ಗಂಗಾವತಿ ನಗರದಲ್ಲಿ ಎರಡು ಶಾಸನಗಳು ಪತ್ತೆ

Two inscriptions found in Gangavathi city

ಗಂಗಾವತಿ ನಗರದ ಪಂಪಾನಗರ ಮತ್ತು ವಿರೂಪಾಪುರಗಳಲ್ಲಿ ಎರಡು ಶಾಸನಗಳು ಪತ್ತೆಯಾಗಿದೆ.

ಈ ಶಾಸನಗಳನ್ನು ಇತಿಹಾಸ ಸಂಶೋಧಕ ಡಾ. ಶರಣಬಸಪ್ಪ ಕೋಲ್ಕಾರ್ ಪತ್ತೆ ಹಚ್ಚಿದ್ದಾರೆ .ಮೊದಲ ಶಾಸನ ಪಂಪಾನಗರದ ಬೆಟ್ಟಕ್ಕೆ ಹೊಂದಿಕೊಂಡಿರುವ ಪಠಾಣರ ಖಬರಸ್ಥಾನದ ವ್ಯಾಪ್ತಿಯಲ್ಲಿರುವ ಹುಟ್ಟು ಬಂಡೆಯ ಮೇಲೆ ಮೂರು ಸಾಲುಗಳಲ್ಲಿ ಬರೆಯಲಾಗಿದೆ .ಮೇಲ್ಭಾಗದಲ್ಲಿ ಸೂರ್ಯ ,ಚಂದ್ರ ಮತ್ತು ಶಿವಲಿಂಗದ ಚಿತ್ರಗಳಿವೆ .ಶಾಸನದ ಪಾಠ ಶುದ್ಧವಾಗಿಲ್ಲ. ಶಾಸನ ಪಾಠವನ್ನು “ಶ್ರೀ ಗೊಂಗಡಯ್ಯನ ಮನೆ ಮಣುಪ ಕಾಳಗಿ ಕೊಂಡ ಕೊಂಡ ಪಾದಕ್ಕೆ ಅರುಹಿ ಕೊಂಡದು” ಎಂದು ಸಂಗ್ರಹಿಸಬಹುದು.

