ಕಲ್ಯಾಣಸಿರಿ ವಿಶೇಷ

ಪೋಷಣ್ ಮಾಸಾಚರಣೆ ಅಂಗವಾಗಿ ತಾಯಿ ಹೆಸರಲ್ಲಿ ಗಿಡ ನೆಡುವ ಕಾರ್ಯಕ್ರಮ

Planting program in the name of mother as part of Poshan month celebrations

ಕೊಪ್ಪಳ ಸೆಪ್ಟೆಂಬರ್ 12, (ಕರ್ನಾಟಕ ವಾರ್ತೆ): ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ, ಮಹಿಳಾ ವiತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಾರ್ಯಾಲಯ, ಕೊಪ್ಪಳ ಇವರ ಸಂಯುಕ್ತಾಶ್ರದಲ್ಲಿ ಶುಕ್ರವಾರದಂದು ಕೊಪ್ಪಳ ಯೋಜನೆಯ ವದಗನಾಳ 1ನೇ ಅಂಗನವಾಡಿ ಕೇಂದ್ರದಲ್ಲಿ 8 ನೇ ರಾಷ್ಟಿçÃಯ ಪೋಷಣ್ ಮಾಸಾಚರಣೆಯ ಅಂಗವಾಗಿ ತಾಯಿಯ ಹೆಸರಿನಲ್ಲಿ ಒಂದು ಗಿಡ ನೆಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಮಹಾಂತೇಶ ದರಗದ ಅವರು ಪ್ರತಿ ವರ್ಷ ಪೋಷಣ್ ಮಾಸಾಚರಣೆ ಕಾರ್ಯಕ್ರವನ್ನು ಪ್ರತಿ ಅಂಗನವಾಡಿ ಕೇಂದ್ರಗಳಲ್ಲಿ ಮಾಹೆವಾರು ಮಾಡುವರು. ಕಾರ್ಯಕ್ರಮದ ಉದ್ದೇಶ ಪೌಷ್ಠಿಕ ಆಹಾರ ಸೇವನೆ ಮುಖ್ಯ ಎಂಬುದರ ಕುರಿತು ಜಾಗೃತಿ ಮೂಡಿಸುವುದು. ದೇಹದ ಸರ್ವಾಂಗೀಣ ಅಭಿವೃದ್ಧಿಗೆ ಪೌಷ್ಟಿಕ ಆಹಾರ ಸೇವನೆ ತುಂಬಾ ಮುಖ್ಯ. ಆಹಾರದಲ್ಲಿ ವೈವಿಧ್ಯತೆ ಕಂಡುಕೊಳ್ಳಿ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರಾದ ಪರಶುರಾಮ ಶೆಟ್ಟೆಪ್ಪನವರ, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಾದ ರೋಹಿಣಿ ಕೋಟಗಾರ, ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಾದ ಶಿವಶರಣಪ್ಪ ಗದ್ದಿ, ಶಾಲಾ ಮುಖ್ಯೋಪಾಧ್ಯಾಯರು, ಗ್ರಾಮ ಪಂಚಾಯತಿ ಸದಸ್ಯರು, ಗರ್ಭಿಣಿ, ಬಾಣಂತಿಯರು, ವಲಯದ ಮೇಲ್ವಿಚಾರಕಿಯರು, ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು, ಆಶಾ ಕಾರ್ಯಕರ್ತೆಯರು ಹಾಜರಿದ್ದರು.

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

16 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

16 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

16 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

16 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

17 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

17 hours ago