ಮಾದಪ್ಪನ ಪುರಾಣ ಸಹಿತ ಸಂಕ್ಷಿಪ್ತ ಮಾಹಿತಿಯ ಕೃತಿ ಪುಸ್ತಕ ಬಿಡುಗಡೆಗೆ ಸಿದ್ದ : ವಿರಪ್ಪ ಮಾಸ್ಟರ್

A brief informational work on Madappa's Purana is ready for book release : Virappa Master

ವರದಿ :ಬಂಗಾರಪ್ಪ .ಸಿ .

ಹನೂರು : ಅಪ್ಪಟ ಗ್ರಾಮೀಣ ಪ್ರತಿಭಾವಂತ ವಿದ್ಯಾರ್ಥಿಯಾಗಿ ಮಕ್ಕಳಿಗೆ ತಕ್ಕ ಶಿಕ್ಷಕರಾಗಿ ,ಒಡನಾಡಿಗಳಿಗೆ ಬಂದುಗಳಾಗಿ , ಹಿತೈಷಿಗಳಿಗೆ ಮಾರ್ಗದರ್ಶಕರಾಗಿ ಬೆಳೆಯುತ್ತಿರುವ ಮಾದಪ್ಪ ಸನ್ನಿದಾನದಲ್ಲಿ ಸೇರಿದಂತೆ ಹನೂರು ತಾಲೂಕಿನ ಹಲವೆಡೆ ಕಾರ್ಯನಿರ್ವಹಿಸುವ ಮೂಲಕ ಅನೇಕ ಶಾಲೆಗಳನ್ನು ಅಭಿವೃದ್ಧಿ ಹೊಂದುವಂತೆ ಮಾಡಿದ ಕೀರ್ತಿ ಇವರಿಗೆ ಸಲ್ಲುತ್ತದೆ . ಇವರ ಬಹು ಬೇಡಿಕೆಯ ಕೃತಿಯು ಇದೆ ತಿಂಗಳ 15 ರಂದು ಶ್ರೀ ಮಲೆ ಮಹದೇಶ್ವರ ಸ್ವಾಮಿ ಪುರಾಣ ಪುಸ್ತಕ ಬಿಡುಗಡೆ ಸಮಾರಂಭ ನಡೆಯುತ್ತದೆ .
ಹನೂರು ತಾಲೂಕಿನ ಶ್ರೀ ಮಲೆ ಮಹದೇಶ್ವರ ಬೆಟ್ಟದಲ್ಲಿ ಇದೆ ಸೆಂಪ್ಟೆಂಬರ್15 ರಂದು ಸಾಲೂರು ಬೃಹನ್ಮಠದಲ್ಲಿ ಪೀಠಾಧಿಪತಿ ಡಾ.ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ಸಾನ್ನಿಧ್ಯದಲ್ಲಿ “ಉಘೇ ಮಾದಪ್ಪ” ಕೃತಿ ಬಿಡುಗಡೆ ಸಮಾರಂಭ ಕಾರ್ಯಕ್ರಮ ನಡೆಯಲಿದೆ.

ಶಿಕ್ಷಕರಾದ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ವಿ. ವೀರಪ್ಪ ಅವರು ಉಘ ಮಾದಪ್ಪ ಶೀರ್ಷಿಕೆಯಡಿ ಶ್ರೀ ಮಲೆಮಹದೇಶ್ವರ ಬೆಟ್ಟದ ಮಾಹಿತಿಯನ್ನು ಒಳಗೊಂಡ ಸ್ಥಳ ಪುರಾಣ ಒಳಗೊಂಡ “ಉಘೇ ಮಾದಪ್ಪ” ಪುಸ್ತಕವನ್ನು ಬಿಡುಗಡೆ ಮಾಡುವ ಕಾರ್ಯ ಹಮ್ಮಿಕೊಳ್ಳಲಾಗಿದೆ.

ಹನೂರು ಶಿಕ್ಷಣ ವಲಯದ ಬಸಪ್ಪನದೊಡ್ಡಿ ಉನ್ನತೀಕರಿಸಿದ ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕರಾದ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ವಿ. ವೀರಪ್ಪ ಅವರು ಉಘೇ ಮಾದಪ್ಪ ಶೀರ್ಷಿಕೆಯಡಿ ಶ್ರೀ ಮಲೆಮಹದೇಶ್ವರ ಬೆಟ್ಟದ ಮಾಹಿತಿಯನ್ನು ಒಳಗೊಂಡ ಸ್ಥಳ ಪುರಾಣ ಪುಸ್ತಕವನ್ನು ಹೊರ ತಂದಿದ್ದಾರೆ.