ಈ ಶಾಸನದಿಂದ ಅನತಿ ದೂರದಲ್ಲಿರುವ ಮತ್ತೊಂದು ಗುಂಡಿನ ಮೇಲೆ” ಶ್ರೀ ವಿದೂರಾನಂದರ ಪಾದವು” ಮತ್ತು ” ಪಿನಿಬುಸಿ ಮಾಯಣ್ಣ”ಎಂಬ ಬರಹಗಳಿವೆ. ಈ ಗುಂಡಿನ ಮೇಲೆ ಕೊಂಡ ಕುಂದಾಚಾರ್ಯರ ಶಿಷ್ಯ ವಿಧೂರಾನಂದ ಪಾದಗಳ ಚಿತ್ರಗಳನ್ನು ಕೆತ್ತಲಾಗಿದೆ .ಈ ಶಾಸನದಿಂದ ನೇರವಾಗಿ ಬೆಟ್ಟದ ಮಧ್ಯಭಾಗದ ಒಂದು ಗವಿಯಲ್ಲಿ ಜೈನ ಶೀಥಲನಾಥ ತೀರ್ಥಂಕರರ ,ಯಕ್ಷಿಯ ಮತ್ತು ಅಶ್ವ ಸವಾರಿ ಅರಸನ ಶಿಲ್ಪಗಳಿವೆ .ಈ ಶಿಲ್ಪ ಮತ್ತು ಶಾಸನಗಳನ್ನು ಅನುಲಕ್ಷಿಸಿ ಇವು ಜೈನ ಧರ್ಮಕ್ಕೆ ಸಂಬಂಧಿಸಿದ ವೆಂದು ಸ್ಪಷ್ಟವಾಗುತ್ತದೆ. ಪ್ರಸ್ತುತ ಶಾಸನವು ಗೊಂಗಡಯ್ಯ ಎಂಬ ಭಕ್ತನ ಮನೆಗೆ ಕೊಂಡಕುಂದಾ ಎಂಬ ಜೈನ ಯತಿಗಳು ಪಾದ ವಿರಿಸಲು ( ಆಗಮಿಸಲು) ಅರುಹಿಕೊಂಡ ಸಂಗತಿಯನ್ನು ವಿವರಿಸುತ್ತದೆ. ಕೊಂಡ ಕುಂದಾಚಾರ್ಯ, ವಿಧೂರಾನಂದರು ಎಂಬ ಜೈನ ಯತಿಗಳು ಶಿಲ್ಪಗಳಿರುವ ಗವಿಯಲ್ಲಿ ಧ್ಯಾನಸ್ಥರಾಗಿರಬಹುದು ಇಲ್ಲವೇ ಸಲ್ಲೇಖನ ವ್ರತವನ್ನ ಆಚರಿಸಿರಬಹುದಾದ ಸಾಧ್ಯತೆ ಇದೆ. ಶಾಸನದ ಅಕ್ಷರಗಳ ಶೈಲಿ ಯಿಂದ ಇದು ಹದಿನೈದನೇ ಶತಮಾನಕ್ಕೆ ಸೇರುತ್ತದೆ. ಎರಡನೇ ಶಾಸನವು ವಿರುಪಾಪುರನಗರದ ಕೃಷ್ಣ ನಾಯಕ್ ಎಂಬವರ ಮನೆಯ ಹಿಂಬದಿಯಲ್ಲಿ ಹುಟ್ಟು ಬಂಡೆಯಲ್ಲಿ ನಾಲ್ಕು ಸಾಲುಗಳಲ್ಲಿ ಕೆತ್ತಲಾಗಿದೆ. ಶಾಸನದ ಮೇಲ್ಭಾಗದಲ್ಲಿ ಸೂರ್ಯ, ಚಂದ್ರ ಮತ್ತು ಶಿವಲಿಂಗದ ಕೆತ್ತನೆಗಳಿವೆ. ಶಾಸನದ ಅಕ್ಷರಗಳು ಅಲ್ಲಲ್ಲಿ ಸವೆದಿವೆ. ಹಾಗಾಗಿ ಪೂರ್ಣ ವಿಷಯವನ್ನು ಗ್ರಹಿಸಲು ಸಾಧ್ಯವಾಗುವುದಿಲ್ಲ. ಇರುವ ವಿಷಯವನ್ನು ಗ್ರಹಿಸಿ ಶ್ರೀ ಪೌಢದೇವಪ್ಪ ನಾಯಕರು ವಿರೂಪಾಪುರದಲ್ಲಿ ಯಾವುದೋ ದೇವರಿಗೆ ಗದ್ದೆಯನ್ನು ದಾನವಾಗಿ ನೀಡಿದ ವಿಷಯವನ್ನು ತಿಳಿಸುತ್ತದೆ. ಈ ಶಾಸನವೂ ಕೂಡ ಹದಿನಾರನೇ ಶತಮಾನಕ್ಕೆ ಸಂಬಂಧಿಸಿದೆ. ಗಂಗಾವತಿಯಲ್ಲಿ ಈಗಾಗಲೇ ಮಳೆ ಮಲ್ಲೇಶ್ವರ ಬೆಟ್ಟದ ಹಿಂಬದಿಯ ಒಂದು ಚಿಕ್ಕ ಗುಂಡಿನ ಮೇಲೆ 5 ಸಾಲುಗಳ ಶಾಸನವು ದೊರೆತಿದ್ದು ,ಅದರ ಜೊತೆಗೆ ಇವೆರಡು ಹೊಸ ಸೇರ್ಪಡೆಯಾಗಿವೆ .ಒಟ್ಟಿನಲ್ಲಿ ಗಂಗಾವತಿಯ15 ಮತ್ತು16ನೇ ಶತಮಾನದ ಇತಿಹಾಸವನ್ನು ತಿಳಿದುಕೊಳ್ಳಲು ಈ ಶಾಸನಗಳು ಸಹಾಯಕವಾಗಿದ್ದು ಇವುಗಳ ಕುರಿತು ಹೆಚ್ಚಿನ ಅಧ್ಯಯನ ಮಾಡಲಾಗುವುದೆಂದು ಎಂದು ಡಾ. ಕೋಲ್ಕಾರ್ ತಿಳಿಸಿದ್ದಾರೆ ಶಾಸನಗಳ ಶೋಧನೆಯಲ್ಲಿ ದಿವಂಗತ ಸೋಮಪ್ಪ ಯಲಬುರ್ಗಿ, ಬಸವರಾಜ್ ಮ್ಯಾಗಳಮನಿ, ಲಕ್ಷ್ಮಣ್ ಗೌಡ ,ಪೀರಮ್ಮ ಭೀಮಣ್ಣ ನಾಯ್ಕ್ ಸಹಕರಿಸಿದ್ದಾರೆಂದು ಅವರು ತಿಳಿಸಿರುವರು

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

15 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

16 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

16 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

16 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

16 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

16 hours ago