ದಾರೆ. ಕನ್ನಡ ಭಾಷೆ ಮಾತನಾಡುತ್ತಾರೆ. ಕಾಣೆಯಾದಾಗ ನೀಲಿ ಬಣ್ಣದ ಅಂಗಿ ಮತ್ತು ಕಪ್ಪು ಬಣ್ಣದ ಪ್ಯಾಂಟ್ ಧರಿಸಿದ್ದರು.
ಮೇಲ್ಕಂಡ ಚಹರೆಯ ವ್ಯಕ್ತಿಯ ಕುರಿತು ಯಾರಿಗಾದರೂ ಮಾಹಿತಿ ಇದ್ದಲ್ಲಿ ಅಥವಾ ದೊರೆತಲ್ಲಿ ಯಲಬುರ್ಗಾ ಪೊಲೀಸ್ ಠಾಣೆ ದೂರವಾಣಿ ಸಂಖ್ಯೆ: 9480803749 ಮತ್ತು 08534-220133 ಅಥವಾ ಕೊಪ್ಪಳ ಕಂಟ್ರೋಲ್ ರೂಮ್ ನಂ.08539-220222 ಗೆ ಸಂಪರ್ಕಿಸಿ ಮಾಹಿತಿ ನೀಡುವಂತೆ ಯಲಬುರ್ಗಾ ಪೊಲೀಸ್ ಠಾಣೆ ಪ್ರಕಟಣೆ ಕೋರಿದೆ. ಕಾಣೆಯಾದ ವ್ಯಕ್ತಿಯ ಕುರಿತು ಮಾಹಿತಿ ನೀಡಿದವರಿಗೆ ನಗದು ಬಹುಮಾನ ನೀಡಲಾಗುವುದು ಎಂದು ಯಲಬುರ್ಗಾ ಪೊಲೀಸ್ ಠಾಣೆ ಪ್ರಕಟಣೆ ತಿಳಿಸಿದೆ.
ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…
ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…
ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…
ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್ ನಲ್ಲಿ…
ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…
ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…