ತಾಲೂಕಿನ ಶಾಗ್ಯ ಗ್ರಾಮದ ಶಿವರುದ್ರಮ್ಮ ಮತ್ತು ವಿರೂಪಾಕ್ಷಪ್ಪ ದಂಪತಿ ಪುತ್ರರಾದ ವಿ.ವೀರಪ್ಪರವರು 1970ರಲ್ಲಿ ಜನಿಸಿದರು.

ಮಲೆ ಮಹದೇಶ್ವರ ಬೆಟ್ಟದಲ್ಲಿ ವಾಸವಾಗಿದ್ದ ವೀರಪ್ಪ ಮಾಸ್ಟರ್ ಅವರು ಪ್ರಾಥಮಿಕ ಶಾಲೆಯಿಂದ ಪ್ರೌಢ ಶಿಕ್ಷಣದವರೆಗೂ ಸಾಲೂರು ಮಠದ ಶ್ರೀ ಮಹದೇಶ್ವರ ಶಾಲೆಯಲ್ಲೇ ಕಲಿತರು. ಮೈಸೂರಿನಲ್ಲಿ ಟಿ.ಸಿ.ಎಚ್‌ ತರಬೇತಿ ಪಡೆದು 1992ರಲ್ಲಿ ಶಿಕ್ಷಕ ವೃತ್ತಿ ಸೇವೆಗೆ ಸೇರಿದರು.

ಕರ್ನಾಟಕ ಗಡಿ ಗ್ರಾಮ ಗೋಪಿನಾಥಂ ಸರ್ಕಾರಿ ಹಿರಿಯ ಶಾಲೆಯಲ್ಲಿ 6 ವರ್ಷ, ಆಣೆಹೊಲ ಶಾಲೆಯಲ್ಲಿ 6 ವರ್ಷ, ಗೊರಸಾಣೆ ಸ.ಕಿ.ಪ್ರಾ ಶಾಲೆಯಲ್ಲಿ 14 ವರ್ಷ ಶಿಕ್ಷಕರಾಗಿ ಹಾಗೂ ತುಳಸಿಕೆರೆ ಶಾಲೆಯಲ್ಲಿ ಪ್ರಭಾರ ಮುಖ್ಯ ಶಿಕ್ಷಕರಾಗಿ 2 ವರ್ಷ, ಮೆದಗನಾಣೆ ಶಾಲೆಯಲ್ಲಿ 1 ವರ್ಷ ಸೇವೆ ಸಲ್ಲಿಸಿದ್ದಾರೆ.

ಮುಖ್ಯ ಶಿಕ್ಷಕರಾಗಿ ಬಡ್ತಿ ಹೊಂದಿದ ಬಳಿಕ ಮತ್ತೆ ಗೋಪಿನಾಥಂ ಸ.ಹಿ.ಪ್ರಾ. ಶಾಲೆಯಲ್ಲಿ 4 ವರ್ಷ ಕರ್ತವ್ಯ ನಿರ್ವಹಿಸಿರುವ ಇವರು ಪ್ರಸ್ತುತ ಬಸಪ್ಪನದೊಡ್ಡಿ ಶಾಲೆಯಲ್ಲಿ ಕಳೆದ 2 ವರ್ಷದಿಂದ ಮುಖ್ಯ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ತಾಲೂಕಿನ ಮ.ಬೆಟ್ಟದ ಭಾಗದ ಗುಡ್ಡಗಾಡು ಪ್ರದೇಶದ ಸರ್ಕಾರಿ ಶಾಲೆಗಳಲ್ಲಿ ಅನೇಕ ಸವಾಲುಗಳನ್ನು ಎದುರಿಸಿ 32 ವರ್ಷ ಸೇವೆ ಸಲ್ಲಿಸಿದ ಇವರ ಸೇವಾ ಕಾರ್ಯವನ್ನು ಗುರುತಿಸಿ 2023ರಲ್ಲಿ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಹಾಗೂ ಕೆ.ಪಿ.ಚಿಕ್ಕವೀರಯ್ಯ ಶಿಕ್ಷಕ ಪ್ರಶಸ್ತಿ ಪಡೆದುಕೊಂಡಿದ್ದಾರೆ.

