CM requested to take action against student's parents for assault on school teacher ಬೆಂಗಳೂರು; ಕೋಲಾರ ಜಿಲ್ಲೆ, ಬಂಗಾರಪೇಟೆಯ ಶಾಲಾ ಶಿಕ್ಷಕಿ ಮಂಜುಳರವರ ಮೇಲೆ ಶಾಲೆಯ ವಿದ್ಯಾರ್ಥಿಯ ಪೋಷಕರು ವಿನಾಕರಣ ಮಾರಣಂತಿಕ ಹಲ್ಲೆ, ಅವಾಚ್ಯ ಶಬ್ಧಗಳಿಂದ ನಿಂದನೆ ಮಾಡಿದ್ದಾರೆ ಈ ಘಟನೆಯನ್ನು ಖಂಡಿಸಿ ಕರ್ನಾಟಕ ಸರ್ಕಾರ ಮಹಿಳಾ ನೌಕರರ ಸಂಘದ ಅಧ್ಯಕ್ಷೆ ರೋಶನಿಗೌಡರವರು, ಸಲಹೆಗಾರರಾದ ಸುಜಾತ, ಸಂಘಟನಾ ಕಾರ್ಯದರ್ಶಿ ಮಲ್ಲಿಕಾರವರು ಸಂಘದ ಪದಾಧಿಕಾರಿಗಳು, ಸದಸ್ಯರುಗಳು ಭೇಟಿ ನೀಡಿ, ಹಲ್ಲೆಯಾದ ಮಹಿಳೆಗೆ ಧೈರ್ಯ ತುಂಬಿ, ಸ್ವಾಂತನ ಹೇಳಿದರು.
ಇದೇ ಸಂದರ್ಭದಲ್ಲಿ ರೋಶನಿಗೌಡರವರು ಮಾತನಾಡಿ ಶಿಕ್ಷಕರು ಎಂದರೆ ದೇವರ ಸಮಾನ ಎಂದು ಭಾವಿಸುವ ನಾವೆಲ್ಲ, ಮಹಿಳೆಯರು ಮೇಲೆ ಹಲ್ಲೆ, ದೌರ್ಜನ್ಯ ನೋಡಿದರೆ ಇಡಿ ನಾಗರಿಕ ಸಮಾಜ ತಲೆ ತಗ್ಗಿಸುವಂತಾಗಿದೆ.
ವಿದ್ಯಾರ್ಥಿ ಪಾಠ ಹೇಳಿಕೊಡುವ ಅಮಾಯಕಿ ಶಿಕ್ಷಕಿ ಮಂಜುಳರವರು ಅವಾಚ್ಯ ಶಬ್ದ ಬಳಕೆ ಮಾಡಿ, ಹಲ್ಲೆ ಮಾಡಿರುವುದನ್ನ ನಮ್ಮ ಸಂಘ ಖಂಡನೆ ವ್ಯಕ್ತಪಡಿಸುತ್ತದೆ.
ಪೊಲೀಸ್ ಇಲಾಖೆ ಕೊಡಲೆ ಅರೋಪಿಗಳನ್ನು ಬಂಧಿಸಬೇಕು ಇಲ್ಲದೇ ಹೋದರೆ ಜಿಲ್ಲಾಧಿಕಾರಿಗಳ ಕಛೇರಿ ಮುಂದೆ ಪ್ರತಿಭಟನೆ ಮಾಡಲಾಗುವುದು.
ಸರ್ಕಾರಿ ನೌಕರರು ಆಗಿರಬಹುದು ಅಥವಾ ಬೇರೆ ಇಲಾಖೆ ಮಹಿಳಾ ನೌಕರರು ಆಗಿರಬಹುದು ಮಹಿಳೆಯರು ಮೇಲಿನ ಹಲ್ಲೆಯನ್ನು ಖಂಡಿಸುತ್ತೇವೆ. ಮುಖ್ಯಮಂತ್ರಿಗಳು ಕೊಡಲಿ ಮಧ್ಯ ಪ್ರವೇಶಮಾಡಿ ಕ್ರಮ ಕೈಗೊಳ್ಳಬೇಕು ಮಹಿಳಾ ನೌಕರರಿಗೆ ರಕ್ಷಣೆ ನೀಡಬೇಕು ಎಂದು ಮನವಿ ಸಲ್ಲಿಸಿದರು.
ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…
ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…
ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…
ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್ ನಲ್ಲಿ…
ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…
ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…