ಶ್ರೀ ಮಹದೇಶ್ವರ ಬೆಟ್ಟ 144 ಪುಟಗಳ ಶ್ರೀ ಕ್ಷೇತ್ರದ ಸ್ಥಳ ಪುರಾಣದ ಮಾಹಿತಿಯನ್ನು ಬಿಂಬಿಸುವ ಪುಸ್ತಕವನ್ನು ಹೊರ ತಂದಿರುವುದು ಭಕ್ತರು ಹಾಗೂ ಜನರಿಗೆ ಉತ್ತಮ ಮಾಹಿತಿಯುಳ್ಳ ಪುಸ್ತಕವಾಗಿದೆ.

ಶ್ರೀ ಮಲೆಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ರಚನೆ, ಮಾದಪ್ಪನ ಸನ್ನಿಧಿಯ ವಾಸ್ತವಿಕತೆ, ಪೌರಾಣಿಕ ಹಿನ್ನೆಲೆ, ಮರಿದೇವರ ಜನನ ಮತ್ತು ಬೆಳವಣಿಗೆ, ಶ್ರೀ ಸಾಲೂರು ಬೃಹನ್ಮಠ, ಶ್ರೀ ಕ್ಷೇತ್ರದಲ್ಲಿ ಜರುಗುವ ಹರಕೆ ಮತ್ತು ಸೇವೆಗಳು, ಕ್ಷೇತ್ರದಲ್ಲಿ ನಡೆದಿರುವ ಅಭಿವೃದ್ಧಿ ಕಾರ್ಯಗಳು, ವಸತಿ ಗೃಹಗಳ ಮಾಹಿತಿಗಳು ಇವೆ.

ಶ್ರೀ ಕ್ಷೇತ್ರದಲ್ಲಿ ಪೂಜನೀಯ ಸ್ಥಳಗಳು, ಆಲಂಬಾಡಿ ಗ್ರಾಮದ ಹಿನ್ನೆಲೆ, ಹೊಗೇನಕಲ್ ಜಲಪಾತ, ಪರಂಪರೆಯ ದೇವರ ಗುಡ್ಡರು, ಶ್ರೀ ಮಹದೇಶ್ವರರು ಸಂಚರಿಸಿದ ಎಪ್ಪತ್ತೇಳು ಮಲೆಗಳ ಸಂಪೂರ್ಣ ಮಾಹಿತಿಯಲ್ಲಿ ಒಳಗೊಂಡಿದೆ. ಜನಪದ ಗೀತೆಗಳು, ಕಂಸಾಳೆ ಹಾಡುಗಳನ್ನು ತಿಳಿಸಲಾಗಿದೆ.

ದೇಗುಲದ ಒಳಾಂಗಣ, ಹೊರಾಂಗಣ, ಶಿವ ಪಾರ್ವತಿಯ ಉತ್ಸವ ಮೂರ್ತಿ, ಅನ್ನ ಬ್ರಹೋತ್ಸವ, ಗುರು ಬ್ರಹೋತ್ಸವ, ಮಾದಪ್ಪನ ತಪ್ಪಲಿನ ದೇಗುಲಗಳು, ಮ.ಬೆಟ್ಟಕ್ಕೆ ಮೈಸೂರು ಮಹಾರಾಜರು ಭೇಟಿ ನೀಡಿ ಸಂದರ್ಭ, ಮೈಸೂರು ಮಹಾರಾಜರು ನೀಡಿದ ಕೊಡುಗೆಗಳ ಉಪಯುಕ್ತ ಮಾಹಿತಿಯ ಪುಸ್ತಕವಾಗಿದೆ ಎಂದು ಕವಿಗಳಾದ ವಿರಪ್ಪ ಮಾಸ್ಟರ್ ತಿಳಿಸಿದ್ದಾರೆ.
ಇವರ ಕೃತಿಗಳು ಹೆಚ್ಚಿನ ಮಟ್ಟದಲ್ಲಿ ಎಲ್ಲಾರಿಗೂ ತಲುಪುವಂತಾಗಲಿ ಎಂದು ಕರ್ನಾಟಕ ಮಾದ್ಯಮ ಪತ್ರಕರ್ತರ ಸಂಘದ ರಾಜ್ಯ ಸಂಘದ ಪ್ರಧಾನ ಕಾರ್ಯದರ್ಶಿಗಳು ಹಾಗೂ ಹನೂರು ತಾಲ್ಲೂಕು ಘಟಕದ ಅಧ್ಯಕ್ಷರಾದ ಬಂಗಾರಪ್ಪ .ಸಿ ಶುಭ ಕೋರಿದರು .

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

10 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

10 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

10 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

10 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

10 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

10 hours ago